ಮುಂದಿನ ವಾರದಿಂದ ವಿದೇಶದಲ್ಲೂ ‘ಒಂದು ಮೊಟ್ಟೆಯ ಕತೆ’


Team Udayavani, Jul 18, 2017, 2:05 AM IST

Motte-Kathe-17-7.jpg

ಉಡುಪಿಯ ಮಾಧ್ಯಮ ಸಂವಾದದಲ್ಲಿ ನಿರ್ದೇಶಕ ರಾಜ್‌ ಶೆಟ್ಟಿ
ಉಡುಪಿ: ಒಂದು ಮೊಟ್ಟೆಯ ಕತೆ ಚಿತ್ರವು ಕೇವಲ ಒಂದು ಕೋ. ರೂ. ಬಜೆಟ್‌ನಲ್ಲಿ ತಯಾರಾಗಿದ್ದು, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಒಂದು ಕೋ. ರೂ. ಗೂ ಹೆಚ್ಚು ಕಲೆಕ್ಷನ್‌ ಮಾಡಿರುವುದು ಚಿತ್ರ ತಂಡದ ಶ್ರಮಕ್ಕೆ ಸಂದ ಗೌರವ. ಮುಂದಿನ ವಾರದಿಂದ ವಿದೇಶದಲ್ಲೂ ಬಿಡುಗಡೆಗೆ ತಯಾರಿ ನಡೆದಿದೆ ಎಂದು ಚಿತ್ರದ ನಿರ್ದೇಶಕ, ನಟ ರಾಜ್‌ ಬಿ. ಶೆಟ್ಟಿ ಹೇಳಿದರು.

ಉಡುಪಿ ಪ್ರಸ್‌ಕ್ಲಬ್‌ನಲ್ಲಿ ಚಿತ್ರ ತಂಡದೊಂದಿಗೆ ಸೋಮವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿ ಮಂಗಳೂರು ಕನ್ನಡದ ಸೊಗಡಿರುವ ಚಿತ್ರವನ್ನು ಕರಾವಳಿ ಮಾತ್ರವಲ್ಲದೆ, ಮಂಡ್ಯ, ಮೈಸೂರು, ಬೆಂಗಳೂರಿನ ಜನ ಕೂಡ ಸ್ವೀಕರಿಸಿ, ಮೆಚ್ಚುಗೆ ವ್ಯಕ್ತಪಡಿಸಿರುವುದು ಖುಷಿ ನೀಡಿದೆ. ಅದರಲ್ಲೂ ಬಿಗ್‌ ಸ್ಕ್ರೀನ್‌ಗಳಲ್ಲಿ ಶೇ. 30 ರಿಂದ 40 ರಷ್ಟು ಅನ್ಯ ಭಾಷಿಕರೇ ಚಿತ್ರ ವೀಕ್ಷಿಸುತ್ತಿರುವುದು ವಿಶೇಷ ಎಂದು ಇದೇ ವೇಳೆ ಸಂತಸದಿಂದ ಹೇಳಿಕೊಂಡರು.

ಪ್ರದರ್ಶನಕ್ಕೆ ಸಿದ್ಧತೆ
ರಾಜ್ಯದ 50 ಸಿಂಗಲ್‌ ಸ್ಕ್ರೀನ್‌ಗಳ ಜತೆಗೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಮಾತ್ರವಲ್ಲದೆ ಚೆನ್ನೈನಲ್ಲಿ ಬಿಡುಗಡೆ ಮಾಡಲಾಗಿದೆ. ಮುಂದಿನ ವಾರದಿಂದ ಮುಂಬಯಿ, ಹೈದ್ರರಾಬಾದ್‌, ಸಿಂಗಾಪುರ್‌, ಆಸ್ಟ್ರೇಲಿಯಾ, ದುಬೈನಲ್ಲೂ ಚಿತ್ರ ಪ್ರದರ್ಶನಕ್ಕೆ ಸಿದ್ದತೆ ನಡೆದಿದೆ. ಒಳ್ಳೆ ಕತೆ ಇದ್ದರೆ, ದೊಡ್ಡ ಕಲಾವಿದರಿಲ್ಲದಿದ್ದರೂ ಜನ ಸ್ವೀಕರಿಸುತ್ತಾರೆ ಅನ್ನುವುದಕ್ಕೆ  ಈ ಚಿತ್ರ ನಿದರ್ಶನ ಎಂದರು.

ಪ್ರೇಮಕತೆಯಿದು
ಇಬ್ಬರು ಅಪಕ್ವ ಮನಸ್ಸುಗಳನ್ನು ಒಂದುಗೂಡಿಸುವ ಪ್ರೇಮಕತೆಯಿದು. ಹಾಗಂತ ಇದು ಪಕ್ಕಾ ಪ್ರೇಮಕತೆಯಲ್ಲ. ಒಬ್ಬ ಬೋಳು ತಲೆಯ ಕನ್ನಡ ಉಪನ್ಯಾಸಕರನ್ನು (ಜನಾರ್ದನ) ಸಾಮಾನ್ಯ ಜನ ಹೇಗೆ ಸ್ವೀಕರಿಸುತ್ತಾರೆ ಹಾಗೂ ಅದಕ್ಕೆ ಉಪನ್ಯಾಸಕ ಹೇಗೆ ಪ್ರತಿಕ್ರಿಯೆ ಮಾಡುತ್ತಾನೆ ಅನ್ನುವುದು ಚಿತ್ರದ ಕತೆ. ಒಂದೇ ತಿಂಗಳಲ್ಲಿ ಸ್ಕ್ರಿಪ್ಟ್ ಬರೆದು, ಕೇವಲ 16 ದಿನದಲ್ಲಿ ಚಿತ್ರೀಕರಣವನ್ನು ಮುಗಿಸಲಾಗಿದೆ. ಆದರೆ ಅದರ ಹಿಂದೆ 2 ವರ್ಷಗಳ ಪರಿಶ್ರಮವಿದೆ. 245 ಜನರ ಆಡಿಶನ್‌ನಲ್ಲಿ  4-5 ಮಂದಿಯನ್ನು ಆಯ್ಕೆ ಮಾಡಿ, ಅವರು ಹಾಗೂ ಇಡೀ ತಂಡದೊಂದಿಗೆ ಕಾರ್ಯಾಗಾರ ನಡೆಸಿ, ಕಲಾವಿದರನ್ನು ತರಬೇತಿಗೊಳಿಸಲಾಗಿತ್ತು ಎಂದರು.

ಪ್ರಾಮಾಣಿಕ ಪ್ರಯತ್ನಕ್ಕೆ ಫ‌ಲ ಸಿಕ್ಕಿದೆ
ನಿರ್ಮಾಪಕ ಸುಹಾನ್‌ ಮಾತನಾಡಿ 25 ಮಂದಿಯ ತಂಡದ 2 ವರ್ಷಗಳ ಪ್ರಾಮಾಣಿಕ ಪ್ರಯತ್ನಕ್ಕೆ ಫ‌ಲ ಸಿಕ್ಕಿದೆ. ಈ ಚಿತ್ರದ ಯಶಸ್ಸಿನ ಎಲ್ಲ ಶ್ರೇಯ ನಿರ್ದೇಶಕ ರಾಜ್‌ ಅವರಿಗೆ ಸಲ್ಲಬೇಕು ಎಂದರು. ಸಂವಾದದಲ್ಲಿ ಚಿತ್ರದ ಸಿನೆಮಾಟೋಗ್ರಾಫ‌ರ್‌ ಪ್ರವೀಣ್‌ ಶ್ರೀಯಾನ್‌, ಪ್ರಕಾಶ್‌ ತುಂಬಿನಾಡು, ನಟಿಯರಾದ ಶೈಲಶ್ರೀ, ಅಮೃತಾ ನಾಯಕ್‌, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಯಕರ ಸುವರ್ಣ ಉಪಸ್ಥಿತರಿದ್ದರು. 

ಮಂಗಳೂರು ಕನ್ನಡದಿಂದಲೇ ಯಶಸ್ವಿ
ಮಂಗಳೂರು ಕನ್ನಡದಲ್ಲಿರುವ ಚಿತ್ರ ಬೇರೆಡೆ ಮಿಂಚುವ ನಿರೀಕ್ಷೆಯಿತ್ತ ಎನ್ನುವ ಪ್ರಶ್ನೆಗೆ ಚಿತ್ರದಲ್ಲಿ ಭಾಷೆಗಿಂತ ಭಾವ ಮುಖ್ಯ. ಅದು ಅರ್ಥವಾದರೆ ಸಾಕು. ಮಂಗಳೂರು ಕನ್ನಡದಷ್ಟು ಬೇರೆ ಯಾವ ಭಾಷೆಯಲ್ಲಿಯೂ ಈ ಚಿತ್ರ ಸುಂದರವಾಗಿ ಕಾಣಿಸಲು ಸಾಧ್ಯವಿಲ್ಲ. ಹೊಸ ದೃಷ್ಟಿಕೋನದ ಚಿತ್ರ ಇದಾಗಿದೆ. ಒಂದು ರೀತಿಯಲ್ಲಿ ಡಾ| ರಾಜ್‌ ಕುಮಾರ್‌ ಅವರ ಹೆಸರು ಸಹ ಚಿತ್ರದ ಯಶಸ್ಸಿಗೆ ಕಾರಣ. ಪುನೀತ್‌ ರಾಜ್‌ಕುಮಾರ್‌ ಅವರೇ ಚಿತ್ರ ತುಂಬಾ ಇಷ್ಟವಾಗಿದೆ ಎಂದು ಹೇಳಿರುವುದು ಖುಷಿ ಕೊಟ್ಟಿದೆ ಎಂದು ರಾಜ್‌ ಬಿ. ಶೆಟ್ಟಿ ಹೇಳಿದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.