ಉಡುಪಿಗೆ ಹೊಸ ಉಪ ವಿಭಾಗ ಕಚೇರಿ: ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ


Team Udayavani, Jun 12, 2019, 6:10 AM IST

udupi

ಉಡುಪಿ: ಜಿಲ್ಲೆಯ ಏಕೈಕ ಕುಂದಾಪುರ ಉಪವಿಭಾಗಕ್ಕೆ ಏಳು ತಾಲ್ಲೂಕುಗಳಿಂದ ಭಾರೀ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದೊಂದಿಗೆ ಆಡಳಿತಾತ್ಮಕವಾಗಿ ಎರಡು ಉಪವಿಭಾಗ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೊಸ ಉಪವಿಭಾಗ ರಚನೆ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಸ್ವಾತಂತ್ರ್ಯ ಪೂರ್ವದ ಉಪವಿಭಾಗ
ಕುಂದಾಪುರ ಉಪವಿಭಾಗ ಸ್ವಾತಂತ್ರ್ಯ ಪೂರ್ವದಿಂದಲೂ ಅಸ್ತಿತ್ವದಲ್ಲಿದ್ದ ಆಡಳಿತಾತ್ಮಕ ಉಪವಿಭಾಗವಾಗಿದೆ. ಬ್ರಿಟಿಷರ ಆಡಳಿತ ಸಮಯದಲ್ಲಿ ಕುಂದಾಪುರ ತಾಲೂಕು ಉ.ಕ. ಜಿಲ್ಲೆ ವ್ಯಾಪ್ತಿಯಲ್ಲಿತ್ತು. ಆ ಸಂದರ್ಭ ಉ.ಕ., ದ.ಕ. ಒಂದೇ ಜಿಲ್ಲೆಯಾಗಿ ಮದ್ರಾಸ್‌ ಪ್ರಾಂತ್ಯಕ್ಕೆ ಒಳಪಟ್ಟಿತ್ತು. 1862ರಲ್ಲಿ ದ.ಕ. ಪ್ರತ್ಯೇಕ ಜಿಲ್ಲೆಯಾಗಿ ಮದ್ರಾಸ್‌ ಪ್ರಾಂತ್ಯದಲ್ಲಿ ಉಳಿದಿತ್ತು. ಆ ಸಂದರ್ಭ ಕುಂದಾಪುರ ತಾಲೂಕು ದ.ಕ. ಜಿಲ್ಲೆಗೆ ಸೇರ್ಪಡೆಯಾಗಿತ್ತು.

1927ರಲ್ಲಿ ಸಹಾಯಕ ಕಮಿಷನರ್‌ ನೇಮಕ!
ದ.ಕ. ಜಿಲ್ಲೆಯ ಕಂದಾಯ ಆಡಳಿತ ಅನುಕೂಲಕ್ಕಾಗಿ 1927ರ ಪೂರ್ವ ಜಿಲ್ಲೆಯನ್ನು ಪುತ್ತೂರು, ಮಂಗಳೂರು, ಕುಂದಾಪುರ ಉಪವಿಭಾಗಳಾಗಿ ವಿಂಗಡಿಸಲಾಯಿತು. ಕುಂದಾಪುರ ಉಪವಿಭಾಗಕ್ಕೆ ಕುಂದಾಪುರ, ಉಡುಪಿ, ಕಾರ್ಕಳ ಜತೆ ಸೇರಿಸಿ ಸಹಾಯಕ ಕಮಿಷನರ್‌ ನೇಮಿಸಲಾಗಿತ್ತು.

ಜಿಲ್ಲೆಯಾದ ಬಳಿಕ ಪ್ರಥಮ ಪ್ರಸ್ತಾವ
1997 ಆಗಸ್ಟ್‌ 25ರಂದು ಉಡುಪಿ ಜಿಲ್ಲೆ ರಚನೆಯಾಗಿತ್ತು. ಆ ಸಂದರ್ಭ ಕುಂದಾಪುರ ಉಪವಿಭಾಗ ಉಡುಪಿ ಜಿಲ್ಲೆಯ ವ್ಯಾಪ್ತಿಗೆ ಸೇರ್ಪಡೆಯಾಗಿತ್ತು. ಇದೀಗ 22 ವರ್ಷಗಳ ಬಳಿಕ ಜಿಲ್ಲೆಯಿಂದ ಹೊಸ ಉಪವಿಭಾಗ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಒಂದು ಉಡುಪಿ ನಗರಸಭೆ ಅಧಿವೇಶನದಲ್ಲಿ ಕುಂದಾಪುರ ಉಪವಿಭಾಗೀಯ ಕಚೇರಿಯನ್ನು ಉಡುಪಿಗೆ ಸ್ಥಳಾಂತರಿಸಬೇಕೆಂಬ ನಿರ್ಣಯವಾಗಿತ್ತು. ಬಳಿಕ ಅಲ್ಲಿಯೇ ಬಿದ್ದು ಹೋಯಿತು. ಈಗಿನ ಬೇಡಿಕೆ ಕುಂದಾಪುರದ ಜತೆಗೆ ಉಡುಪಿಗೆ ಪ್ರತ್ಯೇಕ ಉಪವಿಭಾಗ.

ಅತ್ಯಧಿಕ ಕಡತ ವಿಲೇವಾರಿ ಬಾಕಿ
ಇಡೀ ರಾಜ್ಯದಲ್ಲಿ ಕುಂದಾಪುರ ಎಸಿ ಕೋರ್ಟ್‌ ನಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳು ಇತ್ಯರ್ಥ ಬಾಕಿಯಿವೆ. ವರ್ಷಕ್ಕೆ ಸರಾಸರಿ 4,55,876 ಅರ್ಜಿಗಳು ಸ್ವೀಕೃತವಾಗುತ್ತಿದ್ದು, ಕಾರ್ಯ ದೊತ್ತಡದಿಂದ ಎಲ್ಲ ಕಡತಗಳು ವಿಲೇವಾರಿ ಯಾಗುತ್ತಿಲ್ಲ. ಜಿಲ್ಲೆಗೆ ಒಂದೇ ಉಪವಿಭಾಗ ಇರುವುದರಿಂದ ಕಡತಗಳ ವಿಲೇವಾರಿ ನಿಧಾನವಾಗುತ್ತಿದೆ.

ಉಪ ವಿಭಾಗದ ಕಾರ್ಯ
7 ತಾಲೂಕುಗಳ ಖಾತಾ ಬದಲಾವಣೆ ತಿದ್ದುಪಡಿ ಸಂಬಂಧಿಸಿದ ಮೇಲ್ಮನವಿ ಪ್ರಾಧಿಕಾರ ಉಪವಿಭಾಗದ್ದಾಗಿರುತ್ತದೆ. ಜಾಗದ ನಕ್ಷೆ ಹಾಗೂ ಆರ್‌ಟಿಸಿ ತಾಳೆಯಾಗದ ಪ್ರಕರಣಗಳ ವಿಚಾರಣೆ, ಸಣ್ಣಪುಟ್ಟ ತಿದ್ದುಪಡಿಯಾದ ಪಹಣಿಗೆ ಅವರೇ ಎಸಿ ಅನುಮೋದನೆ ಮಾಡಬೇಕಾಗಿದೆ. ಅಲ್ಲದೇ ರಾಜ್ಯ, ಕೇಂದ್ರ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಜಿಲ್ಲೆಯ ಭೂಸ್ವಾಧೀನ ಕೆಲಸ ಸೇರಿದಂತೆ ವಿವಿಧ ಕೆಲಸಗಳ ಜವಾಬ್ದಾರಿ ಉಪವಿಭಾಗದ ಸಹಾಯಕ ಕಮಿಷನರ್‌ ಮೇಲಿದೆ.

ಶೀಘ್ರ ವಿಲೇವಾರಿ
ಕುಂದಾಪುರ ಉಪ ವಿಭಾಗಕ್ಕೆ ಏಳು ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಕೆಲಸದ ಒತ್ತಡದಿಂದ ಸರಿಯಾದ ಸಮಯಕ್ಕೆ ವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ. ಹೊಸ ಉಪ ವಿಭಾಗವಾದರೆ ಮುಂದಿನ ದಿನದಲ್ಲಿ ಕಡತಗಳು ಶೀಘ್ರವಾಗಿ ವಿಲೇವಾರಿಯಾಗಲಿವೆೆ.
-ಡಾ| ಎಸ್‌.ಎಸ್‌. ಮಧುಕೇಶ್ವರ್‌, ಸಹಾಯಕ ಕಮಿಷನರ್‌, ಉಪ ವಿಭಾಗ ಕುಂದಾಪುರ

ಒಂದು ದಿನ ಮೀಸಲಿಡಬೇಕು
ಜನರು ಕುಂದಾಪುರದಲ್ಲಿ ಇರುವ ಉಪವಿಭಾಗ ಕಚೇರಿಯ ನಿಮಿತ್ತ ತೆರಳಬೇಕಾದರೆ ಒಂದು ದಿನ ಮೀಸಲಿಡಬೇಕು. ಕುಂದಾಪುರಕ್ಕೆ ತೆರಳಬೇಕಾದರೆ ಕಾರ್ಕಳದವರು 69 ಕಿ.ಮೀ., ಉಡುಪಿಯವರು 38 ಕಿ.ಮೀ., ಕಾಪುವಿನವರು 51 ಕಿ.ಮೀ., ಹೆಬ್ರಿಯವರು 55 ಕಿ.ಮೀ. ಕ್ರಮಿಸಬೇಕಾಗುತ್ತದೆ.

3 ತಾ| ಸೇರ್ಪಡೆ ಸಾಧ್ಯತೆ
ಉಡುಪಿಯಲ್ಲಿ 10 ಕೋ.ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧದಲ್ಲಿ ಹೊಸ ಉಪವಿಭಾಗ ಪ್ರಾರಂಭಿಸುವ ಚಿಂತನೆಯಿದೆ. ಈ ಉಪವಿಭಾಗಕ್ಕೆ ಕಾಪು, ಕಾರ್ಕಳ, ಹೆಬ್ರಿ ತಾಲೂಕು ಸೇರಿಸುವ ಸಾಧ್ಯತೆಯಿದೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.