ತುಳಸೀ ಸಂಕೀರ್ತನೆ ಶ್ಲಾಘನಾರ್ಹ: ಪಲಿಮಾರು ಶ್ರೀ
ತುಳಸೀ ಸಂಕೀರ್ತನೆ ಸ್ಪರ್ಧೆ ಉದ್ಘಾಟನೆ
Team Udayavani, Oct 15, 2019, 5:16 AM IST
ಉಡುಪಿ: ಭಕ್ತಿ, ನೃತ್ಯ, ಹಾಡುಗಾರಿಕೆ ಒಳಗೊಂಡಿರುವ ತುಳಸೀ ಸಂಕೀರ್ತನೆ ಕಲೆ ಅಪೂರ್ವವಾಗಿದ್ದು, ನಶಿಸುತ್ತಿರುವ ಈ ಕಲೆಗೆ ಜೀವಕಲೆ ನೀಡುವ ತುಶಿಮಾಮ ಸಂಘಟನೆ ಪ್ರಯತ್ನ ಶ್ಲಾಘನಾರ್ಹ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು.
ಸೋಮವಾರ ಮಧ್ವಮಂಟಪದಲ್ಲಿ ಪರ್ಯಾಯ ಪಲಿಮಾರು ಮಠ ಮತ್ತು ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ವತಿಯಿಂದ ಒಂದು ವಾರ ನಡೆಯುವ ತುಳಸೀ ಸಂಕೀರ್ತನೆ ಸಪ್ತಾಹ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ತುಳಸೀ ಕಟ್ಟೆ ಮನೆ ಎದುರಿಗೆ ಇದ್ದರೆ ಆರೋಗ್ಯ ಪ್ರಾಪ್ತಿಯಾಗುತ್ತದೆ. ಇಂಥ ವಿಶಿಷ್ಟ ಗುಣ ತುಳಸಿಗಿದೆ. ಬಹು ಮಹಡಿ ಕಟ್ಟಡ ಹಾಗೂ ಮನೆಯ ಎದುರಲ್ಲಿ ತುಳಸೀ ಕಟ್ಟೆ ನಿರ್ಮಾಣ ಮಾಡಿದರೆ ತುಶಿಮಾಮ ಸದಸ್ಯರು ಬಂದು ಸಂಕೀರ್ತನಾ ಸೇವೆ ನಡೆಸಿಕೊಡಲಿದ್ದಾರೆ ಎಂದರು.
ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ, ಹಿರಿಯ ಸಾಹಿತಿ ಎ.ವಿ. ನಾವಡ, ಕಟೀಲು ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಯುಗಪುರುಷದ ಭುವನಾಭಿರಾಮ ಉಡುಪ, ಉದ್ಯಮಿ ಶ್ರೀಪತಿ ಭಟ್, ಬಾಲಾಜಿ ರಾಘವೇಂದ್ರ ಆಚಾರ್ಯ, ಕೃಷ್ಣರಾಜ ಸರಳಾಯ, ಕಸಾಪ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ಕುಮಾರ್ ಕಲ್ಕೂರ, ಕರ್ಣಾಟಕ ಬ್ಯಾಂಕ್ ಎಜಿಎಂ ಗೋಪಾಲಕೃಷ್ಣ ಸಾಮಗ, ತುಶಿಮಾಮ ಪ್ರಧಾನ ಕಾರ್ಯದರ್ಶಿ ರವಿಪ್ರಕಾಶ್ ಭಟ್ ಉಪಸ್ಥಿತರಿದ್ದರು. ಅಧ್ಯಕ್ಷ ಕೆ. ಅರವಿಂದ ಆಚಾರ್ಯ ಸ್ವಾಗತಿಸಿದರು.
ಅ. 20: ಸಮಾರೋಪ
ಅ.20ರಂದು ಸಾಯಂಕಾಲ 3.30ಕ್ಕೆ ಸಮಾರೋಪ ನಡೆಯಲಿದೆ. ಪುರುಷ, ಮಹಿಳೆ ಹಾಗೂ ಬಾಲಕಿಯರ ಮೂರು ವಿಭಾಗದಲ್ಲಿ 25 ತಂಡಗಳು ಭಾಗವಹಿಸಲಿವೆ. ಪ್ರಥಮ ಬಹುಮಾನ 5 ಸಾವಿರ ರೂ., ದ್ವಿತೀಯ 3 ಸಾವಿರ, ತೃತೀಯ 2 ಸಾವಿರ ರೂ.ಹಾಗೂ ಪ್ರಶಸ್ತಿ ಫಲಕ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ