ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ
Team Udayavani, Aug 10, 2022, 9:42 AM IST
ಪಡುಬಿದ್ರಿ : ಕಣ್ಣಂಗಾರ್ ಬೈಪಾಸ್ ಬಳಿಯ ನಡ್ಸಾಲು ಗ್ರಾಮದ ಸುಶೀಲಾ ಗಾಣಿಗ ಮಾಲಕತ್ವದ ಗಾಣಿಗರ ಮಿಲ್ ನಲ್ಲಿ ಇಂದು ಮುಂಜಾವ ಅಗ್ನಿ ಅವಘಡವು ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎನ್ನಲಾದ ಈ ಅಗ್ನಿ ಅವಘಡದಲ್ಲಿ ಸುಮಾರು 5 ಲಕ್ಷ ರೂ. ಗಳಿಗೂ ಅಧಿಕ ಮೌಲ್ಯದ ಕೊಬ್ಬರಿ, ತೆಂಗಿನ ಕಾಯಿ ಬೆಂಕಿಗಾಹುತಿಯಾಗಿದೆ.
ಉಡುಪಿಯ ಅಗ್ನಿ ಶಾಮಕ ದಳದ ತುಕುಡಿಯು ಸ್ಥಳಕ್ಕೆ ಧಾವಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಗಿದೆ.
ಕೊಬ್ಬರಿ ಒಣಗಿಸಲು ಮಾಮೂಲಿಯಂತೆ ನಿನ್ನೆ ರಾತ್ರಿ ಕೂಡಾ ಅಣಿಗೊಳಿಸಿ ತೆರಳಿದ್ದರು. ಮಾಲಕರಿಗೆ ಮುಂಜಾವ ಸ್ಥಳೀಯರು ಈ ಅವಘಡದ ಸುದ್ದಿ ಮುಟ್ಟಿಸಿದ್ದಾರೆ. ಗೊಡೌನ್ ನಲ್ಲಿ ತೆಂಗಿನ ಕಾಯಿ ದಾಸ್ತಾನು ತುಂಬಿತ್ತು. ಇದೂ ಸಹ ಒಣ ತೆಂಗಿನಕಾಯಿಗಳಾದ್ದರಿಂದ ಬೆಂಕಿ ಹೊತ್ತಿ ಉರಿಯಲು ಸಹಕಾರಿಯಾಗಿದೆ. ಗೊಡೌನ್ ಗೋಡೆಯೂ ಬಿರುಕು ಬಿಟ್ಟಿದ್ದು ಅಲ್ಲಿಂದ ತೆಂಗಿನ ಕಾಯಿಗಳ ತೆರವು ಕಾರ್ಯವನ್ನೂ ನಡೆಸಲಾಗಿದೆ.
ಇದೇ ವೇಳೆ ಪಡುಬಿದ್ರಿಯ ಪೊಲೀಸ್ ಠಾಣೆ ಸಮೀಪದ ಅಂಗಡಿಯೊಂದರಲ್ಲೂ ಬೆಂಕಿ ಹತ್ತಿಕೊಂಡಿದೆ. ಅದನ್ನೂ ಉಡುಪಿಯ ಅಗ್ನಿಶಾಮಕ ದಳದ ಸಿಬಂದಿ ಬಂದು ನಂದಿಸಿದ್ದಾರೆ.
ಇದನ್ನೂ ಓದಿ : ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ