ಬೋರ್‌ವೆಲ್‌ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿ

ಸರಳೇಬೆಟ್ಟಿನಲ್ಲಿ ನೀರಿಗಾಗಿ ಜನರ ಅಲೆದಾಟ ; ರಜೆ ಹಾಕಿ ನೀರು ಸಂಗ್ರಹ

Team Udayavani, May 12, 2019, 6:00 AM IST

0405UDTP02

ವಿಜಯನಗರ ಹಾಳಾದ ಬೋರ್‌ವೆಲ್‌.

ಇಲ್ಲಿನ ಬೋರ್‌ವೆಲ್‌ಗ‌ಳಲ್ಲಿ ನೀರಿದ್ದರೂ ನಿರ್ವಹಣೆಯಿಲ್ಲದೆ ಸಮಸ್ಯೆಯಾಗಿದೆ. ನಗರಸಭೆ ನೀರಿಗೆ ಕಾಯುವುದು ಕಷ್ಟ. ಟ್ಯಾಂಕರ್‌ ನೀರು ಕೂಡ ಕಷ್ಟ ಎಂಬಂತಾಗಿದೆ ಸರಳೇಬೆಟ್ಟು ನಿವಾಸಿಗಳ ಸ್ಥಿತಿ.

ಉಡುಪಿ:ಸರಳೇಬೆಟ್ಟು ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಹೆಚ್ಚಿದ್ದು, ಜನ ಅಲೆದಾಡಬೇಕಾಗಿದೆ.ಬೋರ್‌ವೆಲ್‌ಗ‌ಳಲ್ಲಿ ನೀರಿದ್ದರೂ ಬವಣೆ ತಪ್ಪಿಲ್ಲ.ಗಂಡಸರು ಕೆಲಸಕ್ಕೆ ರಜೆ ಹಾಕಿ ದೂರ ಪ್ರದೇಶಗಳಿಂದ ನೀರು ಹೊತ್ತು ತರುತ್ತಿದ್ದಾರೆ. ಸಮಸ್ಯೆ ತೀವ್ರವಾಗಿರುವ ನೆಹರೂನಗರ, ವಿಜಯನಗರ ಹಾಗೂ ಗಣೇಶ್‌ಬಾಗ್‌ ಮೊದಲಾದೆಡೆ ಉದಯವಾಣಿ ತಂಡ ಭೇಟಿ ನೀಡಿದಾಗ ಅಲ್ಲಿನ ಜನರು ಸಮಸ್ಯೆ ಬಿಚ್ಚಿಟ್ಟಿದ್ದಾರೆ.

ದನಕರುಗಳಿಗೆ ನೀರಿಲ್ಲ
ಮನುಷ್ಯರಿಗೆ ಕುಡಿಯಲು ನೀರಿಲ್ಲ. ಇದರ ನಡುವೆ ಮೂಕ ಪ್ರಾಣಿಗಳ ವೇದನೆ ಬೇರೆ. ಈಗ ಬಾವಿ ನೀರೂ ಬತ್ತಿದೆ. ನಗರಸಭೆಯ ನೀರು ನಂಬಿದರೆ ಪ್ರಯೋಜನವಿಲ್ಲ. ಮನೆಯಲ್ಲಿ 4 ದನಗಳಿಗೆ ಪ್ರತಿನಿತ್ಯ ಸುಮಾರು ಕನಿಷ್ಟ 12 ಬಕೆಟ್‌ ನೀರಾದರೂ ಬೇಕು. ಆದರೆ ನಾವು ಕೆವಲ 8 ಬಕೆಟ್‌ ಮಾತ್ರ ನೀಡುತ್ತಿದ್ದೇವೆ. ಬೇಸಗೆಯಾಗಿರುವುದರಿಂದ ಪ್ರಾಣಿಗಳು ನೀರಿಗಾಗಿ ರೋದಿಸುತ್ತಿವೆ. ಹೀಗೆ ಮುಂದುವರಿದರೆ ಅವುಗಳನ್ನು ಮಾರಾಟ ಮಾಡಬೇಕಾಗುತ್ತದೆ ಎನ್ನುತ್ತಾರೆ ಸರಳೆಬೆಟ್ಟು ನಿವಾಸಿ ಮೀನಾಕ್ಷಿ ಆತಂಕ ವ್ಯಕ್ತಪಡಿಸಿದರು.

ಬೋರ್‌ವೆಲ್‌ ಪ್ರಯೋಜನಕ್ಕಿಲ್ಲ ವಾರ್ಡ್‌ನಲ್ಲಿರುವ ಬೋರ್‌ವೆಲ್‌ಗ‌ಳು ಊಟಕ್ಕಿಲ್ಲದ ಉಪ್ಪಿನಕಾಯಿಗಳಂತಾಗಿವೆ. ಸರಿಯಾದ ನಿರ್ವಹಣೆಯಿಲ್ಲದೆ ಹಾಳಾಗಿವೆ. ಟ್ಯಾಂಕರ್‌ ನೀರಿನ್ನೇ ಅವಲಂಬಿಸಬೇಕಾಗಿದೆ ಎನ್ನುತ್ತಾರೆ ನೆಹರೂ ನಗರದ ನಿವಾಸಿ ವಿಜಯ ಕುಮಾರ್‌.

ವಾರಕ್ಕೊಮ್ಮೆ ರಜೆ
ಮೂರು ದಿನಕ್ಕೆ ಒಮ್ಮೆ ಬರುವ ನೀರು ದಿನ ಬಳಕೆಗೂ ಸಾಕಾಗುತ್ತಿಲ್ಲ. ದೂರದ ಎತ್ತರ ಪ್ರದೇಶಕ್ಕೆ ಸಾಗಿ ನೀರು ತರಬೇಕು.

ಮಹಿಳೆಯರಿಗೆ ಅದು ಕಷ್ಟ ಸಾಧ್ಯ. ಅದಕ್ಕಾಗಿ ಮನೆ ಗಂಡಸರು ವಾರಕ್ಕೊಮ್ಮೆ ರಜೆ ಹಾಕಿ ದೂರದ ಪ್ರದೇಶಗಳಿಗೆ ತೆರಳಿ ನೀರು ತರುತ್ತಾರೆ. ನೀರಿನ ಸಮಸ್ಯೆಯಿಂದಾಗಿ ಮನೆಯ ಹೊರಗೂ ಹಾಗೂ ಒಳಗೂ ದುಡಿಯುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳುತ್ತಾರೆ ಗಣೇಶ್‌ಭಾಗ್‌ ನಿವಾಸಿ ಭಾಸ್ಕರ್‌.

ವಾರ್ಡ್‌ ಜನರ ಬೇಡಿಕೆ
– ಟ್ಯಾಂಕರ್‌ ನೀರು ಒದಗಿಸಿ
– ಹಾಳಾಗಿರುವ ಬೋರ್‌ವೆಲ್‌ ದುರಸ್ತಿಗೊಳಿಸಿ.
– ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಿ

ಸಮಸ್ಯೆಹೆಚ್ಚಾಗಿದೆ
ನೀರಿನ ಸಮಸ್ಯೆ ಹೆಚ್ಚಾಗಿರುವ ಕಡೆ ಟ್ಯಾಂಕರ್‌ ಮೂಲಕ ನೀರು ನೀಡಲಾಗುತ್ತಿದೆ. ಎತ್ತರ ಪ್ರದೇಶವಾದ ಗಣೇಶ್‌ಭಾಗ್‌, ವಿಜಯ ನಗರ ಹಾಗೂ ನೆಹರೂ ನಗದಲ್ಲಿ ಸಮಸ್ಯೆ ಹೆಚ್ಚಾಗಿದೆ.
– ವಿಜಯಲಕ್ಷ್ಮೀ,
ನಗರಸಭೆ ಸದಸ್ಯರು.

ನೀರು ಸಾಕಾಗುತ್ತಿಲ್ಲ
ನಗರ ಸಭೆ ಕೊಡುವ ನೀರು ಸಾಕಾಗುತ್ತಿಲ್ಲ. ಇತರೆ ಪ್ರದೇಶಕ್ಕೆ ಹೋಗಿ ನೀರು ತರುವುದು ಕಷ್ಟ ಸಾಧ್ಯ. ನಗರಸಭೆ ಹಾಳಾಗಿರುವ ಬೋರ್‌ವೆಲ್‌ಗ‌ಳನ್ನು ರಿಪೇರಿ ಮಾಡಿ ಸ್ಥಳೀಯರಿಗೆ ನೀರು ಬಳಕೆ ಮಾಡಲು ಅನುವು ಮಾಡಿಕೊಡಬೇಕು.
– ಸುಶೀಲಾ,
ವಿಜಯನಗರ ನಿವಾಸಿ.

ಉದಯವಾಣಿ ಆಗ್ರಹ
ಸರಳೆಬೆಟ್ಟು ವಾರ್ಡ್‌ನಲ್ಲಿ ಹಾಳಾಗಿರುವ ಬೋರವೆಲ್‌ ದುರಸ್ತಿಗೊಳಿಸಿ ಜನರಿಗೆ ನೀರು ಬಳಸಲು ಅವಕಾಶ ಕಲ್ಪಿಸಬೇಕು.

ಮಾಹಿತಿ ನೀಡಿ
ನೀರಿನ ತೀವ್ರ ಸಮಸ್ಯೆಇದ್ದಲ್ಲಿ ತಮ್ಮ ಹೆಸರಿನ ಸಹಿತ “ಉದಯವಾಣಿ’ ವಾಟ್ಸಪ್‌ ನಂಬರ್‌ 9148594259 ಮಾಹಿತಿ ಕಳುಹಿಸಿ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.