ಉದ್ಯಾವರ: ಸೇತುವೆಗೆ ಢಿಕ್ಕಿ ಹೊಡೆದು ಆಮ್ನಿ ಕಾರು ಪಲ್ಟಿ
Team Udayavani, Jun 17, 2019, 9:29 AM IST
ಕಾಪು: ಟಯರ್ ಸ್ಫೋಟಗೊಂಡ ಪರಿಣಾಮ ಮಾರುತಿ ಆಮ್ನಿ ಕಾರೊಂದು ಸೇತುವೆ ಬದಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರವಿವಾರ ಬೆಳಗ್ಗೆ ಉದ್ಯಾವರದಲ್ಲಿ ಸಂಭವಿಸಿದೆ.
ಸುರತ್ಕಲ್ನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಆಮ್ನಿ ಕಾರಿನ ಟಯರ್ ಸೇತುವೆ ಮಧ್ಯದಲ್ಲೇ ಸ್ಫೋಟಗೊಂಡು, ಸೇತುವೆ ಬದಿಗೆ ಢಿಕ್ಕಿ ಹೊಡೆದು ಹೆದ್ದಾರಿಯಲ್ಲೇ ಮಗುಚಿ ಬಿದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಅದರಲ್ಲಿದ್ದ ಸುರತ್ಕಲ್ ನಿವಾಸಿಗಳಾದ ಚಾಲಕ ಅಬ್ದುಲ್ ಖಾದರ್, ಮಹಮ್ಮದ್ ಅಸರ್, ಪುತ್ತುಂಜಿ ಮತ್ತು ಮಹಮ್ಮದ್ ಶಾಕಿಬ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳೀಯರು ಮತ್ತು ಪೊಲೀಸರು ಧಾವಿಸಿ ಸಂಚಾರ ಸುಗಮಗೊಳಿಸಿದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್