ನಿಟ್ಟೆ ಕಾಲೇಜು: ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಸೇವನೆ ಜಾಗೃತಿ
Team Udayavani, Jun 22, 2019, 6:31 AM IST
ಕಾರ್ಕಳ: ನಿಟ್ಟೆ ಡಾ| ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜು ಮತ್ತು ಕಾರ್ಕಳ ಆರಕ್ಷಕರ ಠಾಣೆ ಸಹಯೋಗದಲ್ಲಿ ನಿಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಸೇವನೆ ಜಾಗೃತಿ ಕಾರ್ಯಕ್ರಮ ನಡೆಯಿತು
ಕಾರ್ಕಳ ಉಪವಿಭಾಗದ ಎಎಸ್ಪಿ ಕೃಷ್ಣಕಾಂತ್ ಮಾತನಾಡಿ, ಟ್ರಾಫಿಕ್ ಸಮಸ್ಯೆ ತೀವ್ರವಾಗಿ ಕಂಡುಬರುತ್ತಿರುವ ಇಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಕುರಿತು ಹೆಚ್ಚಿನ ಜಾಗೃತಿ ವಹಿಸಬೇಕು. ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಹಿಂದೆ ಮುಂದೆ ನೋಡದೇ ತತತ್ಕ್ಷಣವೇ ಸ್ಪಂದಿಸಬೇಕು. ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದವರಿಗೆ ಕಾನೂನಿನಲ್ಲಿ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.
ಸಂವಾದ
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಎಎಸ್ಪಿ ಕೃಷ್ಣಕಾಂತ್ ಅವರು, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪೊàಕೊÕà ಕಾಯಿದೆ ಮತ್ತು ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮದ ಕುರಿತು ತಿಳಿಸಿದರು.
ನಿಟ್ಟೆ ವಿದ್ಯಾಸಂಸ್ಥೆಯ ರಿಜಿಸ್ಟ್ರಾರ್ ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಪೊಲೀಸ್ ಠಾಣೆಯ ಎಸ್ಐ ನಾಸಿರ್ ಹುಸೇನ್, ಹೆಡ್ ಕಾನ್ಸ್ಟೆಬಲ್ ಮಂಜುನಾಥ್ ಅಡಿಗ ಹಾಗೂ ಮಹಿಳಾ ಪೊಲೀಸ್ ಅಧಿಕಾರಿ ಸುಮಿತ್ರಾ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಡಾ| ವೀಣಾ ಕುಮಾರಿ ಬಿ. ಕೆ. ಸ್ವಾಗತಿಸಿ, ಅಪರ್ಣಾ ಮೆನನ್ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಎಂ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..