ಈಗಲೇ ನದಿಗಳಲ್ಲಿ ನೀರಿಲ್ಲ, ಬೇಸಗೆ ಹೇಗೆ?


Team Udayavani, Sep 18, 2018, 12:36 PM IST

swarna.png

ಪಶ್ಚಿಮ ಘಟ್ಟ  ನಾಶದ ಒಂದೊಂದೇ ಪರಿಣಾಮ ಗೋಚರಕ್ಕೆ ಬರುತ್ತಿದೆ. ಕರಾವಳಿಯಂಥ ಭಾಗದಲ್ಲಿ ಸೆಪ್ಟಂಬರ್‌ನಲ್ಲೇ ಬಿಸಿಲು ಹೆಚ್ಚಾಗಿ, ನವೆಂಬರ್‌ ಸುಮಾರಿನಲ್ಲೇ ಬೇಸಗೆಯ ಬವಣೆ ಆರಂಭವಾಗುವ ಆತಂಕ ಎದುರಾಗಿದೆ. ಇದ್ದ ಮರಗಳನ್ನೆಲ್ಲ ಬೃಹತ್‌ ಯೋಜನೆಗೆ ಕಡಿದುರುಳಿಸಿ ಕುರುಚಲು ಗಿಡಗಳನ್ನೇ ಕಾಡೆಂದು ಬಿಂಬಿಸುವ ಪ್ರಯತ್ನ ನಡೆದಿರುವುದೂ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಉಡುಪಿ: ಆಗಸ್ಟ್‌ನಲ್ಲಿ ಸುರಿದ ಮಳೆಯಿಂದ ಕೇರಳ, ಕೊಡಗು, ದ.ಕ. ಜಿಲ್ಲೆಯ ಆಂಶಿಕ ಭಾಗದಲ್ಲಿ ವಿಪರೀತ ಹಾನಿಯಾಗಿತ್ತು. ದ.ಕ., ಕೊಡಗು ಜಿಲ್ಲೆಗಿಂತ ಹೆಚ್ಚು ಮಳೆ ಉಡುಪಿ ಜಿಲ್ಲೆಯಲ್ಲಿ ಸುರಿಯಿತು. ಕರಾವಳಿ ಭಾಗದಲ್ಲಿ ಈ ಬಾರಿ ಕುಡಿಯುವ ನೀರಿಗೇ ತತ್ವಾರ ಉಂಟಾಗುವ ಸ್ಥಿತಿಯ ಮುನ್ಸೂಚನೆ ಇದೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 3,737 ಮಿ.ಮೀ. ಮಳೆಯಾಗಿದೆ. ಇದು ವಾಡಿಕೆಯ ಮಳೆಗಿಂತ ಕೇವಲ 146 ಮಿ.ಮೀ. ಕಡಿಮೆ. ಜಿಲ್ಲೆಯಲ್ಲಿ ಈ ಬಾರಿ ಒಂದೇ ಸಮನೆ ಮೂರು ಬಾರಿ ದೊಡ್ಡ ಮಟ್ಟದ ಮಳೆ ಸುರಿಯಿತು. ಇದರಿಂದ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಯಿತು. ಆದರೆ ಈಗ ಕೇರಳದಂತೆಯೇ ಕರಾವಳಿಯಲ್ಲೂ ನದಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿದಿದೆ. 

ಈಗ ಸೆಪ್ಟಂಬರ್‌ನಲ್ಲೂ ನವೆಂಬರ್‌ನ ಸ್ಥಿತಿ ನದಿಗಳಲ್ಲಿವೆ. ಒಂದು ತಿಂಗಳಿನಿಂದ ಮಳೆ ಬಂದಿಲ್ಲ. ಕಳೆದ ವರ್ಷ ಸ್ವರ್ಣಾನದಿಯ ಹಿರಿಯಡಕ ಭಾಗದಲ್ಲಿ 50 ಅಶ್ವಶಕ್ತಿ ಮೋಟರಿನಷ್ಟು ನೀರು ಹರಿಯುತ್ತಿದ್ದರೆ ಈಗ 5-10 ಅಶ್ವಶಕ್ತಿಯಷ್ಟು ಮಾತ್ರ ಹರಿಯುತ್ತಿದೆ. ಮನೆ ಸಮೀಪದ ಸಣ್ಣ ತೋಡುಗಳೂ ಒಣಗಿವೆ ಎನ್ನುತ್ತಾರೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಸುರೇಶ ನಾಯಕ್‌ ಮುಂಡುಜೆ ಅವರು.

ಕಾಂಕ್ರೀಟ್‌ ಕಾಮಗಾರಿಯೂ ಕಾರಣ?
ಒಂದೇ ಸಮನೆ ಮಳೆ ಬಂದ ಕಾರಣ ನೀರು ಇಂಗದೆ ಸಮುದ್ರಕ್ಕೆ ಹೋದದ್ದು, ಅನಂತರ ನಿರಂತರ ಮಳೆ ಬಾರದೆ ಇದ್ದದ್ದು ನದಿಗಳಲ್ಲಿ ನೀರಿನ ಹರಿಯುವಿಕೆ ಕಡಿಮೆಯಾಗಲು ಕಾರಣ. ಬಾವಿಗಳಲ್ಲಿಯೂ ನೀರು ಇಳಿಯುತ್ತಿದೆ. ಎಲ್ಲೆಲ್ಲಿ ಕಾಂಕ್ರೀಟ್‌ ರಚನೆಗಳು ಆಗುತ್ತಿವೆಯೋ ಅಲ್ಲಿ ಎಷ್ಟೇ ಮಳೆ ಬಂದರೂ ನೀರು ಇಂಗದು. ಹಿಂದೆ ಮನೆಯಂಗಳಕ್ಕೆ ಸಿಮೆಂಟ್‌ ಹಾಕುತ್ತಿರಲಿಲ್ಲ. ಇದು ಬಾವಿಯ ಅಂತರ್ಜಲ ಹೆಚ್ಚಿಸಲು ಸಹಕಾರಿಯಾಗುತ್ತಿತ್ತು. ಈಗ ಮನೆ ಅಂಗಳದಿಂದ ಹಿಡಿದು ಪ್ರತಿ ರಸ್ತೆಗೂ ಕಾಂಕ್ರೀಟ್‌ ಹಾಕಲಾಗುತ್ತಿದೆ. ವಿಶೇಷವಾಗಿ ಉಡುಪಿಯಂಥ ನಗರ ಪ್ರದೇಶಗಳಲ್ಲಿ 400 ಮಿ.ಮೀ. ಮಳೆ ಬಂದರೂ ಕಾಂಕ್ರೀಟ್‌ ರಸ್ತೆಯಡಿ ನೀರಿನ ತೇವಾಂಶವಿರದು. ಇದರಿಂದ ನಗರದಲ್ಲಿ ವಿಶೇಷವಾಗಿ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರ ಸಂಸ್ಥೆಗಳು ನೀರು ಕೊಡುತ್ತವೆ ಎಂದು ಕೆಲವರು ಬಾವಿ ಮುಚ್ಚಿದರು. ಇದೇ ಹೊತ್ತಿಗೆ ಒಳಚರಂಡಿ, ತೆರೆದ ಚರಂಡಿಯಂಥ ಸಮಸ್ಯೆಯಿಂದ ಬಾವಿಯ ನೀರೂ ಹಾಳಾಗಿ ಬಾವಿ ಮುಚ್ಚಲು ಕಾರಣ ಒದಗಿಸಿತು. ಈಗ ಸರಕಾರಕ್ಕೂ ನೀರು ಪೂರೈಸುವುದು ಕಷ್ಟವಾಗುತ್ತಿದೆ.

ಬೇಸಗೆಯಂತೆ ಬಿಸಿಲು
ಸ್ವರ್ಣಾ ನದಿಯಲ್ಲಿ ನೀರಿನ ಒಳ ಹರಿವು ಜನವರಿವರೆಗೆ ಇರುತ್ತಿತ್ತು. ಈಗಿನ ಸ್ಥಿತಿ ಮುಂದುವರಿದರೆ ಜನವರಿಯಲ್ಲೇ ಕುಡಿಯುವ ನೀರಿನ ಕೊರತೆ ಆದೀತೆಂಬ ಭಯ ಕಾಡುತ್ತಿದೆ. ಒಂದು ವಾರ ದಿಂದ ಎಪ್ರಿಲ್‌-ಮೇ ತಿಂಗಳಂತೆ ಬಿಸಿಲಿದೆ. ಈ ಕಾರಣದಿಂದಲೂ ನದಿಗಳ ನೀರು ವೇಗವಾಗಿ ಆವಿಯಾಗುತ್ತಿದೆ ಎನ್ನಲಾಗುತ್ತಿದೆ. ಈಗಲೇ ಬಿಸಿಲು ಹೀಗಿದ್ದರೆ ಎಪ್ರಿಲ್‌ ಕಥೆ ಏನು ಎಂಬುದು ಜನರ ಪ್ರಶ್ನೆ. ಸುಮಾರು 30-40 ವರ್ಷಗಳ ಹಿಂದೆ ಇದೇ ಸಮಯ ಬೆಟ್ಟು ಗದ್ದೆಗಳು ಒಣಗಿದ್ದವು. ಈಗ ಅದಕ್ಕಿಂತ ಭೀಕರ ಸ್ಥಿತಿ ಎದುರಾಗಿದ್ದು, ರಸ್ತೆ ಬದಿಯ ಹುಲ್ಲುಗಳೂ ಒಣಗಿವೆ.

ಒಂದೇ ಸಮನೆ ಮಳೆ ಬಂದು ಹೋದುದೇ ಇದಕ್ಕೆ ಕಾರಣ. ಕೆಲವೇ ದಿನಗಳಲ್ಲಿ ಭಾರೀ ಮಳೆ ಬಂದ ಕಾರಣ ನೀರು ಭೂಮಿಯಲ್ಲಿ ಇಂಗಲು ಸಾಧ್ಯವಾಗದೆ ಸಮುದ್ರಕ್ಕೆ ಹರಿದುಹೋಯಿತು. ಈ ಪ್ರಾಕೃತಿಕ ಅಸಮತೋಲನಕ್ಕೆ ಪಶ್ಚಿಮ ಘಟ್ಟದ ಬೃಹತ್ತಾದ ಮರಗಳ ಅವ್ಯಾಹತ ನಾಶವೇ ಕಾರಣ. ನಮಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಮಾತ್ರ ನೀರು ಸಿಗುತ್ತದೆ ಎನ್ನುತ್ತಾರೆ ಪರಿಸರ ತಜ್ಞ, ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಎನ್‌.ಎ. ಮಧ್ಯಸ್ಥ.

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.