ನಾನ್ ಸಿಆರ್ಝಡ್ : ಪ್ರತ್ಯೇಕ ಮರಳು ನೀತಿ ಚರ್ಚೆ
Team Udayavani, Nov 11, 2022, 8:10 AM IST
ಉಡುಪಿ: ಕರಾವಳಿ ಭಾಗದ ನಾನ್ ಸಿ.ಆರ್.ಝಡ್. ವ್ಯಾಪ್ತಿಗೆ ಪ್ರತ್ಯೇಕ ಮರಳು ನೀತಿ ರಚಿಸುವುದರ ಸಹಿತ ಹಲವು ವಿಷಯಗಳ ಕುರಿತು ಗುರುವಾರ ವಿಧಾನಸೌಧದಲ್ಲಿ ನಡೆದ ಸರಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ.
ಸಮಿತಿಯ ಅಧ್ಯಕ್ಷ ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಸಭೆ ನಡೆದ ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು. ಮರಳಿಗೆ ಸಂಬಂಧಿಸಿ ವಿಷಯ ಪ್ರಸ್ತಾವಿಸಿದ ಶಾಸಕರು, ಕರಾವಳಿ ಭಾಗದ ನಾನ್ ಸಿ.ಆರ್.ಝಡ್. ವ್ಯಾಪ್ತಿಗೆ ಪ್ರತ್ಯೇಕ ಮರಳು ನೀತಿ ರಚಿಸುವುದು, ಸಿ.ಆರ್.ಝಡ್. ವ್ಯಾಪ್ತಿಯಲ್ಲಿ ತತ್ಕ್ಷಣ ಮರಳುಗಾರಿಕೆ ಪ್ರಾರಂಭಿಸುವುದು ಹಾಗೂ ಮುಳುಗಿ ಮರಳು ತೆಗೆಯುವ ಸಾಂಪ್ರದಾಯಿಕ ಮರಳು ಪದ್ಧತಿಗೆ ಅವಕಾಶ ಕಲ್ಪಿಸುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ತತ್ಕ್ಷಣ ಈ ಎಲ್ಲ ಪ್ರಕ್ರಿಯೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಡಾ| ರಮಣ ರೆಡ್ಡಿ, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೆಐಎಡಿಬಿ ಸಿಇಒ ಆರ್. ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಉ.ಕ. ಜಿಲ್ಲಾಧಿಕಾರಿ ಪ್ರಭುಲಿಂಗ ಕಾವಳಕಟ್ಟಿ, ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು