ಮೂರು ವರ್ಷ ಕಳೆದರೂ ದುರಸ್ತಿ ಮಾಡದ ಗ್ರಾಮಕರಣಿಕರ ಕಚೇರಿ

ಹೆಂಗವಳ್ಳಿ: ಬೀಳುವ ಹಂತದಲ್ಲಿ ಕಂದಾಯ ಇಲಾಖೆ ಕಟ್ಟಡ

Team Udayavani, Jan 24, 2020, 5:00 AM IST

2301SIDE2-HENGAVALI-VA-OFFICE

ಸಿದ್ದಾಪುರ: ಹೆಂಗವಳ್ಳಿ ಗ್ರಾ. ಪಂ. ವ್ಯಾಪ್ತಿಯ ತೊಂಭತ್ತು ಶಾಲಿಗುಡ್ಡೆ ಬಳಿ ಕಾರ್ಯಚರಿಸುತ್ತಿರುವ ಗ್ರಾಮ ಕರಣಿಕರ ಕಚೇರಿ ಕಟ್ಟಡ ಸಂಪೂರ್ಣ ಶಿಥಿಲಗೊಂಡು ಬಿದ್ದು ಹೋಗುವ ಹಂತದಲ್ಲಿದೆ. ಕಟ್ಟಡದ ಒಂದು ಭಾಗವು ಬಿದ್ದು ಮೂರು ವರ್ಷ ಕಳೆದರೂ ಇಂದಿಗೂ ಸರಿಪಡಿಸುವ ವ್ಯವಸ್ಥೆ ಇಲಾಖೆಯಂದ ಆಗಿಲ್ಲ.

ಕಂದಾಯ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಗ್ರಾಮ ಕರಣಿಕರ ಕಚೇರಿ ಹಾಗೂ ವಸತಿ ಗೃಹ ಇದೆ. ಈ ಕಟ್ಟಡವು ಕಳೆದ 5 ವರ್ಷಗಳ ಹಿಂದೆಯೇ ಶಿಥಲಗೊಂಡು ದುರಸ್ತಿಯಾಗದೇ ಬೀಳುವ ಹಂತಕ್ಕೆ ತಲುಪಿತ್ತು. ಆ ಸಂದರ್ಭದಲ್ಲಿ ವಸತಿ ಗೃಹದ ಭಾಗ ಮಾತ್ರ ರೀಪೇರಿ ಮಾಡಲಾಗಿತ್ತು. ಆದರೆ ಕಚೇರಿಯ ಭಾಗ ಮಾತ್ರ ಹಾಗೇಯೇ ಉಳಿಸಲಾಗಿತ್ತು.

ರೀಪೇರಿಯಾಗದೆ ಉಳಿದ ಕಚೇರಿ ಭಾಗವು ಮೂರು ವರ್ಷದ ಹಿಂದೆ ಬಿದ್ದು ಹೋಗಿದೆ. ಆವಾಗ ಕಚೇರಿಯನ್ನು ವಸತಿ ಗೃಹಕ್ಕೆ ಸ್ಥಳಾಂತಗೊಂಡಿತ್ತು. ಪ್ರಸ್ತುತ ಈ ಕಚೇರಿಯು ವಸತಿ ಗೃಹದಲ್ಲಿಯೇ ಇದೆ. ಈಗೀರುವ ಕಚೇರಿ ಕೂಡ ಬಿಳುವ ಹಂತಕ್ಕೆ ತಲುಪಿದೆ. ಕಚೇರಿಯ ಒಳಭಾಗದಲ್ಲಿ ಕುಳಿತು ಕೊಳ್ಳಲು ಹಾಗೂ ಫೈಲ್‌ಗ‌ಳನ್ನು ಸಂಗ್ರಹಿಸಿ ಇಡುವ ವ್ಯವಸ್ಥೆ ಇಲ್ಲ.

ಕಟ್ಟಡದ ಒಂದು ಭಾಗವು ಶಿಥಿಲಗೊಂಡು ಮೇಲ್ಮಾಡು ಮುರಿದು ಬಿದ್ದಿದೆ. ಕಟ್ಟಡದ ಒಳ ಭಾಗದಲ್ಲೇ ಮುರಿದು ಬಿದ್ದ ಪಕ್ಕಾಸಿ, ಹೆಂಚಿನ ರಾಶಿಗಳು ಇನ್ನೂ ಕೂಡ ಹಾಗೇಯೇ ಇದೆ. ಕಿಟಕಿ, ಬಾಗಿಲುಗಳು ಮುರಿದು ಹೋಗಿದ್ದು ಪ್ರಾಣಿಗಳ ವಾಸಸ್ಥಳವಾಗಿದೆ. ಕಚೇರಿಯಲ್ಲಿ ಸಂಗ್ರಹಿಸಿದ ಫೈಲ್‌ಗ‌ಳು ಸುರಕ್ಷಿತವಾಗಿಲ್ಲ. ಇಷ್ಟಾದರೂ ಸಂಬಂಧಪಟ್ಟ ಇಲಾಖೆಯವರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮಕರಣಿಕರ ವಸತಿಗೆ ಹೊಂದಿಕೊಂಡ ಇನ್ನೊಂದು ಭಾಗದಲ್ಲಿ ಗ್ರಾಮಕರಣಿಕರ ಕಚೇರಿ ಇದ್ದರೂ, ವಸತಿ ಗೃಹ ದುರಸ್ತಿಗೊಳಿಸುವಾಗ ಈ ಕಟ್ಟಡವನ್ನು ದುರಸ್ತಿಗೊಳಿಸಿದ್ದರೆ ಈ ಕಟ್ಟಡವು ಮುರಿದು ಬೀಳುತ್ತಿರಲಿಲ್ಲ. ವಸತಿ ಗೃಹ ಸ್ವಲ್ಪಮಟ್ಟದಲ್ಲಿ ದುರಸ್ತಿಗೊಳಿಸಿದರೂ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಮಳೆ ನೀರು ಕಟ್ಟಡದ ಒಳಭಾಗದಲ್ಲಿ ಶೇಖರಣೆಯಾಗುತ್ತಿತ್ತು. ಪಕ್ಕದ ಕಚೇರಿಯ ಗೋಡೆಗಳು ತೇವಾಂಶದಿಂದ ಕೂಡಿರುತ್ತಿದ್ದವು. ಮಳೆ ನೀರು ನಿಂತ ಪರಿಣಾಮ ಈಗ ಹಳೆಯ ಗೋಡೆ ಕುಸಿದು ಬೀಳುವ ಹಂತವನ್ನು ತಲುಪಿದೆ.

ಈ ಭಾರಿಯಾದರೂ ಇಲಾಖೆ ಹಳೆ ಕಟ್ಟಡವನ್ನು ಕೆಡವಿ ಹೊಸದಾಗಿ ಕಟ್ಟಡ ಕಟ್ಟುವಂತೆ ನಾಗರಿಕರು ಆಗ್ರಹಿಸುತ್ತಿದ್ದಾರೆ. ಇಲ್ಲದಿದ್ದಲ್ಲಿ ಬರುವ ಮಳೆಗಾಲದಲ್ಲಿ ಅಳಿದೂಳಿದ ಕಟ್ಟಡದ ಒಂದು ಭಾಗದಲ್ಲಿ ಕಾರ್ಯಚರಿಸುತ್ತಿರುವ ಕಚೇರಿಯು ನೆಲಸಮವಾಗಲಿದೆ. ಇದರಿಂದ ಕಚೇರಿಯ ಒಳಗೆ ಇರುವ ದಾಖಲೆ ಪತ್ರಗಳು, ಪೀಠೊಪಕರಣಗಳು ಹಾನಿಯಾಗುವ ಸಂಭವಿಸಲಿದೆ.ಆದ್ದರಿಂದ ಇಲ್ಲಿನ ಕಟ್ಟಡವನ್ನು ಶೀಘ್ರವಾಗಿ ದುರಸ್ಥಿಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸ್ಥಳೀಯರ ಆಶಯವಾಗಿದೆ.

ಇಲಾಖೆಯಿಂದ
ಅನುದಾನ ಬಂದಿಲ್ಲ
ಕಟ್ಟಡವು ಹಲವು ವರ್ಷಗಳಿಂದ ಶಿಥಲಾವಸ್ಥೆಯಲ್ಲಿದೆ. ಇಲಾಖೆಯಿಂದ ಸ್ವಲ್ಪ ರೀಪೇರಿ ಮಾಡುವ ಕೆಲಸವಾಗಿದೆ. ಕಳೆದ ಮೂರು ವರ್ಷದ ಹಿಂದೆ ಕಟ್ಟಡದ ಒಂದು ಭಾಗ ಬಿದ್ದು ಹೋಗಿದೆ. ಹಿಂದಿನ ಗ್ರಾಮ ಕರಣಿಕರು ಇದರ ಬಗ್ಗೆ ತಹಶಿಲ್ದಾರರಿಗೆ ಲೇಟರ್‌ ಮಾಡಿದ್ದಾರೆ. ಇದರ ಬಗ್ಗೆ ತಶಿಲ್ದಾರರು ಜಿಲ್ಲಾಧಿಕಾರಿಗಳಿಗೆ ಪಾರ್ವಡ್‌ ಮಾಡಿದ್ದಾರೆ. ಇಲಾಖೆಯಿಂದ ಹಣ ಬಂದಿಲ್ಲ.
– ವಿಶ್ವನಾಥ ಕುಲಾಲ ಗ್ರಾಮ ಕರಣಿಗ

ನೂತನ ಕಟ್ಟಡದ ಅವಶ್ಯಕತೆ ಇದೆ
ಹೆಂಗವಳ್ಳಿ ಗ್ರಾಮ ಕರಣಿಕರ ಕಚೇರಿ ಹಾಗೂ ವಸತಿ ಗೃಹವು ಕಂದಾಯ ಇಲಾಖೆಗೆ ಸಂಬಂಧ‌ ಪಟ್ಟ ಕಟ್ಟಡವಾಗಿದೆ. ಕಂದಾಯ ಇಲಾಖೆಯವರೂ ಕಟ್ಟಡದ ಒಂದು ಭಾಗವನ್ನು ಮಾತ್ರ ದುರಸ್ಥಿಗೊಳಿಸಿದ್ದು ಇನ್ನೊಂದು ಭಾಗವನ್ನು ಹಾಗೇ ಬಿಟ್ಟಿದ ಪರಿಣಾಮ ಇಡೀ ಕಟ್ಟಡ ಕುಸಿದು ಬಿಳುವ ಹಂತಕ್ಕೆ ಹೋಗಿದೆ. ಇರುವ ಕಚೇರಿ ಕುಸಿದು ಬಿದ್ದಲ್ಲಿ ಗ್ರಾಮಸ್ತರಿಗೆ ತೊಂದರೆಯಾಗಲಿದೆ. ಇಲ್ಲಿಗೆ ಒಂದು ನೂತನ ಕಚೇರಿ ಹಾಗೂ ವಸತಿ ಗೃಹ ಕಟ್ಟಡದ ಅವಶ್ಯಕತೆ ಇದೆ.
– ವಸುಂಧರ ಹೆಗ್ಡೆ ತೊಂಭತ್ತು, ಸದಸ್ಯರು ಗ್ರಾ. ಪಂ. ಹೆಂಗವಳ್ಳಿ

ತಹಶಿಲ್ದಾರರಿಗೆ ಮನವಿ
ಶಿಥಿಲಗೊಂಡ ಕಟ್ಟಡದ ಬಗ್ಗೆ ಹಲವು ಬಾರಿ ಎ. ಸಿ ಹಾಗೂ ತಹಶಿಲ್ದಾರ್‌ಗೆ ಮನವಿ ನೀಡಿದ್ದೇವೆ. ಸ್ವಲ್ಪ ಹಣವನ್ನು ಬಿಡುಗಡೆ ಮಾಡಿದ್ದು ಒಂದು ಭಾಗ ಮಾತ್ರ ತುರ್ತು ದುರಸ್ತಿ ಮಾಡಿದ್ದಾರೆ. ಕಳೆದ ಮೂರು ವರ್ಷದ ಹಿಂದೆ ಕಟ್ಟಡ ಕುಸಿದು ಬಿದ್ದಿದರಿಂದ ಇಲ್ಲಿನ ಗ್ರಾಮಸ್ಥರಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಕಂದಾಯ ಇಲಾಖೆಯವರೂ ನೂತನ ಕಟ್ಟಡವನ್ನು ನಿರ್ಮಿಸಬೇಕು. -ರಘುರಾಮ ಶೆಟ್ಟಿ ತೊಂಭತ್ತುಮಾಜಿ ಅಧ್ಯಕ್ಷರು ಗ್ರಾ. ಪಂ. ಹೆಂಗವಳ್ಳಿ

-  ಸತೀಶ್‌ ಆಚಾರ್‌ ಉಳ್ಳೂರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.