ಕ್ರೈಸ್ತ ಉದ್ಯಮಿ ಕಟ್ಟಿಸಿದ ವಿನಾಯಕ ದೇಗುಲ ಸಮಾಜಕ್ಕೆ ಸಿದ್ಧಿಯನ್ನು ನೀಡಲಿ: ಪಲಿಮಾರು ಶ್ರೀ
Team Udayavani, Jul 15, 2021, 8:04 PM IST
ಶಿರ್ವ: ವಿನಾಯಕನಿರುವಾಗ ಸೋಲೇ ಇರುವುದಿಲ್ಲ. ಶಿರ್ವದಲ್ಲಿ ನೆಲೆನಿಂತ ಸಿದ್ಧಿ ವಿನಾಯಕ ದೇವಸ್ಥಾನ ಶಿಲಾಮಯವಾಗಿದ್ದು ಭದ್ರವಾಗಿದೆ. ದೇವಸ್ಥಾನವನ್ನು ಕಟ್ಟಿಸಿಕೊಟ್ಟ ಗ್ಯಾಬ್ರಿಯಲ್ ನಜರೆತ್ ಅವರ ಸಿದ್ಧಿವಿನಾಯಕನ ಸೇವೆಯ ಪ್ರೇರಣೆ ನಮ್ಮ ಸೌಭಾಗ್ಯ ವಾಗಿದ್ದು ಸಮಾಜಕ್ಕೆ ಸಿದ್ಧಿಯನ್ನು ನೀಡುವ ವಿನಾಯಕನಾಗಲಿ ಎಂದು ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹೇಳಿದರು.
ಅವರು ಗುರುವಾರ ಶಿರ್ವದಲ್ಲಿ ಕ್ರೈಸ್ತ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ ನಜರತ್ ಅವರು ಹಿಂದುಗಳಿಗೆ ಕೊಡುಗೆಯಾಗಿ ನೀಡಲು ಕಟ್ಟಿಸಿದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.
ಪಲಿಮಾರು ಮಠಾಧೀಶರ ಮಾರ್ಗದರ್ಶನದಲ್ಲಿ ಜೋತಿಷ ವಿದ್ವಾನ್ ಉಡುಪಿ ಕನ್ನರ್ಪಾಡಿ ವೇ|ಮೂ|ಸಂದೀಪ್ ಉಪಾಧ್ಯಾಯ ಅವರ ನೇತೃತ್ವದಲ್ಲಿ ಶ್ರೀ ಸಿದ್ಧಿ ವಿನಾಯಕನ ಪ್ರತಿಷ್ಠಾಪನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದು ಬಳಿಕ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನ ನಿರ್ಮಿಸಲು ಸಹಕರಿಸಿದ ಗಣ್ಯರನ್ನು ಗ್ಯಾಬ್ರಿಯಲ್ ನಜರತ್ ಅವರು ಗೌರವಿಸಿ,ದೇವಸ್ಥಾನದ ದಾಖಲೆ ಪತ್ರಗಳನ್ನು ಹಸ್ತಾಂತರಿಸಿದರು. ಶಿರ್ವದ ಗ್ರಾಮಸ್ಥರು ಮತ್ತು ಭಕ್ತಾಧಿಗಳು ಗ್ಯಾಬ್ರಿಯಲ್ ನಜರತ್ ಅವರನ್ನು ಸಮ್ಮಾನಿಸಿದರು.
ಕಾರ್ಯಕ್ರಮಲ್ಲಿ ಪಲಿಮಾರು ಮಠದ ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು,ದೇವಸ್ಥಾನದ ವಾಸ್ತುಶಿಲ್ಪಿ ಎಂ.ಶ್ರೀನಾಗೇಶ್ ಹೆಗ್ಡೆ ದಂಪತಿ,ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಸಮಾಜಸೇವಕ ಕಾಪು ಲೀಲಾಧರ ಶೆಟ್ಟಿ, ಶಿರ್ವ ಮಹಾಲಸಾ ನಾರಾಯಣೀ ದೇವಸ್ಥಾನದ ಅರ್ಚಕ ರಘುರಾಂ ಭಟ್, ಸತೀಶ್ ಶೆಟ್ಟಿ ಮಲ್ಲಾರ್ ಮತ್ತು ರತ್ನಾಕರ ಕುಕ್ಯಾನ್ ಶಿರ್ವ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಗ್ರಾ.ಪಂ. ಸದಸ್ಯರು,ಭಕ್ತಾಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…