Udupi ಮತ್ಸ್ಯಾಶ್ರಯದಡಿ ಹೊಸ ಮನೆ ಬಂದಿಲ್ಲ


Team Udayavani, Dec 26, 2023, 7:15 AM IST

Udupi ಮತ್ಸ್ಯಾಶ್ರಯದಡಿ ಹೊಸ ಮನೆ ಬಂದಿಲ್ಲ

ಉಡುಪಿ: ವಸತಿ ರಹಿತ ಅಥವಾ ವಾಸಿಸಲು ಯೋಗ್ಯ ಮನೆ ಇಲ್ಲದ ಮೀನುಗಾರರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಇರುವ ಮತ್ಸ್ಯಾಶ್ರಯ ಯೋಜನೆಯಡಿ ಈ ಸಾಲಿನಲ್ಲಿ ಒಂದೂ ಮನೆ ಮಂಜೂರಾಗಿಲ್ಲ. ಬದಲಿಗೆ ಈ ಹಿಂದಿನ ವರ್ಷಗಳಲ್ಲಿ ಹಂಚಿಕೆಯಾಗದ ಮನೆಗಳ ಮರು ಹಂಚಿಕೆಗೆ ರಾಜ್ಯ ಸರಕಾರ ಮುಂದಾಗಿದೆ.

2006ರಲ್ಲಿ ಯೋಜನೆ ಆರಂಭಗೊಂಡಿದ್ದು, ತಾಂತ್ರಿಕ ಕಾರಣದಿಂದ ಸರಕಾರ ಮತ್ತು ಮೀನು ಗಾರಿಕೆ ಇಲಾಖೆಯು ಮತ್ಸ್ಯಾಶ್ರಯ ಯೋಜನೆಯಡಿ ವಾರ್ಷಿಕ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಿಲ್ಲ. ಹಾಗಾಗಿ 2020-2021, 2021-22 ನೇ ಸಾಲಿನಲ್ಲಿ ಮನೆಯನ್ನು ಹಂಚಿಕೆ ಮಾಡಿರಲಿಲ್ಲ. 2022-23ರಲ್ಲಿ ಅವಿಭ ಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತವಾಗಿ ರಾಜ್ಯಾದ್ಯಂತ 5 ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಅದರಲ್ಲಿ ಉಡುಪಿಗೆ 725 ಹಾಗೂ ದ.ಕ. ಜಿಲ್ಲೆಗೆ 450 ಮನೆ ಹಂಚಿಕೆ ಮಾಡಲಾಗಿತ್ತು.

ಪ್ರತೀ ವಿಧಾನಸಭಾ ಕ್ಷೇತ್ರದಿಂದಲೂ ಈ ಯೋಜನೆಯಡಿ ಮನೆಗಳಿಗೆ ಬೇಡಿಕೆಯಿದೆ. ಆದರೆ ಸರಕಾರದಿಂದ 2023-24ನೇ ಸಾಲಿಗೆ ಮನೆ ಹಂಚಿಕೆ ಮಾಡದ ಕಾರಣ ಎಲ್ಲ ಅರ್ಜಿಗಳು ಶಾಸಕರ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆ ಯಲ್ಲೇ ಬಾಕಿಯಾಗಿವೆ.

ಮರು ಹಂಚಿಕೆ
2018 – 19ರಿಂದ 2022-23ನೇ ಸಾಲಿನವರೆಗೂ ಹಂಚಿಕೆ ಯಾಗಿರುವ / ಆಗದೆ ಉಳಿದಿರುವ ಮನೆಗಳ ಮಾಹಿತಿಯನ್ನು ಮೀನುಗಾರಿಕೆ ಇಲಾಖೆಯು ಜಿಲ್ಲಾ ಕೇಂದ್ರಗ ಳಿಂದ ಸರಕಾರ ಪಡೆಯುತ್ತಿದೆ. 2022-23ನೇ ಸಾಲಿಗೆ ಉಡುಪಿ ಜಿಲ್ಲೆಗೆ ಹಂಚಿಕೆಯಾದ 725 ಮನೆಗಳಲ್ಲಿ 325 ಮನೆ ಹಂಚಿಕೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ 450 ಮನೆಗಳಲ್ಲಿ ಸುಮಾರು 150 ಮನೆಗಳು ಹಂಚಿಕೆಯಾಗಿಲ್ಲ.

ತಾಂತ್ರಿಕ ಸಮಸ್ಯೆ
2020-21ರ ಮೊದಲು ಮೀನುಗಾರಿಕೆ ಇಲಾಖೆಯಿಂದ ಮಂಜೂರಾಗುತ್ತಿದ್ದ ಮನೆಗಳನ್ನು ಮೀನುಗಾರಿಕೆ
ಅಭಿವೃದ್ಧಿ ನಿಗಮದ ಮೂಲಕವೇ ಅನುಷ್ಠಾನ ಗೊಳಿಸಲಾಗುತ್ತಿತ್ತು. ಇದಕ್ಕಾಗಿ ಕ್ಷೇತ್ರವ್ಯಾಪ್ತಿಯಲ್ಲಿ ಶಾಸಕರ ನೇತೃತ್ವದ ಸಮಿತಿಯು ಫ‌ಲಾನುಭವಿಗಳನ್ನು ಆಯ್ಕೆ ಮಾಡುತ್ತಿತ್ತು. 2020- 21ನೇ ಸಾಲಿನಲ್ಲಿ ಮನೆ ನಿರ್ಮಾಣದ ಹೊಣೆಯನ್ನು ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ವಹಿಸಿದ್ದರಿಂದ ಶಾಸಕರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ 2 ವರ್ಷ ಮನೆ ಹಂಚಿಕೆಯಾಗಿಲ್ಲ. 2022-23ನೇ ಸಾಲಿನಲ್ಲಿ ಮತ್ತೆ ಮೀನುಗಾರಿಕೆ ಅಭಿವೃದ್ಧಿ ನಿಗಮದ ಮೂಲಕವೇ ಮನೆ ಹಂಚಿಕೆಗೆ ಸರಕಾರ ಆದೇಶಿಸಿ, ಮನೆ ಹಂಚಿಕೆ ಮಾಡಿತ್ತು.

ಅನುದಾನವೆಷ್ಟು?
ಮತ್ಸ್ಯಾಶ್ರಯದಡಿ ಮನೆ ಪಡೆಯಲು ಅರ್ಜಿ ಸಲ್ಲಿಸಿದ ಫ‌ಲಾನುಭವಿಗಳ ಆಯ್ಕೆ ಬಳಿಕ ಇಲಾಖೆ/ ನಿಗಮದಿಂದ ಪ್ರತೀ ಫ‌ಲಾನುಭವಿ ಗಳಿಗೆ ಹಂತ ಹಂತವಾಗಿ ಅನುದಾನ ಮಂಜೂರು ಮಾಡಲಾಗುತ್ತದೆ. ಗ್ರಾಮೀಣ ಫ‌ಲಾನುಭವಿಗಳಿಗೆ 1.75 ಲಕ್ಷ ಹಾಗೂ ನಗರ ಪ್ರದೇಶ ಫ‌ಲಾನುಭವಿಗಳಿಗೆ 2 ಲಕ್ಷ ರೂ. ನೀಡಲಾಗುತ್ತದೆ. ಈ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಏರಿಸಬೇಕು ಎಂಬ ಬೇಡಿಕೆಯೂ ಇದೆ.

ಮತ್ಸ್ಯಾಶ್ರಯ ಮನೆ ಹಂಚಿಕೆಗೆ ಇರುವ ತಾಂತ್ರಿಕ ತೊಡಕು ನಿವಾರಿಸಲಾಗಿದೆ. ಉಳಿಕೆ ಮನೆಗಳ ಮರುಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ.
– ಮಂಕಾಳ ವೈದ್ಯ, ಮೀನುಗಾರಿಕೆ ಮತ್ತು ಬಂದರು ಸಚಿವ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.