ಅಧಿಕಾರಿಗಳ ಸೋಗಿನಲ್ಲಿ ಲಾರಿ ಚಾಲಕರಿಂದ ವಸೂಲಿ ಯತ್ನ:ಸೆರೆ

ಸಾೖಬ್ರಕಟ್ಟೆ ಸಮೀಪದ ಗಿರಿಕೆಮಠದಲ್ಲಿ ಘಟನೆ

Team Udayavani, Apr 9, 2019, 6:15 AM IST

0804kota-crime1

ಕೋಟ: ಅಖೀಲ ಕರ್ನಾಟಕ ನೆಲ,ಜಲ,ಪರಿಸರ ಸಂರಕ್ಷಣ ವೇದಿಕೆಯ ಪದಾಧಿಕಾರಿಗಳು ಎಂದು ಹೇಳಿಕೊಂಡು, ಅಧಿಕಾರಿಗಳ ಶೈಲಿಯಲ್ಲಿ ಕಲ್ಲು ಸಾಗಾಟದ ವಾಹನಗಳನ್ನು ಅಡ್ಡಗಟ್ಟಿ, ಪರಿಶೀಲನೆ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರನ್ನು ಲಾರಿ ಮಾಲಕರು ಪೊಲೀಸರಿಗೊಪ್ಪಿಸಿದ ಘಟನೆ ಸೋಮವಾರ ಸಾೖಬ್ರಕಟ್ಟೆ ಸಮೀಪದ ಗಿರಿಕೆಮಠದಲ್ಲಿ ನಡೆದಿದೆ.

ಉಡುಪಿ ಲಕ್ಷ್ಮೀಂದ್ರ ನಗರದ ನಿವಾಸಿ ಶ್ರೀಲತಾ ಶೆಟ್ಟಿ (48), ಆಕೆಯ ಗಂಡ ಉದಯ ಕುಮಾರ್‌ ಶೆಟ್ಟಿ (49) ಉಡುಪಿ ಕಕ್ಕುಂಜೆಯ ನಿತ್ಯಾನಂದ ಶೆಟ್ಟಿ (53) ಹಾಗೂ ಸಂತೆಕಟ್ಟೆ ನಿವಾಸಿ ಗುರುಪ್ರಸಾದ ಶೆಟ್ಟಿ (49) ಆರೋಪಿಗಳು.

ಪರಿಸರ ಸಂರಕ್ಷರಣೆ
ಹೆಸರಲ್ಲಿ ಹಣ ವಸೂಲಿ
ಕಾರಿನಲ್ಲಿ ಆಗಮಿಸಿದ ಆರೋಪಿ ಗಳಾದ ಶ್ರೀಲತಾ ಶೆಟ್ಟಿ ತಾನು ನೆಲ, ಜಲ, ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಹಾಗೂ ಉದಯ ಕುಮಾರ್‌ ಶೆಟ್ಟಿ ಕಾರ್ಯದರ್ಶಿ ಮತ್ತು ನಿತ್ಯಾನಂದ ಜಿಲ್ಲಾಧ್ಯಕ್ಷನೆಂದು ಪರಿಚಯಿಸಿಕೊಂಡು ಗರಿಕೆಮಠದಿಂದ ಕಲ್ಲುಸಾಗಾಟ ಮಾಡುತ್ತಿದ್ದ ಉಪೇಂದ್ರ ನಾಯ್ಕ ಎನ್ನುವವರ ವಾಹನವನ್ನು ಅಡ್ಡಗಟ್ಟಿ ಟ್ರಿಪ್‌ಶೀಟ್‌ ಮುಂತಾದ ದಾಖಲೆಗಳನ್ನು ಕೇಳಿದ್ದರು. ತೋರಿಸದಿದ್ದಾಗ ನಿಮ್ಮ ವಾಹನವನ್ನು ಸೀಝ್ ಮಾಡಿ ಗಣಿ ಇಲಾಖೆಗೆ ನೀಡುತ್ತೇನೆ ಎಂದು ಹೆದರಿಸಿರುತ್ತಾರೆ ಹಾಗೂ ಅನಂತರ 5 ಸಾ.ರೂ. ನೀಡಿದರೆ ಬಿಡುವುದಾಗಿ ತಿಳಿಸಿದ್ದರು. ಅಷ್ಟು ಹಣ ಇಲ್ಲ ಎಂದಾಗ 2 ಸಾ.ರೂ. ಪಡೆದಿದ್ದಾರೆ. ಅಮೃತ್‌ ಪೂಜಾರಿ ಎನ್ನುವವರಿಂದ 1, 500 ರೂ. ವಸೂಲಿ ಮಾಡಿರುತ್ತಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಬಂಧನ
ಲಾರಿ ಚಾಲಕ ಉಪೇಂದ್ರ ಅವರು ಈ ವಿಚಾರವನ್ನು ಅನಿಲ್‌ ಕಿಣಿ ಎಂಬವರಿಗೆ ದೂರವಾಣಿ ಮೂಲಕ ತಿಳಿಸಿದರು. ಅವರು ಸಮೀಪದ ಕೋರೆಯಲ್ಲಿದ್ದ ಕಿರಣ್‌ ಪೂಜಾರಿ, ಗಣೇಶ್‌ ಎಂಬ ವರ ಜತೆ ಸ್ಥಳಕ್ಕಾಗಮಿಸಿ ಆರೋಪಿಗಳನ್ನು ವಿಚಾರಿಸಿ, ಬಳಿಕ ಅನುಮಾನಗೊಂಡು ಕೋಟ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ಗಣಿಗಾರಿಕೆಗಳೇ ಟಾರ್ಗೆಟ್‌
ಆರೋಪಿಗಳು ಪರಿಸರ ಸಂರಕ್ಷಣೆಯ ಹೆಸರಲ್ಲಿ ಗಣಿಗಾರಿಕೆ ಹಾಗೂ ಲಾರಿ,ಟಿಪ್ಪರ್‌ ವಾಹನಗಳನ್ನು ಅಡ್ಡಗಟ್ಟಿ ಇಲಾಖೆಯ ಅಧಿಕಾರಿಗಳ ಸ್ಟೆ ಲ್‌ನಲ್ಲೇ ದಾಖಲೆ ಪರಿಶೀಲಿಸುತ್ತಿದ್ದರು ಮತ್ತು ಕೇಸು ದಾಖಲಿಸುವ ಬೆದರಿಕೆಯೊಡ್ಡುತ್ತಿದ್ದರು ಎಂದು ಲಾರಿ ಮಾಲಕರು ಆರೋಪಿಸಿದ್ದಾರೆ.

ಠಾಣೆಯ ಬಳಿ ಜಮಾಯಿಸಿದ ಲಾರಿ ಮಾಲಕರು
ಲಾರಿ ಹಾಗೂ ಕೋರೆಯ ಮಾಲಕರು ಮತ್ತು ಲಾರಿ ಯೂನಿ ಯನ್‌ ಸಂಘಟನೆ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಠಾಣೆಯ ಬಳಿ ಜಮಾಯಿಸಿದರು. ಆರೋಪಿಗಳ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಬ್ರಹ್ಮಾವರ ಸಿಐ ಪೂವಯ್ಯ ಹಾಗೂ ಕೋಟ ಠಾಣೆ ಉಪ ನಿರೀಕ್ಷಕ ರಫೀಕ್‌ ಎಂ. ಅವರು ಪ್ರಕರಣ ದಾಖಲಿಸಿ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.