ನೀರಿಲ್ಲ, ಮನೆಗೆ ಬರಬೇಡಿ: ಸಂಬಂಧಿಕರಿಗೆ ಸಂದೇಶ!


Team Udayavani, Apr 25, 2019, 6:03 AM IST

neeru

ಇದು ಸಾಕ್ಷಾತ್‌ ವರದಿಗಳ ಸರಣಿ. ಪ್ರತಿ ಬೇಸಗೆಯಲ್ಲಿ ಸ್ಥಳೀಯ ಆಡಳಿತ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರಗಳನ್ನು ಕೈಗೊಳ್ಳುತ್ತದೆ. ಆದರೆ ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಹರಿಸುವುದು ಕಡಿಮೆ. ಹಾಗಾಗಿಯೇ ಜನರು ಯಾಕಾದ್ರೂ ಬೇಸಗೆ ಬರುತ್ತಪ್ಪಾ ಎಂದು ಶಾಪ ಹಾಕುತ್ತಾ ದಿನದೂಡುತ್ತಾರೆ. ಈ ಜನರ ಕಷ್ಟಗಳನ್ನು ಯಥಾವತ್ತಾಗಿ ವರದಿ ಮಾಡಿ ಶಾಶ್ವತ ಪರಿಹಾರ ಕಲ್ಪಿಸುವತ್ತ ಸ್ಥಳೀಯ ಆಡಳಿತ, ಜನ ಪ್ರತಿನಿಧಿಗಳು, ಶಾಸಕರ ಕಣ್ಣು ತೆರೆಸುವುದು ನಮ್ಮ ಉದ್ದೇಶ. ಅದಕ್ಕಾಗಿ ನಮ್ಮ ತಂಡ ನೀರಿನ ಅತಿಯಾದ ಸಮಸ್ಯೆ ಇರುವಲ್ಲಿಗೆ ಭೇಟಿ ನೀಡುತ್ತದೆ. ಆಗ ನಿಮ್ಮ ಸಮಸ್ಯೆಯನ್ನು ಹಂಚಿಕೊಳ್ಳಿ. ನೀರಿನ ಕೊರತೆ ಹೆಚ್ಚಿದ್ದರೆ ಈ ನಂಬರ್‌ 9148594259ಗೆ ವಾಟ್ಸಾಪ್‌ ಮಾಡಿ.

ಉಡುಪಿ: ನಗರದಲ್ಲಿ ಮೂರು ದಿನಕ್ಕೊಮ್ಮೆ ನೀರು ಬಿಡುತ್ತಿದ್ದಾರೆ. ನೀರು ಎಷ್ಟೊತ್ತಿಗೆ ಬರುತ್ತದೆ ಎಂಬುದೂ ಖಚಿತವಿಲ್ಲ. ಬಂದರೆ ಬಂತು ಎಂಬ ಸ್ಥಿತಿ! ಇಂತಹ ಸಂದರ್ಭ ಹೆಂಗಳೆಯರು ತವರು ಮನೆ ದಾರಿ ಹಿಡಿದರೆ, ಸಂಬಂಧಿಕರು, ಮಕ್ಕಳು ರಜಾಕಾಲದಲ್ಲಿ ಮನೆಗೆ ಬರಬೇಡಿ ಎಂದು ಸಂದೇಶ ನೀಡುತ್ತಿದ್ದಾರೆ. ಅಷ್ಟೇ ಅಲ್ಲ, ನೀರಿಗಾಗಿ ಕಾಯಬೇಕಾಗಿರುವುದರಿಂದ ಸಮಾರಂಭಗಳಿಗೂ ಗೈರಾಗುತ್ತಿದ್ದಾರೆ.

ಗುಂಡಿಬೈಲಿನಲ್ಲಿ ಸಮಸ್ಯೆ ತೀವ್ರ
ಗುಂಡಿಬೈಲು ವಾರ್ಡ್‌ನ ಎತ್ತರ ಪ್ರದೇಶದಲ್ಲಿರುವ ದೊಡ್ಡಣಗುಡ್ಡೆ, ಹುಡ್ಕೊà ಕಾಲನಿ, ವ್ಯಾಯಾಮ ಶಾಲೆ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಾಡಿದೆ. ಮೂರು ದಿನಗಳಿಗೊಮ್ಮೆ ನೀರು ಬಿಟ್ಟರೂ ನೀರಿನ ಒತ್ತಡ ಕಡಿಮೆ ಇರುವುದರಿಂದ ಎತ್ತರ ಪ್ರದೇಶಗಳಿಗೆ ನೀರು ಸಿಗುತ್ತಿಲ್ಲ. “ನೀರನ್ನು ಕಡೇ ಪಕ್ಷ ನಿಗದಿತ ಸಮಯಕ್ಕಾದರೂ ಬಿಟ್ಟು ನಮ್ಮನ್ನು ನೆಮ್ಮದಿಯಿಂದ ಇರಲು ಬಿಡಿ’ ಎನ್ನುವ ಮಹಿಳೆಯರ ಕೂಗು ಗುಂಡಿಬೈಲು ವಾರ್ಡ್‌ನ ಪ್ರತೀ ಮನೆಯಲ್ಲಿಯೂ ಕೇಳಿ ಬರುತ್ತಿದೆ.

ನಗರಸಭೆ ನೀರೇ ಗತಿ
ಈ ವಾರ್ಡ್‌ ನಲ್ಲಿ ವಾರ್ಡ್‌ನಲ್ಲಿ ಸರಿಸುಮಾರು 1,500ಕ್ಕೂ ಮಿಕ್ಕಿದ ಮನೆಗಳಿವೆ. 30ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿವೆ. ಇವೆಲ್ಲವೂ ನಗರಸಭೆ ನೀರನ್ನೇ ಅವಲಂಬಿಸಿಕೊಂಡಿದೆ. ಗುಂಡಿಬೈಲು ವ್ಯಾಪ್ತಿಯ ಕರಂಬಳ್ಳಿ, ಸಂತೋಷನಗರ, ಚಕ್ರತೀರ್ಥ, ನೇಕಾರರ ಕಾಲನಿ ಮೊದಲಾದೆಡೆ ನೀರಿನ ಸಮಸ್ಯೆ ಅಷ್ಟಾಗಿ ಇಲ್ಲ.

ಬೆಳಗ್ಗೆ 4 ಗಂಟೆಗೆ ನೀರು!
ಒಮ್ಮೆ ನಸುಕಿನ 4 ಗಂಟೆಗೆ ನೀರು ಬಿಟ್ಟರೆ, ಇನ್ನೊಮ್ಮೆ ರಾತ್ರಿ ವೇಳೆ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಅತ್ತ ನಿದ್ದೆ ಮಾಡಲೂ ಆಗದೆ, ಇತ್ತ ನೀರು ತುಂಬಿಸಲೂ ಆಗದೆ ಜನರು ಹೈರಾಣಾಗಿದ್ದಾರೆ.

ನೀರು ಪೋಲು
ಒಂದೆಡೆ ನೀರಿನ ಸಮಸ್ಯೆಯಿಂದ ಇಡೀ ವಾರ್ಡ್‌ ತತ್ತರಿಸಿ ಹೋಗುತ್ತಿದ್ದರೆ, ಇನ್ನೊಂದೆಡೆ ಕೆಲವೊಂದು ಮನೆಗಳಲ್ಲಿ ನೀರನ್ನು ವಾಹನ ತೊಳೆಯಲು, ಮರಗಳಿಗೆ ಹಾಗೂ ಇತರೆ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಎತ್ತರ ಪ್ರದೇಶದಲ್ಲಿರುವ ಮನೆಗಳಿಗೆ ನೀರಿನ ಕೊರತೆ ತೀವ್ರವಾಗಿದೆ ಎಂಬ ಆರೋಪವಿದೆ. ಇದಕ್ಕಾಗಿ ಕೂಡಲೇ ಪರಿಹಾರ ಕ್ರಮಕ್ಕೆ ಜನರು ಆಗ್ರಹಿಸಿದ್ದಾರೆ.

ವಾರ್ಡ್‌ ಜನರ ಬೇಡಿಕೆ
– ಆಯ್ದ ಪ್ರದೇಶದಲ್ಲಿ ಬೋರ್‌ವೆಲ್‌ ಅಳವಡಿಕೆ
– ಬಜೆ ಡ್ಯಾಂನಲ್ಲಿ ತುಂಬಿದ ಹೂಳು ಹಾಗೂ ಬಂಡೆಕಲ್ಲು ತೆರವು
– ನೀರಿನ ಒತ್ತಡ ಹೆಚ್ಚಳ
– ಎರಡು ದಿನಕ್ಕೊಮ್ಮೆ ನೀರು
– ಎತ್ತರ ಪ್ರದೇಶಗಳಿಗೆ ಟ್ಯಾಂಕರ್‌ ನೀರು

ನೀರಿಗೆ ಹಣ ತೆತ್ತರೆ ಊಟಕ್ಕಿಲ್ಲ!
ಖರೀದಿಸುವ ನೀರನ್ನು ಅಡುಗೆ, ಕುಡಿಯಲು, ಶೌಚಾಲಯಕ್ಕೆ, ಬಟ್ಟೆ ತೊಳೆಯಲು ಲೆಕ್ಕ ಹಾಕಿ ಉಪಯೋಗಿಸು ವಂತಾಗಿದೆ. ಈ ವಾರ್ಡ್‌ನಲ್ಲಿ ಒಟ್ಟಾರೆ ದಿನದಿಂದ ದಿನಕ್ಕೆ ಸಮಸ್ಯೆ ಇನ್ನಷ್ಟು ಬಿಗಡಾಯಿಸುತ್ತಿದೆ. ಒಂದೆಡೆ ನಮಗೆ ನಗರಸಭೆ ಅಧಿಕಾರಿಗಳು ನೀರು ಪೂರೈಸುತ್ತಿಲ್ಲ. ಕೂಲಿ ಮಾಡಿದ ಹಣ ನೀರಿಗೇ ಖರ್ಚಾದರೆ ಬಡವರಾದ ನಾವು ಬದುಕುವುದು ಹೇಗೆ?
-ವಿದ್ಯಾ, ಸ್ಥಳೀಯ ನಿವಾಸಿ.

ಸಂಬಂಧಿಕರೇ ಮನೆಗೆ ಬಾರದಿರಿ!
ನೀರಿನ ಸಮಸ್ಯೆ ಹೀಗೇ ಮುಂದುವರಿದರೆ ತವರು ಮನೆಯಲ್ಲಿ ನೆಲಸಬೇಕಾದ ಆತಂಕ ಕಾಡುತ್ತಿದೆ. ರಜೆಯಲ್ಲಿ ಸಂಬಂಧಿಕರು, ಮಕ್ಕಳು ಬರದಂತೆ ತಿಳಿಸಿದ್ದೇವೆ. ನಗರಸಭೆ ಬಿಡುವ ನೀರು ಮನೆಯ ನಾಲ್ವರಿಗೂ ಸಾಲುತ್ತಿಲ್ಲ. ಸಂಬಂಧಿಕರು ಬಂದರೆ ನಿತ್ಯ ಟ್ಯಾಂಕರ್‌ ನೀರು ಪಡೆಯಬೇಕಾದ ಪರಿಸ್ಥಿತಿ ಎದುರಾಗಬಹುದು.
-ವೀಣಾ, ದೊಡ್ಡಣಗುಡ್ಡೆ.

ಕಾರ್ಯಕ್ರಮಗಳಿಗೆ ಹೋಗುತ್ತಿಲ್ಲ
ಒತ್ತಡ ಕಡಿಮೆ ಇರುವುದರಿಂದ ನೀರು ತುಂಬಿಸಲು ಗಂಟೆಗಟ್ಟಲೆ ಕಾಯ ಬೇಕಾಗಿದೆ. ಇದರಿಂದಾಗಿ ಸಂಬಂಧಿಕರ ಮನೆಯ ಶುಭಸಮಾರಂಭಗಳಿಗೆ ಹೋಗುವಂತಿಲ್ಲ.
-ಶಾಲಿನಿ, ದೊಡ್ಡಣಗುಡ್ಡೆ 1ನೇ ಕ್ರಾಸ್‌

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.