Udupi: ಮೀನುಗಾರಿಕೆಗೆ ತೆರಳದಂತೆ ಸೂಚನೆ
Team Udayavani, Oct 17, 2023, 2:53 PM IST
ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿದೆ. ಹವಾಮಾನ ಇಲಾಖೆ ಸೂಚನೆಯಂತೆ ಅರಬಿ ಸಮುದ್ರ ದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ನೆಲೆಯಲ್ಲಿ 4 ದಿನಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಕಾರ್ಕಳ, ಉಡುಪಿ, ಕುಂದಾಪುರ, ಕಾಪು, ಹೆಬ್ರಿ, ಬ್ರಹ್ಮಾವರ, ಸಿದ್ದಾಪುರ, ಹಾಲಾಡಿ, ಬೈಂದೂರು, ಬೆಳ್ಮಣ್, ಶಿರ್ವ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಹಲವು ಮನೆಗಳಿಗೆ ಹಾನಿ ಸಂಭವಿಸಿದೆ. ಬೆ
ಳಗ್ಗೆ ಸಾಧಾರಣ ಮಳೆಯಾಗಿದ್ದು, ಮಧ್ಯಾಹ್ನ ಅನಂತರ ನಿರಂತರ ಮಳೆಯಾಗಿದೆ. ಉಡುಪಿ ರಸ್ತೆಗಳಲ್ಲಿ (ರಾ.ಹೆ.) ಹಲವೆಡೆ ಮಳೆ ನೀರು ನಿಂತು ಸಮಸ್ಯೆಯಾಗಿತ್ತು. ಪೆರ್ಡೂರಿನ ಪಾಡಿಗಾರಿನಲ್ಲಿ ಲಿಂಗಯ್ಯ ಪೂಜಾರಿ ಅವರ ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷೆ ಚೇತನಾ, ಉಪಾಧ್ಯಕ್ಷೆ ದೇವು ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.