ಗಂಗೊಳ್ಳಿ ಬಂದರು ಅಭಿವೃದ್ಧಿಗೆ ಹೊಸ ಯೋಜನೆ ಸಿದ್ಧ


Team Udayavani, Sep 11, 2019, 5:28 AM IST

gangolli

ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಗಂಗೊಳ್ಳಿ ಕೂಡ ಒಂದು. ಆದರೆ ಕರಾವಳಿ ಜಿಲ್ಲೆಗಳ ಪೈಕಿಯೇ ಅತ್ಯಂತ ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ಬಂದರು ಕೂಡ ಹೌದು. ಕೊನೆಗೂ 10 ವರ್ಷಗಳ ಅನಂತರ ಬಂದರಿನ ಪುನರ್‌ ನಿರ್ಮಾಣಕ್ಕೆ ಯೋಜನೆಯೊಂದು ಸಿದ್ಧವಾಗಿದೆ.

ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ 12 ಕೋ.ರೂ. ವೆಚ್ಚದಲ್ಲಿ 405 ಮೀ. ಉದ್ದದ ಹೊಸ ‘ಫೈಲ್’ ಜೆಟ್ಟಿ ನಿರ್ಮಾಣ ಸಹಿತ ಇನ್ನಿತರ ಅಭಿವೃದ್ಧಿ ಕಾಮಗಾರಿ ಕುರಿತಂತೆ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಇಂಜಿನಿಯರ್‌ಗಳು ನೀಲಿ ನಕಾಶೆಯೊಂದನ್ನು ತಯಾರಿಸಿದ್ದಾರೆ.

ಈ ಬಂದರನ್ನು 10 ವರ್ಷಗಳ ಹಿಂದೆ ಸುಮಾರು 9.5 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿತ್ತು. ಆಗ 8.32 ಕೋ.ರೂ. ವೆಚ್ಚದಲ್ಲಿ ಜೆಟ್ಟಿ ನಿರ್ಮಾಣ ಹಾಗೂ ಒಟ್ಟು 9.5 ಕೋ.ರೂ. ವೆಚ್ಚದಲ್ಲಿ ಇನ್ನಿತರ ಕಾಮಗಾರಿಗಳನ್ನು ಮಾಡಲಾಗಿತ್ತು.

ಯಾಕೆ ಬೇಕು?

ಗಂಗೊಳ್ಳಿ ಬಂದರಿನಲ್ಲಿ 300ಕ್ಕೂ ಅಧಿಕ ಪರ್ಸಿನ್‌ ಬೋಟುಗಳು, 600ಕ್ಕೂ ಮಿಕ್ಕಿ ಮೀನು ಗಾರಿಕಾ ಬೋಟು ಹಾಗೂ 500ಕ್ಕೂ ಅಧಿಕ ನಾಡದೋಣಿಗಳಿದ್ದು, ಸಾವಿರಾರು ಮಂದಿ ಮೀನು ಗಾರಿಕಾ ವೃತ್ತಿಯನ್ನೇ ಅವಲಂಬಿಸಿದ್ದಾರೆ. ಕಳೆದ ವರ್ಷ ಇಲ್ಲಿನ ಬಂದರಿನ ಜೆಟ್ಟಿಯ ಸ್ಲ್ಯಾಬ್‌ ಕುಸಿದಿತ್ತು. ಆ ಕಾರಣಕ್ಕೆ ಇಡೀ ಕಟ್ಟಡವೇ ಕುಸಿಯುವ ಭೀತಿಯಿಂದ ಎರಡನೇ ಹರಾಜು ಪ್ರಾಂಗಣದ ವಠಾರದಲ್ಲಿ ಮೀನುಗಾರಿಕಾ ಚಟುವಟಿಕೆ ಹಾಗೂ ಜನಸಂಚಾರ ನಿರ್ಬಂಧಿಸಲಾಗಿದೆ. ಇದರಿಂದ ಈಗ ಬಂದರಿನಲ್ಲಿ ಬೋಟುಗಳನ್ನು ನಿಲ್ಲಿಸಲು ಸಮಸ್ಯೆಯಾಗುತ್ತಿದೆ. ಈ ಕಾರಣಕ್ಕೆ ಜೆಟ್ಟಿಯ ವಿಸ್ತರಣೆ ಅಥವಾ ಪುನರ್‌ ನಿರ್ಮಾಣ ಅಗತ್ಯವಾಗಿದೆ.

ಅನುಮೋದನೆ ಸಿಗಬೇಕಿದೆ

ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಇಂಜಿನಿಯರ್‌ಗಳು ಹೊಸ ಯೋಜನೆಯನ್ನು ಸಿದ್ಧಪಡಿಸಿ, ಮೀನುಗಾರಿಕಾ ಇಲಾಖೆಯ ನಿರ್ದೇಶಕರಿಗೆ ಸಲ್ಲಿಸಲಾಗಿದ್ದು, ಅದಕ್ಕೀಗ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಿಂದ ಅನುಮೋದನೆ ಸಿಗಬೇಕಿದೆ. ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗಂಗೊಳ್ಳಿ ಬಂದರು ಇರುವ ಕುಂದಾಪುರ ತಾಲೂಕಿನವರೇ ಆದ ಕಾರಣ ಇಲ್ಲಿನ ಬಂದರು ಅಭಿವೃದ್ಧಿಗೆ ಒತ್ತು ನೀಡಬಹುದು ಎನ್ನುವುದು ಇಲ್ಲಿನ ಮೀನುಗಾರರ ಆಶಾಭಾವನೆಯಾಗಿದೆ.

ನಿರಂತರ ವರದಿ

ಗಂಗೊಳ್ಳಿ ಬಂದರಿನಲ್ಲಿ ಮೀನುಗಾರರಿಗೆ ಆಗುತ್ತಿರುವ ಸಮಸ್ಯೆ, ಅಲ್ಲಿನ ಅವ್ಯವಸ್ಥೆ ಬಗ್ಗೆ ‘ಉದಯವಾಣಿ ಪತ್ರಿಕೆ’ಯು ನಿರಂತರವಾಗಿ ವಿಶೇಷ ವರದಿಗಳನ್ನು ಪ್ರಕಟಿಸುವ ಮೂಲಕ ಗಮನಸೆಳೆದಿದೆ.

ಫೈಲ್ ಜೆಟ್ಟಿ ನಿರ್ಮಾಣ

ಹಿಂದೆ ನಿರ್ಮಿಸಿದ್ದ ಜೆಟ್ಟಿಯ ಸ್ಲ್ಯಾಬ್‌ ನೀರು ಅಪ್ಪಳಿಸಿ ಅಪ್ಪಳಿಸಿ ಕುಸಿದ ಕಾರಣ, ಮತ್ತೆ ಅಂತಹ ಜೆಟ್ಟಿ ಬೇಡವೆಂದು, ಹೊಸದಾಗಿ ಕಂಬ (ಪಿಲ್ಲರ್‌) ಗಳನ್ನು ನಿರ್ಮಿಸಿ ಅದರ ಮೇಲೆ ‘ಫೈಲ್ ಜೆಟ್ಟಿ’ ನಿರ್ಮಾಣ ಮಾಡಲಾಗುತ್ತದೆ. 3-4 ಮೀ.ಗೊಂದು ಪಿಲ್ಲರ್‌, 400 ಮೀ.ಗೆ ಸುಮಾರು 200 ಪಿಲ್ಲರ್‌ಗಳಿರುತ್ತವೆ. ಇದರಿಂದ ಸಮುದ್ರದ ನೀರು ಬಂದು ಅಡಿಪಾಯಕ್ಕೆ ಬಡಿದು ಕುಸಿಯುವ ಸಮಸ್ಯೆಯೇ ಇರುವುದರಿಂದ ಕಾಂಕ್ರೀಟ್ ಪಿಲ್ಲರ್‌ ಆಗಿರುವುದರಿಂದ ಬಲಶಾಲಿಯಾಗಿರುತ್ತದೆ.
– ಉದಯ ಕುಮಾರ್‌,ಸಹಾಯಕ ಎಂಜಿನಿಯರ್‌, ಮೀನುಗಾರಿಕೆ ಮತ್ತು ಬಂದರು ಇಲಾಖೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.