ಹತ್ತೇ ತಾಸುಗಳಲ್ಲಿ ನಿಫಾ ದೃಢಪಡಿಸಿದೆವು: ಡಾ| ಅರುಣ್‌


Team Udayavani, May 23, 2018, 6:00 AM IST

50.jpg

ಉಡುಪಿ: ಕೇರಳದಲ್ಲಿ ಆತಂಕ ಸೃಷ್ಟಿಸಿರುವ ನಿಫಾ ವೈರಸನ್ನು ಮಣಿಪಾಲದಲ್ಲಿ ಅತ್ಯಂತ ಕ್ಷಿಪ್ರವಾಗಿ ಪತ್ತೆ ಹಚ್ಚಲಾಗಿತ್ತು. ಅಪರೂಪದ ಈ ಕಾಯಿಲೆ ಬಗ್ಗೆ ಮಾಹಿತಿ ಬಂದ 10 ತಾಸುಗಳೊಳಗೆ ವೈರಸ್‌ ಪತ್ತೆ ಸಾಧ್ಯವಾಗಿದೆ. ಈ ಕೂಡಲೇ ಕ್ರಮ ಕೈಗೊಂಡಿರುವುದರಿಂದ ಈಗ ನಿಫಾ ಸೋಂಕು ಕೇರಳದಲ್ಲಿ ಒಂದು ಹಂತದ ನಿಯಂತ್ರಣಕ್ಕೆ ಬಂದಿದೆ ಎಂದು ಕೇರಳ ಸರ ಕಾರದ ಜತೆಗಿನ ವೈದ್ಯಕೀಯ, ಸಂಶೋಧಕರ ತಂಡದಲ್ಲಿರುವ ಮಣಿಪಾಲ್‌ ಸೆಂಟರ್‌ ಫಾರ್‌ ವೈರಸ್‌ ರಿಸರ್ಚ್‌ (ಎಂಸಿವಿಆರ್‌) ನ ಮುಖ್ಯಸ್ಥ ಡಾ| ಅರುಣ್‌ ಕುಮಾರ್‌ ತಿಳಿಸಿದ್ದಾರೆ.

ನಿಫಾದಂತಹ ವೈರಸ್‌ ರೋಗಗಳನ್ನು ಪತ್ತೆ ಹಚ್ಚಲು ಬೇಕಾದ ಪ್ರಯೋಗಾಲಯಗಳು ಮಣಿಪಾಲದ ಕೆಎಂಸಿ, ಪುಣೆಯಲ್ಲಿ ಮಾತ್ರವೇ ಇವೆ. ನಮಗೆ ಬಂದ ಸ್ಯಾಂಪಲ್‌ಗ‌ಳ ಕುರಿತಾದ ವರದಿಯನ್ನು ಅತ್ಯಂತ ಕ್ಷಿಪ್ರವಾಗಿ ನೀಡಿದ್ದೇವೆ. ಮೇ18ರಂದೇ ವೈರಸ್‌ ಪತ್ತೆ ಹಚ್ಚಿದ್ದೇವೆ. ಅಪರೂಪದ ವೈರಸ್‌ ಆಗಿರುವುದರಿಂದ ಅದನ್ನು ಪುಣೆಯ ಲ್ಯಾಬ್‌ನಲ್ಲಿಯೂ ಮತ್ತೂಮ್ಮೆ ಖಚಿತ ಪಡಿಸಿಕೊಳ್ಳಲು ನಿರ್ಧರಿಸಲಾಯಿತು. ಪುಣೆಯಿಂದ ವರದಿ ಬಂದ ಅನಂತರವೇ ಪ್ರಕಟಿಸಲಾಯಿತು. ಕ್ಷಿಪ್ರ ವರದಿಯಿಂದಾಗಿ ಸರಕಾರ ಕೂಡ ಅಗತ್ಯ ಕ್ರಮ ತೆಗೆದುಕೊಳ್ಳಲು ಸಾಧ್ಯವಾಯಿತು. ಈಗ ಪರಿಸ್ಥಿತಿ ಒಂದು ಹಂತದ ನಿಯಂತ್ರಣಕ್ಕೆ ಬಂದಿದೆ ಎಂದು ಡಾ| ಅರುಣ್‌ ಕುಮಾರ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಒಂದು ಕುಟುಂಬ ಮಾತ್ರ:
ಒಂದು ನಿರ್ದಿಷ್ಟ ಪ್ರದೇಶದ ಒಂದೇ ಕುಟುಂಬದ ನಾಲ್ವರಿಗೆ ಸೋಂಕು ತಗಲಿದೆ. ಇದು ಯಾವ ರೀತಿ ತಗಲಿತು ಎಂಬುದರ ಬಗ್ಗೆ ಇನ್ನೂ ಅಧ್ಯಯನ ನಡೆಸುತ್ತಿದ್ದೇವೆ. ಇವರು ದಾಖಲಾದ ಎರಡು ಆಸ್ಪತ್ರೆಗಳಲ್ಲಿದ್ದ ಇತರ ಕೆಲವು ರೋಗಿಗಳಿಗೆ ಹಾಗೂ ಶುಶ್ರೂಷಕಿಯರಿಗೆ ಸೋಂಕು ತಗಲಿತು. ಎರಡನೇ ಪ್ರಕರಣ ದಾಖಲಾದ ಕೂಡಲೇ ವೈರಸ್‌ ಪತ್ತೆ ಹಚ್ಚಿ ಮುಂಜಾಗರೂಕತೆ ಕ್ರಮ ಕೈಗೊಂಡಿದ್ದರಿಂದ ನಿಫಾ ಹೆಚ್ಚು ಪ್ರಸರಣವಾಗಿಲ್ಲ. ಆತಂಕ ಬೇಕಾಗಿಲ್ಲ, ಸೂಕ್ತ ಎಚ್ಚರಿಕೆ ಬೇಕು. ಎರಡೂ ಆಸ್ಪತ್ರೆಗಳಲ್ಲಿ ಕೂಡ “ಪ್ರತ್ಯೇಕ ವಾರ್ಡ್‌’ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 12 ಮಂದಿಗೆ ಸೋಂಕು ತಗಲಿದ್ದು, ಇವರಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಮೇ 19ರಿಂದ ಸೇವೆ
ಕೇರಳ ಸರಕಾರದ ತುರ್ತು ಆಹ್ವಾನದ ಮೇರೆಗೆ ಮೇ 19ರಂದು ಮಣಿಪಾಲದಿಂದ ಹೊರಟು ಸೇವೆ ಆರಂಭಿಸಿದ್ದೇವೆ. ಮಣಿಪಾಲ್‌ ಲ್ಯಾಬ್‌ನ 4-5 ಮಂದಿ ತಜ್ಞರು, ಸಿಬಂದಿಯ ಜತೆಗೆ ನಾನು ಕೋಯಿಕ್ಕೋಡ್‌ನ‌ಲ್ಲಿ ಸೇವಾನಿರತರಾಗಿದ್ದೇವೆ. ಮಣಿಪಾಲ ಲ್ಯಾಬ್‌ನಲ್ಲಿಯೂ ಹಲವು ಮಂದಿ ತಜ್ಞರು ಪರೀಕ್ಷೆಯಲ್ಲಿ ತೊಡಗಿಕೊಂಡಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು, ಗೋವಾ ಮೊದಲಾದೆಡೆ ವಿವಿಧ ರೀತಿಯ ವೈರಸ್‌ ರೋಗಗಳು ಹರಡಿದ್ದಾಗ ಕೂಡ ಸೇವೆ ಸಲ್ಲಿಸಿದ್ದೇನೆ ಎಂದು ಡಾ| ಅರುಣ್‌ ಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.