ಮಹಿಳಾ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ: ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲು
Team Udayavani, Dec 29, 2022, 1:08 AM IST
ತೆಕ್ಕಟ್ಟೆ: ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೇಲಟ್ಟು ಪರಿಸರದಲ್ಲಿ ಅನಧಿಕೃತ ಆವೆ ಮಣ್ಣಿನ ಗಣಿಗಾರಿಕೆಯಿಂದಾಗಿ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ಸಾರ್ವಜನಿಕರು ನೀಡಿದ ದೂರಿನಂತೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖಾ ಅಧಿಕಾರಿ ಸಂಧ್ಯಾ ಕುಮಾರಿ ಗಣಿಗಾರಿಕೆ ನಡೆಯುತ್ತಿರುವ ಸ್ಥಳಕ್ಕೆ ಡಿ. 26ರಂದು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗಣಿಗಾರಿಕಾ ಜಾಗಕ್ಕೆ ಸಂಬಂಧಪಟ್ಟವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೊಡುವಂತೆ ತಿಳಿಸಿದಾಗ ಅಲ್ಲಿದ್ದ ಸ್ಥಳೀಯರು ಬಸೂÅರು ಗ್ರಾಮ ಪಂಚಾಯತ್ ಸದಸ್ಯ ಬೇಳೂರು ದಿನಕರ ಶೆಟ್ಟಿ ಅವರಿಗೆ ತಮ್ಮ ಮೊಬೈಲ್ನಿಂದ ಕರೆ ಮಾಡಿ ನೀಡಿದ್ದು, ಈ ಸಂದರ್ಭ ಅಧಿಕಾರಿ ಸಂಧ್ಯಾ ಕುಮಾರಿ ಅವರು ನಾನು ಗಣಿ ಇಲಾಖೆಯ ಅಧಿಕಾರಿ, ಇಲ್ಲಿ ಕೊಜೆ ಮಣ್ಣು ತೆಗೆಯುವ ಜಾಗ ನಿಮ್ಮದಾ, ಕೊಜೆ ಮಣ್ಣು ತೆಗೆಯಲಿಕ್ಕೆ ಪರವಾನಿಗೆ ಇದೆಯಾ? ಎಂದು ಕೇಳಿದಾಗ ಅದಕ್ಕೆ ಉತ್ತರವಾಗಿ ಬೇಳೂರು ದಿನಕರ ಶೆಟ್ಟಿ ದರ್ಪದಿಂದ ಮಾತನಾಡಿದ್ದಲ್ಲದೆ ಬೆದರಿಸಿದ್ದು, ಮಹಿಳಾ ಅಧಿಕಾರಿ ಎಂಬುವುದನ್ನು ಕೂಡ ಲೆಕ್ಕಿಸದೆ ಅವಾಚ್ಯ ಹಾಗೂ ಅಶ್ಲೀಲ ಪದಗಳನ್ನು ಬಳಸಿ ಅವಮಾನಿಸಿದ್ದರು.
ಸರಕಾರಿ ಕೆಲಸ ಮಾಡದಂತೆ ಅಡ್ಡಿಪಡಿಸಿರುವುದಾಗಿ ಅಧಿಕಾರಿ ಯವರು ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ