ಮಳೆಗಾಲದಲ್ಲೂ ಅಧಿಕಾರಿಗಳ ಬೆವರಿಳಿಸಿದ ಬೇಸಗೆ ನೀರಿನ ಬಿಲ್‌

ಸಮಜಾಯಿಷಿ ನೀಡಿ ಸಮಾಧಾನಿಸಿದ ಕುಂದಾಪುರ ಸಹಾಯಕ ಕಮಿಷನರ್‌

Team Udayavani, Aug 17, 2019, 5:09 AM IST

1608BDREE4A

ಬೈಂದೂರು: ಬೇಸಗೆಯಲ್ಲಿ ನೀರಿಗಾಗಿ ಹಾಹಾಕಾರವಿತ್ತು. ಯಾವುದೇ ಕಾರಣಕ್ಕೂ ಗ್ರಾ.ಪಂ. ಜನರಿಗೆ ನೀರು ಕೊಡುವಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿ ಗ್ರಾ.ಪಂ. ಸಿಬಂದಿಯನ್ನು ಹೈರಾಣಾಗಿಸಿದ ಜಿಲ್ಲಾಡಳಿತ ಇದುವರೆಗೆ ನೀರಿನ ಬಿಲ್‌ ನೀಡದೆ ಸತಾಯಿಸುತ್ತಿದೆ. ಈಗ ಹಣ ನೀಡದ ಪರಿಣಾಮ ಗುತ್ತಿಗೆ ಪಡೆದವರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರ ಮನೆಬಾಗಿಲಿಗೆ ಬಂದು ಕುಳಿತುಕೊಳ್ಳುತ್ತಿದ್ದಾರೆ. ಹೀಗಾದರೆ ಮುಂದೆ ಬೇಸಗೆಯಲ್ಲಿ ಗ್ರಾ.ಪಂ. ಯಾವ ಧೈರ್ಯದ ಮೇಲೆ ಕೆಲಸ ಮಾಡಬೇಕು ಎಂದು ಕುಂದಾಪುರ ಪಂಚಾಯತ್‌ರಾಜ್‌ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸದಾಶಿವ ಡಿ. ಪಡುವರಿ ಸಂಸದರ ಎದುರು ಜಿಲ್ಲಾಡಳಿತದ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡ ಘಟನೆ ಬೈಂದೂರಿನಲ್ಲಿ ನಡೆದಿದೆ.

ಸಮಸ್ಯೆ ಏನು ?
ಕಳೆದ ಬೇಸಗೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿ ಕಾಡಿತ್ತು. ಬೈಂದೂರು ಸೇರಿದಂತೆ ರಾಜ್ಯ ದಲ್ಲೂ ಕೂಡ ಜನರಿಗೆ ನೀರಿಗೆ ತೊಂದರೆ ಯಾಗಬಾರದು. ಈ ಕುರಿತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರಕಾರ ತಿಳಿಸಿತ್ತು. ಹೀಗಾಗಿ ಜಿಲ್ಲಾಡಳಿತ ಪ್ರತಿ ಗ್ರಾ.ಪಂ.ಗಳಿಗೆ ಸುತ್ತೋಲೆ ಕಳುಹಿಸಿ ನೀರಿನ ಪೂರೈಕೆಗಾಗಿ ಟೆಂಡರ್‌ ಪಡೆದು ಮಂಜೂರು ಮಾಡಲು ತಿಳಿಸಿತ್ತು. ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ತಹಶೀಲ್ದಾರರ ಮಾರ್ಗದರ್ಶನದಲ್ಲಿ 5 ಲಕ್ಷ ರೂ. ಒಳಗೆ ಸಾಮಾನ್ಯ ನಿಯಮ, ಅದಕ್ಕಿಂತ ಹೆಚ್ಚಿಗೆ ಅನುದಾನಕ್ಕೆ ಈ ಟೆಂಡರ್‌ ಪ್ರಕ್ರಿಯೆ ನಡೆಸಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ನಿರ್ದಿಷ್ಟ ಮೊತ್ತದ ಕುರಿತು ತಿಳಿಸಿಲ್ಲ. ಹೀಗಾಗಿ ಕೆಲವು ಗ್ರಾ.ಪಂ.ಗಳು 25 ರೂ. ಇನ್ನು ಕೆಲವು 30 ರೂ., 35 ರೂಪಾಯಿಗಳಿಗೆ ಟೆಂಡರ್‌ ನೀಡಿ, ಎಗ್ರಿಮೆಂಟ್‌ ಮಾಡಿಕೊಂಡಿದ್ದವು.ಬಹುತೇಕ ಗ್ರಾ.ಪಂ.ಗಳಿಗೆ ಇದುವರೆಗೆ ಹಣ ಮಂಜೂರಾಗಿಲ್ಲ. ಈ ಹಣವನ್ನು ಜಿಲ್ಲಾಡಳಿತದ ನಿರ್ದೇಶನದಂತೆ ತಹ ಶೀಲ್ದಾರ್‌ ಮಂಜೂರು ಮಾಡಬೇಕು. ಆದರೆ ಜಿಲ್ಲಾಡಳಿತ ಎಲ್ಲ ಪ್ರಕ್ರಿಯೆ ಮುಗಿದ ಬಳಿಕ 25 ರೂ. ಕಡಿಮೆ ಇದ್ದರೆ ಜಿಲ್ಲಾಡಳಿತ ನೀಡುತ್ತದೆ. ಹೆಚ್ಚಿಗೆ ಇದ್ದರೆ ಗ್ರಾ.ಪಂ. ನೀಡಬೇಕು ಎಂದು ಮೌಖೀಕವಾಗಿ ತಿಳಿಸಿರುವುದು ಈ ಸಮಸ್ಯೆಗೆ ಕಾರಣವಾಗಿದೆ.

ಜಿಲ್ಲಾಧಿಕಾರಿಗಳು ಈ ಬಗ್ಗೆ ಸಮರ್ಪಕ ಕ್ರಮ ಶೀಘ್ರ ತೆಗೆದುಕೊಳ್ಳುವುದಾಗಿ ತಿಳಿಸಿ ದರು. ಇದರ ಜತೆಗೆ ಮರಳಿನ ಕುರಿತು ಜಿಲ್ಲಾಡಳಿತದ ಕ್ರಮದ ಕುರಿತು ಜನ ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿ ದರು. ಒಟ್ಟಾರೆಯಾಗಿ ಬೇಸಗೆಯ ನೀರಿನ ಬಿಲ್‌ ಮಳೆಗಾಲದಲ್ಲೂ ಅಧಿಕಾರಿಗಳಿಗೆ ನೀರು ಕುಡಿಸುವುದಂತು ಸತ್ಯ ಎಂದು ಸಭೆಯಲ್ಲಿದ್ದವರು ಹೇಳಿಕೊಳ್ಳುವಂತಾಗಿದೆ.

ಎ.ಸಿ. ಸಮಾಧಾನಕ್ಕೆ ತೃಪ್ತರಾಗದ ಪಿ.ಡಿ.ಒ.
ಈ ಮಧ್ಯೆ ಸಮಜಾಯಿಷಿ ನೀಡಿ ಸಮಧಾನಪಡಿಸಲು ಮುಂದಾದ ಕುಂದಾಪುರ ಸಹಾಯಕ ಕಮಿಷನರ್‌ ಮಧುಕೇಶ್ವರ್‌ ಈಗಾಗಲೇ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ. ಅವರು ಸಮ್ಮತಿಸಿದ್ದಾರೆ ಎಂದರು.
ಆದರೆ ಇದಕ್ಕೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಪಿ.ಡಿ.ಒ.ಗಳು ನಮ್ಮಿಂದ ಯಾವುದೇ ರೀತಿ ಸಮ್ಮತಿ ದೊರೆತಿಲ್ಲ. ಪ್ರತಿ ಪಂಚಾಯತ್‌ನಲ್ಲೂ ಚುನಾಯಿತ ಪ್ರತಿನಿಧಿಗಳಿದ್ದಾರೆ. ಜಂಟಿ ಖಾತೆ ನಿಭಾಯಿಸುವುದರಿಂದ ಕೇವಲ ಅಭಿವೃದ್ಧಿ ಅಧಿಕಾರಿಗಳ ನಿರ್ಧಾರ ಅಂತಿಮವಾಗುವುದಿಲ್ಲ. ಹೀಗಾಗಿ ನೀರಿನ ವಿಷಯದ ಕುರಿತು ಜಿಲ್ಲಾಡಳಿತ ಗ್ರಾ.ಪಂ ಗಳನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ ಎಂದಿದ್ದಾರೆ.

ಸಂಸದರು ಕೂಡ ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರ ಸಮಸ್ಯೆ ಇತ್ಯರ್ಥಗೊಳಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಈ ರೀತಿ ಸಮಸ್ಯೆಯಾಗದಂತೆ ಗ್ರಾಮ ಪಂಚಾಯತ್‌ಗಳು ಬೇಸಗೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಲ್ಲಿ ಕೆಲಸ ನಿಭಾಯಿಸಲು ಭರವಸೆ ಬೇಕಾಗುತ್ತದೆ ಎಂದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.