ಯಾರ ಹೆಗಲಿಗೆ ದ.ಕ., ಉಡುಪಿ ಜಿಲ್ಲಾ ಉಸ್ತುವಾರಿ ?


Team Udayavani, May 31, 2023, 7:40 AM IST

ಯಾರ ಹೆಗಲಿಗೆ ದ.ಕ., ಉಡುಪಿ ಜಿಲ್ಲಾ ಉಸ್ತುವಾರಿ ?

ಉಡುಪಿ: ರಾಜ್ಯದಲ್ಲಿ ಪೂರ್ಣ ಬಹುಮತದ ಕಾಂಗ್ರೆಸ್‌ ಸರಕಾರ ರಚನೆಯಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸಹಿತ ಸಚಿವ ಸಂಪುಟವೂ ಭರ್ತಿಯಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ಸಚಿವ ಸ್ಥಾನ ಲಭ್ಯವಾಗಿಲ್ಲ. ಈಗ ಎರಡೂ ಜಿಲ್ಲೆಗಳ ಉಸ್ತುವಾರಿ ಯಾರ ಹೆಗಲಿಗೇರಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಉಡುಪಿ ಜಿಲ್ಲೆಯಿಂದ ಕಾಂಗ್ರೆಸ್‌ನ ಒಬ್ಬ ಸದಸ್ಯನೂ ಗೆದ್ದಿಲ್ಲ. ದಕ್ಷಿಣ ಕನ್ನಡದಲ್ಲಿ ಪುತ್ತೂರಿನಿಂದ ಅಶೋಕ್‌ ಕುಮಾರ್‌ ರೈ ಹಾಗೂ ಮಂಗಳೂರಿನಿಂದ ಯು.ಟಿ. ಖಾದರ್‌ ಗೆದ್ದಿದ್ದಾರೆ. ಖಾದರ್‌ ಅವರಿಗೆ ಮಂತ್ರಿ ಸ್ಥಾನ ಲಭ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆದಾರೆಂಬ ನಿರೀಕ್ಷೆಯಿತ್ತು. ಉಳಿದಂತೆ ಉಡುಪಿಗೆ ಬೇರೆಯವರು ಉಸ್ತುವಾರಿ ಬರಬಹುದೆಂಬ ಲೆಕ್ಕಾಚಾರವಿತ್ತು. ಆದರೆ ಖಾದರ್‌ ಅವರನ್ನು ಸ್ಪೀಕರ್‌ ಆಗಿ ಮಾಡಲಾಗಿದೆ.

ಕಾಂಗ್ರೆಸ್‌ನಿಂದ ಘಟಾನುಘಟಿಗಳು ಕಣದಲ್ಲಿದ್ದರೂ ಗೆಲ್ಲಲು ಸಾಧ್ಯವಾಗಿಲ್ಲ. ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್‌ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಕಣದಲ್ಲಿದ್ದರು. ಯಾರು ಗೆದ್ದಿದ್ದರೂ ಸಚಿವರಾಗುತ್ತಿದ್ದರು. ಹಿರಿತನ ಹಾಗೂ ಕರಾವಳಿ ಕೋಟಾದಡಿ ಸಚಿವ ಸ್ಥಾನ ಸಿಗುತ್ತಿತ್ತು. ಈಗ ಮಂತ್ರಿಮಂಡಲ ರಚನೆಯೂ ಮುಗಿದಿದ್ದು, ಎರಡೂ ಜಿಲ್ಲೆಗಳಿಗೆ ಯಾರು ಉಸ್ತುವಾರಿಗಳಾಗಿ ಬರುತ್ತಾರೆಂಬ ಪ್ರಶ್ನೆ ಎದ್ದಿದೆ.

ವಿಧಾನ ಪರಿಷತ್‌ ಸದಸ್ಯರಾದ ಬಿ.ಕೆ. ಹರಿಪ್ರಸಾದ್‌ ಸಚಿವರಾಗಿದ್ದರೆ ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯಾಗುತ್ತಿದ್ದರು ಎಂಬ ಮಾತು ಕರಾವಳಿ ಕಾಂಗ್ರೆಸ್‌ ವಲಯದಿಂದಲೇ ಕೇಳಿ ಬರುತ್ತಿವೆ. ಇದಲ್ಲದೇ ಒಂದುವೇಳೆ ವಿಧಾನಪರಿಷತ್‌ ಸದಸ್ಯರನ್ನೂ ಮಂತ್ರಿಗಿರಿಗೆ ಪರಿಗಣಿಸಿದ್ದರೆ ಮಂಜುನಾಥ್‌ ಭಂಡಾರಿ ಅಥವಾ ಹರೀಶ ಕುಮಾರ್‌ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಆಗ ಅವರು ಉಭಯ ಜಿಲ್ಲೆಗಳ ಉಸ್ತುವಾರಿಯಾದಾರು ಎಂಬ ಲೆಕ್ಕಾಚಾರವಿತ್ತು. ಅದೂ ಈಗ ಹುಸಿಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಸೇರಿ ಇಡೀ ಕರಾವಳಿಯ 21 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 13 ಹಾಗೂ ಕಾಂಗ್ರೆಸ್‌ 8 ಸ್ಥಾನ ಗೆದ್ದಿತ್ತು. ಭಟ್ಕಳದಿಂದ ಗೆದ್ದಿರುವ ಮಾಂಕಾಳ ವೈದ್ಯ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಉಳಿದ ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನವಿಲ್ಲ. ಮಾಂಕಾಳ ವೈದ್ಯರಿಗೆ ಉ.ಕ. ಉಸ್ತುವಾರಿಯೇ ನೀಡುವ ಸಾಧ್ಯತೆ ಹೆಚ್ಚಿದೆ. ರಾಜ್ಯದಲ್ಲಿರುವ 34 ಮಂತ್ರಿಗಳಲ್ಲಿ ಯಾರಿಗೆ ಉಭಯ ಜಿಲ್ಲೆಗಳ ಉಸ್ತುವಾರಿ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸವಾಲಿದೆ
ಉಭಯ ಜಿಲ್ಲೆಗಳ 13 ಕ್ಷೇತ್ರಗಳ ಪೈಕಿ 11ರಲ್ಲಿ ಬಿಜೆಪಿ ಶಾಸಕರೇ ಇದ್ದು, ಯಾರೇ ಉಸ್ತುವಾರಿ ಸಚಿವರಾದರೂ ಹೊಂದಾಣಿಕೆ ಹೆಚ್ಚು ಅಗತ್ಯವಿರುತ್ತದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಶಾಸಕರು ಹಾಗೂ ಸಚಿವರು ಒಮ್ಮತದಿಂದಲೇ ಕೆಲವು ನಿರ್ಧಾರ ಕೈಗೊಳ್ಳ ಬೇಕಾದ ಅನಿವಾರ್ಯವೂ ಉದ್ಭವಿಸಲಿದೆ. ಇದರ ಮಧ್ಯೆ ಶಾಸಕರು, ಉಸ್ತುವಾರಿ ಸಚಿವರ ಭಿನ್ನ ಒತ್ತಡವನ್ನು ಅಧಿಕಾರಿಗಳು ಯಾವ ರೀತಿ ನಿಭಾಯಿಸಬಲ್ಲರು ಎಂಬುದೂ ಉಭಯ ಜಿಲ್ಲೆಗಳ ಪ್ರಗತಿಯನ್ನು ನಿರ್ಧರಿಸಲಿದೆ.

1997ರ ಬಳಿಕದ ಜಿಲ್ಲಾ ಉಸ್ತುವಾರಿಗಳು
1997ರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವಿಭಾಗಗೊಂಡು ಉಡುಪಿ ಜಿಲ್ಲೆ ರಚನೆಯಾಗಿತ್ತು. ಬಳಿಕ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದವರ ಹೆಸರು ಇಂತಿದೆ:

ಉಡುಪಿ ಜಿಲ್ಲೆ: ಜಯಪ್ರಕಾಶ್‌ ಹೆಗ್ಡೆ, ರೋಷನ್‌ ಬೇಗ್‌, ಮೋಟಮ್ಮ, ಸುಮಾ ವಸಂತ್‌, ವಸಂತ್‌ ಸಾಲ್ಯಾನ್‌, ಡಿ.ಟಿ. ಜಯಕುಮಾರ್‌, ಡಾ| ವಿ.ಎಸ್‌. ಆಚಾರ್ಯ, ಕೋಟ ಶ್ರೀನಿವಾಸ ಪೂಜಾರಿ, ವಿನಯ ಕುಮಾರ್‌ ಸೊರಕೆ, ಪ್ರಮೋದ್‌ ಮಧ್ವರಾಜ್‌, ಜಯ ಮಾಲಾ, ಕೋಟ ಶ್ರೀನಿವಾಸ ಪೂಜಾರಿ, ಬಸವರಾಜ ಬೊಮ್ಮಾಯಿ, ಎಸ್‌. ಅಂಗಾರ

ದಕ್ಷಿಣ ಕನ್ನಡ ಜಿಲ್ಲೆ: ಬಿ.ಎ. ಮೊದಿನ್‌, ಬಿ. ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ, ಬಿ. ರಮಾನಾಥ ರೈ (2ನೇ ಬಾರಿ), ಜಬ್ಟಾರ್‌ಖಾನ್‌ ಹೊನ್ನಳ್ಳಿ, ಕೃಷ್ಣ ಪಾಲೆಮಾರ್‌, ಯು.ಟಿ. ಖಾದರ್‌, ಕೋಟ ಶ್ರೀನಿವಾಸ ಪೂಜಾರಿ, ಎಸ್‌. ಅಂಗಾರ, ವಿ. ಸುನಿಲ್‌ ಕುಮಾರ್‌.

ಪರಿಷತ್‌, ನಿಗಮ ಮಂಡಳಿಗೆ ಪ್ರಯತ್ನ
ಇದೇ ಸಂದರ್ಭದಲ್ಲಿ ಕರಾವಳಿಯ ಕಾಂಗ್ರೆಸ್‌ನ ಹಿರಿಯ ಮುತ್ಸದ್ಧಿಗಳು ವಿಧಾನ ಪರಿಷತ್‌/ ನಿಗಮ ಮಂಡಳಿಯ ಸ್ಥಾನದತ್ತಲೂ ಗಮನ ಹರಿಸಿದ್ದಾರೆ.

ಬೈಂದೂರಿನಲ್ಲಿ ಸ್ಪರ್ಧಿಸಿದ್ದ ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಪುವಿನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮತ್ತು ಬಂಟ್ವಾಳದಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ರಮಾನಾಥ ರೈ ಅವರು ಈ ಬಾರಿ ಆಯ್ಕೆಯಾಗಿಲ್ಲ. ಇವರಲ್ಲಿ ಸೊರಕೆಯವರು ವಿಧಾನ ಪರಿಷತ್‌ಗೆ ಪ್ರಯತ್ನ ಮಾಡುತ್ತಿಲ್ಲ ಎಂದು ಸ್ವತಃ “ಉದಯವಾಣಿ’ಗೆ ಖಚಿಪಡಿಸಿದ್ದಾರೆ. ಗೋಪಾಲ ಪೂಜಾರಿ ಅವರು ಪ್ರಯತ್ನಿಸುತ್ತಿರುವುದನ್ನು ಖಚಿತಪಡಿಸಿದ್ದರೆ, ರಮಾನಾಥ ರೈ ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕೆಂಬ ಆಗ್ರಹ ಅವರ ಬೆಂಬಲಿಗರದ್ದು.

ಗೋಪಾಲ ಪೂಜಾರಿಯವರು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಜಯ ಸಾಧಿಸಿದ್ದರೂ ಸಚಿವರಾಗಿಲ್ಲ. ಈಗಾಗಲೇ ಪಕ್ಷದ ವರಿಷ್ಠರಲ್ಲಿ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯಿಂದ ಕಾಂಗ್ರೆಸ್‌ ಅಭ್ಯರ್ಥಿಗಳು ಯಾರೂ ಜಯ ಸಾಧಿಸದ ಕಾರಣ ಗೋಪಾಲ ಪೂಜಾರಿಯವರನ್ನು ವಿಧಾನಪರಿಷತ್‌ ಸದಸ್ಯತ್ವಕ್ಕೆ ಪರಿಗಣಿಸಬಹುದು ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲೂ ಇದೆ ಎನ್ನಲಾಗಿದೆ.

ಬಂಟ್ವಾಳದಿಂದ 6 ಬಾರಿ ಶಾಸಕರಾಗಿದ್ದ ರಮಾನಾಥ ರೈ ಸಚಿವರಾಗಿದ್ದರು. ಆದರೆ 7ನೇ ಬಾರಿ ಶಾಸಕರಾಗುವ ಪ್ರಯತ್ನ ಕೈಗೂಡಲಿಲ್ಲ. ಜಿಲ್ಲೆಯಲ್ಲಿ ತಮ್ಮದೇ ಛಾಪು ಹೊಂದಿರುವ ಅವರನ್ನು ಪಕ್ಷದ ವರಿಷ್ಠರು ಅವಗಣಿಸಲಾರರು ಎಂಬ ಅಭಿಪ್ರಾಯ ಅವರ ಬೆಂಬಲಿಗರದ್ದು. ಇದರೊಂದಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನಗಳೂ ಖಾಲಿ ಇವೆ. ಅವುಗಳಿಗೆ ಅಧ್ಯಕ್ಷರನ್ನು ನೇಮಿಸುವಾಗ ಕರಾವಳಿಯವರನ್ನು ಪರಿಗಣಿಸುವರೇ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.