ಉಡುಪಿ ಜಿಲ್ಲೆಯಲ್ಲಿ ಪೂರ್ಣಕಾಲೀನ ಅಧಿಕಾರಿ ಒಬ್ಬರೇ


Team Udayavani, Jan 1, 2019, 4:36 AM IST

temple.jpg

ಉಡುಪಿ: ಅನ್ನ ಸಂತರ್ಪಣೆ ನಡೆಯುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷವಾಗಿ ಅಡುಗೆ ಕೋಣೆಗಳಿಗೆ ಸಿಸಿಟಿವಿ ಅಳವಡಿಸಬೇಕು, ಪ್ರಸಾದ ವಿತರಣೆಗೆ ಮುನ್ನ ಆಹಾರ ಸುರಕ್ಷೆ ಬಗೆಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಸರಕಾರ ಸುತ್ತೋಲೆ ಹೊರಡಿಸಿದೆ. ಆದರೆ ಪರೀಕ್ಷೆ ನಡೆಸಬೇಕಿರುವ ಆಹಾರ ಸುರಕ್ಷಾ ಇಲಾಖೆಯ ಸಿಬಂದಿ ಸ್ಥಿತಿಗತಿ ಗಮನಿಸಿದರೆ ಇದರ ಕಾರ್ಯಸಾಧ್ಯತೆಯ ಬಗ್ಗೆ ಅನುಮಾನ ಮೂಡುತ್ತದೆ.

ಅಡುಗೆಯನ್ನು ಪರೀಕ್ಷೆ ಮಾಡಬೇಕು ಎಂದು ನಿರ್ದೇಶನ ನೀಡಿದಷ್ಟು ಸರಳವಾಗಿ ಇದರ ಜಾರಿ ಕಷ್ಟ. ಸರಕಾರವು ಆಹಾರ ಸುರಕ್ಷಾ ಇಲಾಖೆಗೆ ಈ ಜವಾಬ್ದಾರಿ ವಹಿಸಿದೆ. ಇದುವರೆಗೆ ಈ ಇಲಾಖೆಯ ಅಧಿಕಾರಿಗಳ ಕಾರ್ಯಭಾರ ಆಹಾರ ಮಾರಾಟ ಮಾಡುವವರ ಬಗ್ಗೆ ಮಾತ್ರ ಇತ್ತು. ಈಗ ಉಚಿತವಾಗಿ ಆಹಾರ ವಿತರಿಸುವ ದೇವಸ್ಥಾನಗಳಿಗೂ ಅಧಿಕಾರ ವಿಸ್ತರಣೆಯಾಗಿದೆ. ಈ ಇಲಾಖೆಯಲ್ಲಿ ಎಷ್ಟು ಸಿಬಂದಿ ಇದ್ದಾರೆ ಎಂದು ಗಮನಿಸಿದರೆ ಗಾಬರಿಯಾದೀತು. ಸುತ್ತೋಲೆ ಪ್ರಕಾರ ಊಟ ನಡೆಯುವಲ್ಲೆಲ್ಲ ಇವರು ಹೋಗಿ ಪರೀಕ್ಷಿಸಬೇಕು.

ಉಡುಪಿ ಜಿಲ್ಲೆಯಲ್ಲಿ, ಉಡುಪಿ ತಾಲೂಕಿನಲ್ಲಿ ಮಾತ್ರ ಒಬ್ಬ ಆಹಾರ ಸುರಕ್ಷಾಧಿಕಾರಿ ಇದ್ದಾರೆ. ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಿಗೆ ಆಹಾರ ಸುರಕ್ಷಾಧಿಕಾರಿಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ. ಈ ಮೂವರಿಗೆ ಅಂಕಿತಾಧಿಕಾರಿಯಾಗಿ ಜಿಲ್ಲೆಗೆ ಒಬ್ಬರೇ ಜಿಲ್ಲಾ ಸರ್ವೇಕ್ಷಣಾಧಿಕಾರಿ ಇದ್ದಾರೆ. ಅದರಲ್ಲೂ ಇವರಿಗೆ ಅಂಕಿತಾಧಿಕಾರಿ ಪಟ್ಟ ಹೆಚ್ಚುವರಿ ಹೊಣೆ. ಇವರಿಗೆ ಚಾಲಕರು, ಅಟೆಂಡರ್‌ ಇತ್ಯಾದಿ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲಾಗಿದೆ. ಇದು ಕೇವಲ ಉಡುಪಿ ಜಿಲ್ಲೆಯ ಕಥೆಯಲ್ಲ, ಇಡೀ ರಾಜ್ಯದ ಕಥೆಯೂ ಹೌದು.

ಒಟ್ಟು  893 ದೇಗುಲ
ಜಿಲ್ಲೆಯಲ್ಲಿ ಎ ಶ್ರೇಣಿಯ 25, ಬಿ ಶ್ರೇಣಿಯ 19, ಸಿ ಶ್ರೇಣಿಯ 759 ಸೇರಿ ಒಟ್ಟು 893 ದೇವಸ್ಥಾನಗಳಿವೆ. ಎ ಮತ್ತು ಬಿ ಶ್ರೇಣಿ ದೇವಸ್ಥಾನಗಳಲ್ಲಿ ಈಗಾಗಲೇ ಸಿಸಿಟಿವಿ ಇದೆ. ಆದರೆ ಕೆಲವು ದೇವಸ್ಥಾನಗಳ ಅಡುಗೆ ಕೋಣೆಗಳಿಗೆ ಸಿಸಿಟಿವಿ ಅಳವಡಿಸಿಲ್ಲ. ಅಲ್ಲೂ ಸಿಸಿಟಿವಿ ಅಳವಡಿಸಲು ದತ್ತಿ ಇಲಾಖೆ ಸಹಾಯಕ ಆಯುಕ್ತರು ನಿರ್ದೇಶನ ನೀಡಿದ್ದಾರೆ.
ಕೊಲ್ಲೂರು, ಮಂದಾರ್ತಿ, ಪೆರ್ಡೂರು, ನೀಲಾವರ, ಮಾರಣಕಟ್ಟೆ, ಮುಂಡ್ಕೂರು ಸಹಿತ ಜಿಲ್ಲೆಯ 9 ದೇವಸ್ಥಾನಗಳಲ್ಲಿ ನಿತ್ಯ ಅನ್ನಸಂತರ್ಪಣೆ ಇದೆ. ಖಾಸಗಿ ವಲಯದಲ್ಲಿರುವ ಶ್ರೀಕೃಷ್ಣ ಮಠ, ಆನೆಗುಡ್ಡೆ, ಸಾಲಿಗ್ರಾಮ ಮೊದಲಾದ ದೇವಸ್ಥಾನ ಗಳಲ್ಲಿಯೂ ಅನ್ನಸಂತರ್ಪಣೆ ಇದೆ. ಪ್ರಸ್ತುತ ದತ್ತಿ ಇಲಾಖೆಯ ಅಧಿಕಾರಿಗಳು ಖಾಸಗಿ ದೇವಸ್ಥಾನಗಳಿಗೆ ಸುತ್ತೋಲೆ ನೀಡಿಲ್ಲ. ಘಟ್ಟದ ಪ್ರದೇಶಗಳಲ್ಲಿ ಭಕ್ತರು ಹೊರಗೆ ಪ್ರಸಾದ ತಯಾರಿಸಿ ದೇವಸ್ಥಾನಗಳಲ್ಲಿ ತಂದು ವಿತರಣೆ ಮಾಡುವ ಕ್ರಮದಂತೆ ಕರಾವಳಿ ಜಿಲ್ಲೆಗಳಲ್ಲಿ ಇಲ್ಲದಿದ್ದರೂ ಮುಂಜಾಗ್ರತೆಯ ಭಾಗ ವಾಗಿ ಇಂತಹ ಸಂದರ್ಭ ಪೂರ್ವಾನುಮತಿ ಪಡೆಯಬೇಕೆಂದೂ ತಿಳಿಸಲಾಗಿದೆ.

ಕಾನೂನು ವ್ಯಾಪ್ತಿಗೆ ತರುವ ಮಾರ್ಗ
ಅನ್ನ ದಾಸೋಹ ನಡೆಸುವ ದೇವಸ್ಥಾನಗಳು 100 ರೂ. ಕೊಟ್ಟು ನೋಂದಣಿ ಮಾಡಿಸಿ ಕೊಳ್ಳಬೇಕು ಅಥವಾ 1,500 ರೂ.ನಿಂದ ವಿವಿಧ ದರ್ಜೆಯ ಶುಲ್ಕ ನೀಡಿ ಪರವಾನಿಗೆ ಪಡೆದುಕೊಳ್ಳಬೇಕೆಂದಿದೆ. ಇದು ದೇವಸ್ಥಾನ ಗಳನ್ನು ಸರಕಾರ ತನ್ನ ಕಾನೂನಿನ ವ್ಯಾಪ್ತಿಗೆ ತರುವ ಕ್ರಮವಾಗಿದೆ.

ನೈವೇದ್ಯವನ್ನೂ ಪರೀಕ್ಷಿಸಿ!
ದೇವರ ನೈವೇದ್ಯವನ್ನೂ ಪರೀಕ್ಷಿಸಬೇಕು ಎಂದು  ಸುತ್ತೋಲೆ ಹೊರಡಿಸಲಾಗಿದೆ.

ದೇವಸ್ಥಾನಗಳಲ್ಲಿ ವಿತರಿಸುವ ಆಹಾರಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಲು ಎಲ್ಲ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ. 
ಪ್ರಶಾಂತ್‌ ಶೆಟ್ಟಿ, ತಹಶೀಲ್ದಾರ್‌, ಧಾರ್ಮಿಕ ದತ್ತಿ ಇಲಾಖೆ, ಉಡುಪಿ.

ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳ ಪ್ರತಿನಿಧಿಗಳಿಗೆ ಆಹಾರ ಸುರಕ್ಷೆ  ಕುರಿತು ಕಾರ್ಯಾಗಾರ ಮಾಡಲಾಗುವುದು. ಕಾರ್ಯಾಗಾರದಲ್ಲಿ ಆಹಾರ ಸುರಕ್ಷೆ ಕುರಿತು ತಿಳಿಸಲಾಗುವುದು. 
ಡಾ| ವಾಸುದೇವ್‌, ಆಹಾರ ಸುರಕ್ಷಾ ಅಂಕಿತಾಧಿಕಾರಿ, ಉಡುಪಿ ಜಿಲ್ಲೆ.

 
ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.