ಯು.ಆರ್. ರಾವ್ ಸಾಧನೆ ಅಪಾರ: ಪೇಜಾವರ ಶ್ರೀ
Team Udayavani, Jul 27, 2017, 9:10 AM IST
ಅಗಲಿದ ವಿಜ್ಞಾನಿಗೆ ಉಡುಪಿಯಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ
ಉಡುಪಿ: ಇಸ್ರೋ ಮೂಲಕ ದೇಶದ ಪ್ರಗತಿಗೆ ಅಗಾಧವಾದ ಕೊಡುಗೆ ನೀಡಿರುವ ಯು.ಆರ್. ರಾವ್ ಅವರ ಸಂಶೋಧನೆ, ಸಾಧನೆ ಅಪಾರ. ಸರಳ, ಸಜ್ಜನ ವ್ಯಕ್ತಿತ್ವದ ಅವರಿಗೆ ಸಿಗಬೇಕಾದ ಮನ್ನಣೆ ಮಾತ್ರ ಸಿಗದಿರುವುದು ಖೇದಕರ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು. ಸೋಮವಾರ ಇಹಲೋಕ ತ್ಯಜಿಸಿದ ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಡಾ| ಉಡುಪಿ ರಾಮಚಂದ್ರ ರಾವ್ (ಯು. ಆರ್. ರಾವ್) ಅವರಿಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಭಾರತದ ಬಾಹ್ಯಾಕಾಶ ಕ್ಷೇತ್ರದ ಪ್ರಗತಿಗೆ ಬಹುದೊಡ್ಡ ಕಾಣಿಕೆ ನೀಡಿದ ಮಹಾನ್ ವ್ಯಕ್ತಿ ಅವರು. ಅವರ ಸಾಧನೆಗಳು ಶಾಶ್ವತವಾಗಿ ಉಳಿಯಲಿ. ಇತ್ತೀಚೆಗೆ ರಾವ್ ಅವರೊಂದಿಗೆ ಕೊನೆಯ ಬಾರಿ ಫೋನ್ನಲ್ಲಿ ಮಾತನಾಡಬೇಕೆಂಬ ಆಸೆ ಕೈತಪ್ಪಿ ಹೋಗಿರುವುದು ದುಃಖ ತಂದಿದೆ ಎಂದು ಶ್ರೀಗಳು ಇದೇ ವೇಳೆ ಹೇಳಿದರು.
ಕಾಳಜಿ, ಕಳಕಳಿ ಶ್ಲಾಘನೀಯ: ಯುವ ವಿಜ್ಞಾನಿಗಳು ಮುಂದೆ ಬರಬೇಕು, ಮನ್ನಣೆ ಸಿಗಬೇಕು ಎಂದು ಸದಾ ಬಯಸುತ್ತಿದ್ದ ರಾವ್ ಅವರ ಕಾಳಜಿ, ಕಳಕಳಿ ಶ್ಲಾಘನೀಯ. ಇಸ್ರೋ ಯಶಸ್ಸಿಗೆ ಇಂತಹ ಮಹಾನ್ ವಿಜ್ಞಾನಿಗಳ ದೂರದರ್ಶಿತ್ವ, ಮುಂದಾಲೋಚನೆ ಕಾರಣ ಎಂದು ಅವರ ನಿಕಟವರ್ತಿ, ವಿಜ್ಞಾನಿ ಎ.ಆರ್. ಉಪಾಧ್ಯಾಯ ಹೇಳಿದರು. ಜನಸಾಮಾನ್ಯರಿಗೂ ಸಂಪರ್ಕ ಸಾಧನಗಳ ಪ್ರಯೋಜನ ಸಿಗುವಂತಾಗಲು ರಾವ್ ಕಾರಣ. ಸರಳ ವ್ಯಕ್ತಿತ್ವದ ಅವರ ಸಾಧನೆ ಉಡುಪಿಗೆ ಹೆಮ್ಮೆ ಎಂದು ಕೆನರಾ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಟಿ. ನಾರಾಯಣ ಶಾನುಭಾಗ್ ಹೇಳಿದರು.
ಹೊಸತನದ ಕನಸುಗಾರ
ರಾವ್ ಒಡನಾಡಿ, ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ| ಎ.ಪಿ. ಭಟ್ ಅವರು ಮಾತನಾಡಿ ಶಿಕ್ಷಣ, ಆರೋಗ್ಯ, ಸಂಪರ್ಕ ಸಾಮಾನ್ಯರಿಗೂ ಸಿಗಬೇಕು ಎನ್ನುವುದು ಅವರ ಮೂಲ ಉದ್ದೇಶವಾಗಿತ್ತು. 40 ವರ್ಷಗಳ ಕಾಲ ಇಸ್ರೋವನ್ನು ಕಟ್ಟಿ ಬೆಳೆಸಿದ ರಾವ್ ಹೊಸತನದ ಕನಸುಗಾರರಾಗಿದ್ದು, ಭಾರತದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು. ಶ್ರೀ ಸಾಗಕಟ್ಟೆ ಮಠದ ಶ್ರೀ ಪ್ರಜ್ಞಾತ್ಮತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಘಟಕ ವಿಜಯ ಕುಮಾರ್ ಹೆಗ್ಡೆ ಪ್ರಸ್ತಾವನೆಗೈದರು. ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು.
ಉಡುಪಿಯನ್ನು ಆಕಾಶದೆತ್ತರಕ್ಕೇರಿಸಿದವರು
ಉಡುಪಿಯಂತಹ ಪುಟ್ಟ ಊರಿನಲ್ಲಿ ಹುಟ್ಟಿ ಬೆಳೆದು ಇಸ್ರೋ ಮೂಲಕ ಮಹತ್ತರ ಸಾಧನೆಗೈದ ಯು.ಆರ್. ರಾವ್ ಅವರು ಈ ಊರಿನ ಹೆಸರನ್ನು ಆಕಾಶದೆತ್ತರಕ್ಕೇರಿಸಿದ ಅನೇಕರಲ್ಲಿ ಒಬ್ಬರು. ವಿಜ್ಞಾನ ಕ್ಷೇತ್ರದಲ್ಲಿನ ಅವರ ಅಪಾರ ಕೊಡುಗೆಗೆ ನಾವು ಕೃತಜ್ಞರಾಗಿರುಬೇಕು. ಆದರೆ ಅಂತಹ ಪ್ರವೃತ್ತಿ ಈಗ ಕಡಿಮೆಯಾಗುತ್ತಿದೆ. ಐಟಿ- ಬಿಟಿ ಮಾತ್ರ ವಿದ್ಯಾರ್ಥಿಗಳ ಗುರಿಯಾಗಿರಬಾರದು. ವಿಜ್ಞಾನ ಕ್ಷೇತ್ರದಲ್ಲಿ ಜನರಿಗೆ ನೆರವಾಗುವಂತಹ ಸಾಧನೆ ಮಾಡುವತ್ತ ಚಿತ್ತ ಹರಿಸಬೇಕು ಎಂದು ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…