ವೇದಿಕೆಯಲ್ಲಿ ದೈವಾರಾಧನೆ ಪ್ರದರ್ಶನ ಸಲ್ಲ: ಡಾ| ಏರ್ಯ ಆಳ್ವ
Team Udayavani, Jun 17, 2019, 9:49 AM IST
ಉಡುಪಿ: ದೈವಾರಾಧನೆ ಆರಾಧನ ಕಲೆ. ಅದನ್ನು ವೇದಿಕೆಯಲ್ಲಿ ಪ್ರದರ್ಶಿಸುವುದು ಸಲ್ಲದು. ದೈವಗಳ ಬಣ್ಣಗಾರಿಕೆ, ನೃತ್ಯಗಾರಿಕೆ, ಮಾತುಗಾರಿಕೆಯಲ್ಲಿ ಭಿನ್ನತೆ ಇದೆ. ಹತ್ತಾರು ಜನಾಂಗ, ಕುಟುಂಬಗಳು ದೈವಾರಾಧನೆಯಿಂದ ಒಂದಾಗಿವೆ ಎಂದು ಕರ್ನಾಟಕ ಜಾನಪದ ಪರಿಷತ್ ಸದಸ್ಯ ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದರು.
ಕರ್ನಾಟಕ ಜಾನಪದ ಪರಿಷತ್ ಆಶ್ರಯದಲ್ಲಿ ರವಿವಾರ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ಜಾನಪದ ಘಟಕದ ಜಿಲ್ಲಾ, ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಪದ ಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿರಿಯರ ಕೊಡುಗೆ ಅಪಾರ
ಪಾಡªನಗಳು ಇಂಗ್ಲಿಷ್ ಭಾಷೆಗೆ ಅನುವಾದವಾಗಬೇಕು. ಜನಪದ ಬೆಳೆಯಲು ಹಿರಿಯರ ಕೊಡುಗೆ ಅಪಾರವಾಗಿದೆ ಎಂದರು. ರಾಜ್ಯ ಹಣಕಾಸು ಆಯೋಗ ಅನುಷ್ಠಾನ ಕಾರ್ಯಪಡೆಯ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿ ಮಾತನಾಡಿ, ಭಾರತದ ಸಂಸ್ಕೃತಿಗೆ ಹತ್ತಿರವಾದ ಜಾನಪದ ಕಲೆ ಇನ್ನಷ್ಟು ಹೆಚ್ಚು ಬೆಳೆಯ ಬೇಕು ಎಂದರು. ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ. ತಿಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಡಾ| ಗಣನಾಥ ಎಕ್ಕಾರು ಮುಖ್ಯ ಅತಿಥಿಯಾಗಿದ್ದರು.
ಸಮ್ಮಾನ
ಜಾನಪದ ವಿದ್ವಾಂಸರಾದ ಎಸ್.ಎ. ಕೃಷ್ಣಯ್ಯ, ಬನ್ನಂಜೆ ಬಾಬು ಅಮೀನ್, ರಮೇಶ್ ಕಲ್ಮಾಡಿ ಅವರನ್ನು ಈ ಸಂದರ್ಭ ಸಮ್ಮಾನಿಸಲಾಯಿತು. ಶಾಸಕ ರಘುಪತಿ ಭಟ್, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ಸಂಘಟನ ಕಾರ್ಯದರ್ಶಿ ರವಿರಾಜ ನಾಯಕ್, ಎಂಜಿಎಂ ಕಾಲೇಜು ಪ್ರಾಂಶುಪಾಲ ಎಂ.ಜಿ. ವಿಜಯ್, ಶಂಭು ಶೆಟ್ಟಿ, ಗೋಪಾಲ ಸಿ. ಬಂಗೇರ, ತಾಲೂಕು ಘಟಕದ ಅಧ್ಯಕ್ಷರಾದ ಉಡುಪಿಯ ಸಂಜೀವ ಟಿ. ಕರ್ಕೇರ, ಕಾಪುವಿನ ಡಿ. ಶ್ರೀಧರ ಶೇಣವ, ಕಾರ್ಕಳದ ಎನ್.ಎಂ. ಹೆಗ್ಡೆ, ಹೆಬ್ರಿಯ ಟಿ.ಜಿ. ಆಚಾರ್, ಬೈಂದೂರಿನ ವಿಶ್ವನಾಥ ಶೆಟ್ಟಿ, ಕುಂದಾಪುರದ ರತ್ನಾಕರ ಶೆಟ್ಟಿ, ಬ್ರಹ್ಮಾವರದ ನೇರಿ ಕರ್ನೇಲಿಯೋ ಉಪಸ್ಥಿತರಿದ್ದರು.
ಸುನಿಲ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಎನ್.ಎಂ. ಹೆಗ್ಡೆ ನಿರೂಪಿಸಿದರು. ಇತ್ತೀಚೆಗೆ ನಿಧನ ಹೊಂದಿದ ಸಾಹಿತಿ ಗಿರೀಶ್ ಕಾರ್ನಾಡ್ ಅವರಿಗೆ ಸಂತಾಪ ಸೂಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ