ಅ.1- ನ.15: ಹಾಲಾಡಿ -ಕೋಟೇಶ್ವರ ರಸ್ತೆ ಸಂಚಾರ ನಿರ್ಬಂಧ
Team Udayavani, Sep 28, 2018, 6:00 AM IST
ಕುಂದಾಪುರ: ಕೋಟೇಶ್ವರದಿಂದ ಸೋಮೇಶ್ವರಕ್ಕೆ ಸಂಚರಿಸುವ (ಹಾಲಾಡಿ- ಕೋಟೇಶ್ವರ ರಸ್ತೆ) ರಸ್ತೆಯ ವಿಸ್ತರಣೆ, ಕಾಂಕ್ರೀಟಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಸಲುವಾಗಿ ಅ. 1 ರಿಂದ ನ. 15ರ ವರೆಗೆ ಒಟ್ಟು 45 ದಿನಗಳ ಕಾಲ ಕೋಟೇಶ್ವರದಿಂದ ಪ್ರಥಮ ದರ್ಜೆ ಕಾಲೇಜಿನಿಂದ ಸ್ವಲ್ಪ ಮುಂದಿನವರೆಗಿನ ಜಿಲ್ಲಾ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಡಿಸಿ ಆದೇಶ ಹೊರಡಿಸಿದ್ದಾರೆ.
ಬದಲಿ ರಸ್ತೆಗಳು
ಕುಂದಾಪುರ ಹಾಗೂ ಉಡುಪಿ ಕಡೆ ಯಿಂದ ಹಾಲಾಡಿ ಕಡೆಗೆ ಹೋಗುವ ಬಸ್ಗಳು ಹಾಗೂ ಇತರೆ ವಾಹನಗಳು ಹಳೆ ಗೋಪಾಡಿ ಪಂ. (ಹೂವಿನಕೆರೆ ಸ್ವಾಗತ ಗೋಪುರ) ಮೂಲಕ ಬೀಜಾಡಿ- ವಕ್ವಾಡಿ- ಕಾಳಾವರ ರಸ್ತೆಯಲ್ಲಿ ಸಂಚರಿಸಬಹುದು.ಗುರುಕುಲ ಶಾಲೆಯ ಬಳಿ ಎರಡು ರಸ್ತೆಗಳ ಪೈಕಿ ರಸ್ತೆಯ ಬಲಕ್ಕೆ ಘನ ವಾಹನಗಳು ಕಾಳಾವರ ಬಸ್ ನಿಲ್ದಾಣ ಬಳಿಯಿಂದ ಕೋಟೇಶ್ವರ- ಹಾಲಾಡಿ-ಸೋಮೇಶ್ವರ ರಸ್ತೆಗೆ ಸಂಪರ್ಕಿಸಬಹುದು. ಅಲ್ಲದೇ ಬೀಜಾಡಿ- ವಕ್ವಾಡಿ- ಕಾಳಾವರ ಆಗಿ ವಕ್ವಾಡಿ ರಸ್ತೆಯಲ್ಲಿ ನೇರವಾಗಿ ಬಂದು ಚಾರುಕೊಟ್ಟಿಗೆಯಿಂದ ಸಂಚರಿಸಿದರೆ ಕೋಟೇಶ್ವರ- ಹಾಲಾಡಿ-ಸೋಮೇಶ್ವರ ರಸ್ತೆ ಸಂಪರ್ಕಿಸುತ್ತದೆ. ಈ ರಸ್ತೆಯು ತೆಕ್ಕಟ್ಟೆ, ಕೆದೂರು ಕಡೆಗೆ ಹೋಗುವ ವಾಹನಗಳಿಗೆ ಅನುಕೂಲವಾಗಲಿದೆ.
ಬಸ್ರೂರು ಮೂರು ಕೈ ಜಂಕ್ಷನ್ ರಾ.ಹೆ.66 ರಸ್ತೆಯಲ್ಲಿ ಪೂರ್ವಕ್ಕೆ ಚಲಿಸಿ, ಕೋಣಿ, ಬಸೂÅರು, ಬಿ.ಎಚ್. ಕ್ರಾಸ್ ಮಾರ್ಗವಾಗಿ ಜಪ್ತಿ ಮೂಲಕ ಹುಣ್ಸೆಮಕ್ಕಿಯಾಗಿ ಕೋಟೇಶ್ವರ- ಹಾಲಾಡಿ- ಸೋಮೇಶ್ವರ ರಸ್ತೆ ಸಂಪರ್ಕಿಸುತ್ತದೆ. ಇದು ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೈಂದೂರು ಕಡೆಯಿಂದ ಹುಣ್ಸೆಮಕ್ಕಿ, ಬಿದ್ಕಲ್ಕಟ್ಟೆ, ಹಾಲಾಡಿ- ಸೋಮೇಶ್ವರ ಕಡೆಗೆ ತೆರಳುವ ಎಲ್ಲ ವಾಹನಗಳಿಗೆ ಸೂಕ್ತ ಮಾರ್ಗವಾಗಿದೆ.
ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೈಂದೂರು ಕಡೆಯಿಂದ ಹುಣ್ಸೆಮಕ್ಕಿ, ಬಿದ್ಕಲ್ಕಟ್ಟೆ, ಹಾಲಾಡಿ-ಸೋಮೆಶ್ವರ ಕಡೆಗೆ ಹೋಗುವ ಲಘು ವಾಹನಗಳಿಗೆ ಕೋಣಿ ಶಾಲೆ ಹಾಗೂ ಎಚ್.ಎಂ.ಟಿ. ರಸ್ತೆ ಮೂಲಕ ಕಟೆRರೆ ಕಡೆಗೆ ಕೋಟೇಶ್ವರ- ಹಾಲಾಡಿ-ಸೋಮೇಶ್ವರ ರಸ್ತೆ ಮೂಲಕ ಸಂಚರಿಸಬಹುದು.
ಈ ಎಲ್ಲ ಬದಲಿ ಮಾರ್ಗಗಳು ಹಾಲಾಡಿ ಕಡೆಯಿಂದ ಉಡುಪಿ ಅಥವಾ ಕುಂದಾಪುರ ಕಡೆಗೆ ಚಲಿಸುವ ವಾಹನಗಳಿಗೆ ಸೂಕ್ತ ಮಾರ್ಗಗಳಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
610 ಮೀಟರ್ ಕಾಂಕ್ರೀಟೀಕರಣ
ಕೋಟೇಶ್ವರದ ಮೇಲ್ಸೆತುವೆ ಬಳಿಯಿಂದ ಸುಮಾರು 200 ವರೆಗೆ ಅಂದರೆ ಸೇತುವೆವರೆಗೆ ಈಗಾಗಲೇ 200 ಮೀಟರ್ ಕಾಂಕ್ರೀಟಿಕರಣವಾಗಿದ್ದು, ಈಗ ಅಲ್ಲಿಂದ ಮುಂದಕ್ಕೆ ಕೋಟೇಶ್ವರದ ವರದರಾಜ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಿಂದ ಸ್ವಲ್ಪ ಮುಂದಿನವರೆಗೆ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸುಮಾರು 610 ಮೀಟರ್ ಕಾಂಕ್ರೀಟಿಕರಣ, ಅಗಲೀಕರಣ, ಚರಂಡಿ ಕಾಮಗಾರಿ ನಡೆಯಲಿದೆ ಎಂದು ಪಿಡಬ್ಲೂÂಡಿ ಇಲಾಖೆಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ