ಪ್ರೌಢ ಮಕ್ಕಳಿಗಿಲ್ಲ ಮೊಟ್ಟೆ,ಬಾಳೆಹಣ್ಣು,ಚಿಕ್ಕಿ! ಸರಕಾರದ ತಾರತಮ್ಯ ನೀತಿಗೆ ಆಕ್ಷೇಪ

1 ರಿಂದ 8ನೇ ತರಗತಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ

Team Udayavani, Aug 22, 2022, 7:05 AM IST

1 ರಿಂದ 8ನೇ ತರಗತಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ

ಕಾಪು: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸರಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು, ನೆಲಗಡಲೆಯ ಚಿಕ್ಕಿ ವಿತರಿಸುತ್ತಿವೆ. ಆದರೆ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಯೋಜನೆಯಿಂದ ಕೈಬಿಟ್ಟಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಎರಡು ವಾರಗಳ ಹಿಂದೆ ಆರಂಭವಾದ ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯನ್ನು ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರುವ ಮುನ್ನವೇ ಯೋಜನೆಯ ಬಗ್ಗೆ ಅಪಸ್ವರ ಎದ್ದಿದೆ. 9 ಮತ್ತು 10ನೇ ತರಗತಿಯ ಮಕ್ಕಳನ್ನು ಹೊರಗಿಟ್ಟಿರುವುದು ವಿದ್ಯಾರ್ಥಿಗಳಲ್ಲಿ ಭಾರೀ ನಿರಾಸೆಗೆ ಕಾರಣವಾಗಿದೆ.

ಪ್ರತೀ ವಿದ್ಯಾರ್ಥಿಗೆ 6 ರೂ. ವೆಚ್ಚ
ಈ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಲಾಗಿದ್ದು ಕೇಂದ್ರ ಸರಕಾರ ಶೇ. 60, ರಾಜ್ಯ ಸರಕಾರ ಶೇ. 40 ಅನುದಾನವನ್ನು ಭರಿಸಲಿದೆ. ಶೈಕ್ಷಣಿಕ ಸಾಲಿನ 46 ದಿನ ವಾರಕ್ಕೆ 2 ಮೊಟ್ಟೆ, ಅಥವಾ 2 ಬಾಳೆ ಹಣ್ಣು ಇಲ್ಲವೇ ನೆಲಕಡಲೆ, ಏಲಕ್ಕಿ ಮತ್ತು ಬೆಲ್ಲದಿಂದ ತಯಾರಿಸಿದ ಚಿಕ್ಕಿಯನ್ನು ವಿತರಿಸಲಾಗುತ್ತದೆ. ಇದಕ್ಕಾಗಿ ಪ್ರತೀ ವಿದ್ಯಾರ್ಥಿಗೆ ದಿನವೊಂದಕ್ಕೆ 6 ರೂ. – ವಾರ್ಷಿಕ 280 ರೂ. ಖರ್ಚಾಗಲಿದೆ. ಎಸ್‌ಡಿಎಂಸಿ ಮತ್ತು ಶಿಕ್ಷಕರಿಗೆ ಇದರ ಹೊಣೆ ವಹಿಸಲಾಗಿದೆ ಎಂದು ಉಡುಪಿ ಜಿ.ಪಂ. ಅಕ್ಷರ ದಾಸೋಹ ವಿಭಾಗದ ಅಧಿಕಾರಿ ವಿವೇಕಾನಂದ ಗಾಂವ್ಕರ್‌ ತಿಳಿಸಿದ್ದಾರೆ.

ಶಿಕ್ಷಕರಿಗೆ ಸಂಕಷ್ಟ
ಸರಕಾರಿ, ಅನುದಾನಿತ ಪ್ರೌಢ ಶಾಲೆಗಳಲ್ಲಿ 1ರಿಂದ 7 ಮತ್ತು 8, 9, 10ನೇ ತರಗತಿಗಳು ಜತೆಗೇ ಇದ್ದು ಸರಕಾರದ ನಿಯಮಾವಳಿಯಿಂದಾಗಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ತಾರತಮ್ಯ ಎಸಗುತ್ತಿದ್ದೇವೆ ಎಂಬ ಅಪರಾಧಿ ಭಾವ ಶಿಕ್ಷಕರನ್ನು ಕಾಡುತ್ತಿದೆ. 1ರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ತಿನ್ನುತ್ತಿದ್ದರೆ 9 ಮತ್ತು 10ನೇ ತರಗತಿಯ ಮಕ್ಕಳು ಆಸೆಗಣ್ಣುಗಳಿಂದ ನೋಡುವಾಗ ಶಿಕ್ಷಕರ ಮನಸ್ಸು ಮರುಗುತ್ತದೆ.
ಸರಕಾರದ ಯೋಜನೆ ಉಪಯುಕ್ತವಾಗಿದೆ. ಆದರೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಹೊರಗಿಟ್ಟಿರುವುದು ಸರಿಯಲ್ಲ; ಸರಕಾರ ಅವರಿಗೂ ವಿತರಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರದ ನಿಯಮದಂತೆ 1ರಿಂದ 7ನೇ ತರಗತಿ ಪ್ರಾಥಮಿಕ ವಿಭಾಗದಲ್ಲಿದ್ದು ಈ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು ಮತ್ತು ಚಿಕ್ಕಿ ವಿತರಿಸಲಾಗುತ್ತಿದೆ. ಆರ್‌ಟಿಇ ಪ್ರಕಾರದಲ್ಲಿ 8ನೇ ತರಗತಿ ಕೂಡ ಪ್ರಾಥಮಿಕ ವಿಭಾಗದಲ್ಲಿ ಇರುವುದರಿಂದ ಆ ಮಕ್ಕಳಿಗೂ ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ. ಎಲ್ಲರಿಗೂ ಮೊಟ್ಟೆ ಅಥವಾ ಪೌಷ್ಟಿಕಾಂಶಯುತ ಆಹಾರ ಪೂರೈಕೆ ಕಷ್ಟ ಸಾಧ್ಯ. ಈ ಬಗ್ಗೆ ಮುಂದೆ ಯೋಚಿಸಲಾಗುವುದು.
– ಬಿ.ಸಿ. ನಾಗೇಶ್‌, ಶಿಕ್ಷಣ ಸಚಿವರು

-ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.