ಮದುವೆಗೆ ಒಂದೇ ದಿನ ರಜೆ: ಡಿಸಿಗೆ ಸಚಿವರ ಶ್ಲಾಘನೆ
Team Udayavani, Mar 7, 2019, 1:00 AM IST
ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಬುಧವಾರ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರ ಅಧ್ಯಕ್ಷತೆಯಲ್ಲಿ ತ್ತೈಮಾಸಿಕ ಕೆಡಿಪಿ ಸಭೆ ಜರಗಿತು.
ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಒಂದು ದಿನ ಮಾತ್ರ ಕಚೇರಿಗೆ ರಜೆ ಹಾಕಿ ಮಾದರಿಯಾಗಿ¨ªಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಮೆಚ್ಚುಗೆ ಸೂಚಿಸಿದರು.
ಬುಧವಾರ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಹೆಪ್ಸಿಬಾ ರಾಣಿ ಅವರು ತಮ್ಮ ಮದುವೆಗೆ ಕೇವಲ ಒಂದು ದಿನ ರಜೆ ಹಾಕಿ ಕರ್ತವ್ಯಕ್ಕೆ ಹಾಜರಾಗಿ¨ªಾರೆ. ಜಿಲ್ಲಾಡಳಿತದ ಮುಖ್ಯಸ್ಥರಾಗಿರುವ ಅವರ ಕರ್ತವ್ಯ ನಿಷ್ಠೆ ಮಾದರಿಯಾಗಿದೆ ಎಂದು ಶುಭಾಶಯ ಕೋರಿದರು.
ಜಿಲ್ಲಾಡಳಿತದ ಅತ್ಯುನ್ನತ ಮೂರು ಹು¨ªೆಗಳಾದ ಡಿಸಿ, ಸಿಇಒ, ಎಸ್ಪಿ ಹು¨ªೆಗಳನ್ನು ಮಹಿಳೆಯರೇ ಅಲಂಕರಿಸಿರುವುದು ಅತೀವ ಸಂತಸ ತಂದಿದೆ ಎಂದು ಸಚಿವೆ ಜಯಮಾಲಾ ಹೇಳಿದರು. ಶಾಸಕ ಲಾಲಾಜಿ ಮೆಂಡನ್ ಅವರೂ ಜಿಲ್ಲಾಧಿಕಾರಿಗಳಿಗೆ ಶುಭ ಕೋರಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿ.ಪಂ. ಸಿಇಒ ಸಿಂಧು ರೂಪೇಶ್, ಎಸ್ಪಿ ನಿಶಾ ಜೇಮ್ಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ