ಲೈಟ್‌ಹೌಸ್‌ನಲ್ಲಿ  ಇನ್ನೂ ಆಗಿಲ್ಲ  ನಾಡದೋಣಿ ಬಂದರು


Team Udayavani, Feb 4, 2019, 1:00 AM IST

light-house.jpg

ಗಂಗೊಳ್ಳಿ: ನಾಡದೋಣಿ ಮೀನುಗಾರಿಕೆ ನಡೆಯುವ ಪ್ರಮುಖ ಪ್ರದೇಶಗಳಲ್ಲಿ ಗಂಗೊಳ್ಳಿ ಕೂಡ ಒಂದಾಗಿದ್ದು, ಇಲ್ಲಿನ ಲೈಟ್‌ಹೌಸ್‌ ಬಳಿ ಅನೇಕ ವರ್ಷಗಳಿಂದ ನಾಡದೋಣಿಗಳ ನಿಲುಗಡೆಗೆ ಅನುಕೂಲವಾಗುವಂತೆ ಬಂದರು ನಿರ್ಮಾಣ ಬೇಡಿಕೆಯಿದ್ದರೂ, ಇನ್ನೂ ಕೂಡ ಸರಕಾರದಿಂದ ಮನ್ನಣೆ ಸಿಕ್ಕಿಲ್ಲ. 

ಗಂಗೊಳ್ಳಿಯಲ್ಲಿ ನಾಡದೋಣಿ ಹಾಗೂ ಯಾಂತ್ರೀಕೃತ ಎರಡೂ ವಿಧದ ಮೀನುಗಾರಿಕೆ ನಡೆಯುತ್ತಿದ್ದು, ಬೇಸಗೆಯಲ್ಲಿ ನಾಡದೋಣಿಗಳು ಕೂಡ ಗಂಗೊಳ್ಳಿಯ ಬಂದರಿನಲ್ಲಿ ನಿಲುಗಡೆ ಮಾಡಲಾಗುತ್ತದೆ. ಆದರೆ ಮಳೆಗಾಲದಲ್ಲಿ  ಲೈಟ್‌ಹೌಸ್‌ ಬಳಿಯೇ ಎಲ್ಲ ನಾಡದೋಣಿಗಳನ್ನು ನಿಲ್ಲಿಸುತ್ತಾರೆ. ಆದರೆ ಇಲ್ಲಿ ನಿಲುಗಡೆಗೆ ಬೇಕಾದ ಯಾವುದೇ ಸವಲತ್ತುಗಳಿಲ್ಲ. 

600 ನಾಡದೋಣಿಗಳು
ಗಂಗೊಳ್ಳಿಯಲ್ಲಿ 600 ನಾಡದೋಣಿಗಳಿದ್ದು, 1 ಜೋಡು (3 ದೋಣಿ )ನಲ್ಲಿ ತಲಾ 10 ಮಂದಿಯಂತೆ 30 ಜನ ಇರುತ್ತಾರೆ. ಇಲ್ಲಿ ಸರಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಈ ನಾಡದೋಣಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. 

ಜಾಗದ ಸಮಸ್ಯೆ
ಗಂಗೊಳ್ಳಿ ಬಂದರಿನಲ್ಲಿ ಪರ್ಸಿನ್‌, ಟ್ರಾಲ್‌ ಬೋಟ್‌ಗಳು, ಗಿಲ್‌ನೆಟ್‌, ಪಾತಿ ಹಾಗೂ ನಾಡದೋಣಿಗಳೆಲ್ಲ ಸೇರಿ ಒಟ್ಟು 3,700 ಕ್ಕೂ ಹೆಚ್ಚು ಬೋಟು ಹಾಗೂ ನಾಡದೊಣಿಗಳಿವೆ. ಈಗ ಇಲ್ಲಿನ ಬಂದರಿನಲ್ಲಿರುವ ಜೆಟ್ಟಿಯು ಕೂಡ 2-3 ಕಡೆ ಕುಸಿದಿರುವುದರಿಂದ ಇಲ್ಲಿ ದೋಣಿಗಳನ್ನು ನಿಲ್ಲಿಸಲು ಜಾಗದ ಸಮಸ್ಯೆಯಾಗುತ್ತಿದೆ. 

ಸಚಿವರಿಗೆ ಮನವಿ
ಗಂಗೊಳ್ಳಿಯ ಲೈಟ್‌ಹೌಸ್‌ ಬಳಿ ನಾಡದೋಣಿಗಳಿಗೆ ಅನುಕೂಲವಾಗುವಂತೆ ಜೆಟ್ಟಿ ನಿರ್ಮಿಸಲು 2-3 ವರ್ಷದ ಹಿಂದೆ ಆಗಿನ ಮೀನುಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದೆವು. ಈಗಿನ ಮೀನುಗಾರಿಕಾ ಸಚಿವರು ಇಲ್ಲಿಗೆ ಭೇಟಿ ಕೊಟ್ಟಾಗಲೂ ಅವರ ಗಮನಕ್ಕೆ ತರಲಾಗಿತ್ತು. ಆದರೆ ಇನ್ನೂ ಯಾವುದೇ ಬೆಳವಣಿಗೆಗಳು ನಡೆಯುತ್ತಿರುವುದು ಕಾಣುತ್ತಿಲ್ಲ. ಇಲ್ಲಿ ಜೆಟ್ಟಿ ಆದರೆ ಮಳೆಗಾಲದಲ್ಲಿ ನಾಡದೋಣಿ ಮೀನುಗಾರರಿಗೆ ತುಂಬ ಪ್ರಯೋಜನವಾಗಲಿದೆ. 
– ಮಂಜು ಬಿಲ್ಲವ,  ಅಧ್ಯಕ್ಷರು, ಗಂಗೊಳ್ಳಿ  ನಾಡದೋಣಿ ಮೀನುಗಾರರ ಸಂಘ

 ಪ್ರಾಮಾಣಿಕ ಪ್ರಯತ್ನ 
ಗಂಗೊಳ್ಳಿಯ ನಾಡದೋಣಿ ಮೀನುಗಾರರ ಈ ಬೇಡಿಕೆ ಬಗ್ಗೆ ಪರಿಶೀಲಿಸಿ ಜೆಟ್ಟಿ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದರೊಂದಿಗೆ ಗಂಗೊಳ್ಳಿ ಬಂದರಿನ ಅಭಿವೃದ್ಧಿ ಬಗ್ಗೆಯೂ ಈಗಾಗಲೇ ಬೆಂಗಳೂರಿನಲ್ಲಿ ಮಾತುಕತೆ ನಡೆಸಲಾಗಿದೆ. ಜತೆಗೆ ಗಂಗೊಳ್ಳಿ ಹಾಗೂ ಕುಂದಾಪುರವನ್ನು ಹತ್ತಿರವಾಗಿಸುವ ನಿಟ್ಟಿನಲ್ಲಿ ಕೋಡಿಯಲ್ಲಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಿದ್ದೇನೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ. 
– ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.