ಮಳೆಗಾಲದಲ್ಲೇ ಸಚ್ಚೇರಿಪೇಟೆಯ ಬಾವಿಗಳಲ್ಲಿ ಹನಿ ನೀರಿಲ್ಲ !


Team Udayavani, Jul 3, 2019, 5:21 AM IST

sacchari-pete

ಬೆಳ್ಮಣ್‌: ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ಮುಂಡ್ಕೂರು ಗ್ರಾಮ ಪಂಚಾಯತ್‌ನ ಸಚ್ಚೇರಿಪೇಟೆಯ ನೂರಕ್ಕೂ ಮಿಕ್ಕಿ ಬಾವಿಗಳಲ್ಲಿ ನೀರ ಸೆಲೆ ಕಾಣಿಸಿಲ್ಲ. ನೀರಿನ ಕೊರತೆಗೆ ಈಗ ವೈಜ್ಞಾನಿಕ ಕಾರಣಗಳನ್ನೂ ಹುಡುಕಲಾಗುತ್ತಿದೆ.

ಸಚ್ಚೇರಿಪೇಟೆಯ ಕಜೆ ಮಾರಿಗುಡಿ ಲೇನ್‌ನಿಂದ ರೈಸ್‌ ಮಿಲ್ ವರೆಗಿನ ನೂರಕ್ಕೂ ಹೆಚ್ಚು ಮನೆಗಳ ಬಾವಿಗಳಲ್ಲಿ ನೀರಿಲ್ಲದೆ ಜನ ಕಂಗಾಲಾಗಿದ್ದಾರೆ. ಇವುಗಳನ್ನು ನಿಷ್ಪ್ರಯೋಜಕ ಬಾವಿಗಳೆಂದು ಗುರುತಿಸಲಾಗಿದೆ.

ಕಾರಣ ನಿಗೂಢ

ಪ್ರತೀ ವರ್ಷ ಈ ಬಾವಿಗಳಲ್ಲಿ ಡಿಸೆಂಬರ್‌ ತಿಂಗಳಲ್ಲಿಯೇ ನೀರು ಬತ್ತಿ ಹೋಗುತ್ತಿದ್ದು ಈ ಬಾರಿಯೂ ಅದೇ ಪರಿಸ್ಥಿತಿ ಉಂಟಾಗಿತ್ತು. ಆದರೆ ಒಂದು ತಿಂಗಳ ಹಿಂದೆ ಒಂದಿಷ್ಟು ಮಳೆಯಾಗಿದ್ದರೂ ಈ ಭಾಗದ ಬಾವಿಗಳಲ್ಲಿ ಅಂತರ್ಜಲ ಒರತೆ ಕಾಣಿಸಿಲ್ಲ. ಸ್ಥಳೀಯರಾದ ವಸಂತಿ ಪೂಜಾರಿಯವರು ಹೇಳುವಂತೆ ಬಾವಿಯಲ್ಲಿ ನೀರು ನಿಲ್ಲಬೇಕಾದರೆ ಪಕ್ಕದ ಶಾಂಭವೀ ನದಿಯಲ್ಲಿ ಒಂದೆರಡು ಭಾರೀ ನೆರೆಯಾಗಬೇಕು. ಆದರೆ ಈ ಬಾರಿ ನದಿಯೂ ತುಂಬಿಲ್ಲ, ನೆರೆಯೂ ಆಗಿಲ್ಲ. ಹಿಂದೆ ಯಾವತ್ತೂ ಮಳೆಗಾಲದಲ್ಲಿ ಬಾವಿಗಳಲ್ಲಿ ನೀರು ತಳ ಕಂಡಿದ್ದಿಲ್ಲ ಎನ್ನುತ್ತಾರೆ.

ಬೋರ್‌ವೆಲ್ಗಳ ಹೆಚ್ಚಳ

ಅಲ್ಲಲ್ಲಿ ಬೋರ್‌ವೆಲ್ಗಳ ಕೊರೆತದಿಂದ ಭೂಮಿಯಲ್ಲಿ ನೀರಿನ ಸೆಲೆ ಕಡಿಮೆಯಾಗಿ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರಬಹುದೆಂದು ನಂಬಲಾಗಿದೆ. ಮುಂದೆ ಬೋರ್‌ವೆಲ್ಗಳಿಗೆ ಪರವಾನಿಗೆ ನೀಡಬಾರದೆಂದು ಈ ಭಾಗದ ಜನ ಒತ್ತಾಯಿಸಿದ್ದಾರೆ.

ಗ್ರಾ.ಪಂ. ನೆರವು

ಬಾವಿಗಳು ಬತ್ತಿದ್ದರೂ, ಗ್ರಾ.ಪಂ.ನ ಸ್ವಜಲಧಾರಾ ಯೋಜನೆಯ ನೀರು ಜನರಿಗೆ ಪ್ರಯೋಜನಕಾರಿಯಾಗಿದೆ. ಹಿಂದೆ ಬೇಸಗೆಯಲ್ಲಿ ಮಾತ್ರ ಗ್ರಾ.ಪಂ. ನೀರು ಬಳಕೆಯಾಗುತ್ತಿದ್ದು, ಈಗ ವರ್ಷದ ಎಲ್ಲ ದಿನಗಳಲ್ಲಿ ಇದೇ ನೀರು ಬಳಕೆಯಾಗುತ್ತಿದೆ. ತುಸು ಮಳೆ ಸುರಿಯುತ್ತಿದ್ದರೂ ನೀರಿಲ್ಲದೆ ಜನ ಕೊಡ ಹಿಡಿದು ಪಂಚಾಯತ್‌ ನೀರಿಗೆ ಕಾಯುವಂತಾಗಿದೆ.

ಕಾರಣ ಹುಡುಕುತ್ತೇವೆ

ಮಳೆ ಬಂದರೂ ಸಚ್ಚೇರಿಪೇಟೆಯ ರಸ್ತೆಯ ಒಂದು ಭಾಗದಲ್ಲಿ ಮಾತ್ರ ನೂರಾರು ಬಾವಿಗಳಲ್ಲಿ ನೀರಿಲ್ಲದಿರುವುದು ಆಶ್ಚರ್ಯಕರವಾದುದು. ಇಲ್ಲಿ ಡಿಸೆಂಬರ್‌ ತಿಂಗಳಿಂದಲೇ ಪಂಚಾಯತ್‌ನ ನೀರು ಬಳಕೆಯಾಗುತ್ತಿದೆ, ನೀರು ಅಲಭ್ಯತೆಗೆ ಕಾರಣ ಹುಡುಕಲಾಗುವುದು.
– ಶುಭಾ ಪಿ.ಶೆಟ್ಟಿ, ಮುಂಡ್ಕೂರು ಗ್ರಾ.ಪಂ. ಅಧ್ಯಕ್ಷೆ
ಎಚ್ಚೆತ್ತರೆ ಒಳ್ಳೆಯದು

ಕರಾವಳಿ ಪದ್ರೇಶದ ಸೂಕ್ಷ್ಮ ಪ್ರಕೃತಿಗೆ ವಿರುದ್ಧ ಕೈಗಾರಿಕೆಗಳು ಸ್ಥಾಪನೆಗೊಂಡಿದ್ದರಿಂದ ಅವಿಭಜಿತ ದ.ಕ. ಜಿಲ್ಲೆ ಮರುಭೂಮಿ ಪ್ರದೇಶವಾಗುವ ಮುನ್ಸೂಚನೆಯನ್ನು ನಾವೀಗಲೇ ಕಾಣುತ್ತಿದ್ದೇವೆ. ಇದರ ಬಗ್ಗೆ ನಾವು ಈಗಾಗಲೇ ಎಚ್ಚೆತ್ತುಕೊಂಡರೆ ಒಳ್ಳೆಯದು.
– ಶರತ್‌ ಶೆಟ್ಟಿ , ಸಚ್ಚೇರಿಪೇಟೆ
– ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.