ಉಡುಪಿ ನಗರ ನಿಷೇಧಿತ ಪ್ಲಾಸ್ಟಿಕ್ ಮಾರಾಟ ವಿರುದ್ಧ ಕಾರ್ಯಾಚರಣೆ
Team Udayavani, Sep 26, 2019, 5:51 AM IST
ಉಡುಪಿ: ನಿಷೇಧಿತ ಪ್ಲಾಸ್ಟಿಕ್ ಪರಿಕರಗಳ ಮಾರಾಟ ವಿರುದ್ಧ ಉಡುಪಿ ನಗರಸಭೆಯ ಆಯುಕ್ತರ ಆನಂದ ಸಿ. ಕಲ್ಲೋಳಿಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಬುಧವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.
ಆದಿಉಡುಪಿ ಸಂತೆ ಮಾರ್ಕೆಟ್, ಉಡುಪಿ ಕೆಎಸ್ಆರ್ಟಿಸಿ ಬಸ್ನಿಲ್ದಾಣ ಸಮೀಪದ ರಖಂ ಮಾರಾಟ ಅಂಗಡಿ, ಹೂವಿನ ಅಂಗಡಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು 190 ಕೆಜಿ ನಿಷೇಧಿತ
ಪ್ಲಾಸ್ಟಿಕ್ನ್ನು ವಶಪಡಿಸಿಕೊಂಡಿದೆ. ಇದರಲ್ಲಿ ಕ್ಯಾರಿಬ್ಯಾಗ್, ಸ್ಟ್ರಾ, ಪ್ಲಾಸ್ಟಿಕ್ ಚಮಚ ಮೊದಲಾದವು ಸೇರಿವೆ.
ಅ.2ರಿಂದ ದಂಡ
“ಸದ್ಯ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು ಎಚ್ಚರಿಕೆ, ತಿಳಿವಳಿಕೆ ನೀಡುತ್ತಿದ್ದೇವೆ. ಅ.2ರ ಅನಂತರ ದಂಡ ವಸೂಲಿ ಆರಂಭಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಆರೋಗ್ಯ ಅಧಿಕಾರಿ ಕರುಣಾಕರ್, ಆರೋಗ್ಯ ನಿರೀಕ್ಷಕ ಪಾಂಡುರಂಗ, ಕಂದಾಯ ನಿರೀಕ್ಷಕ ಧನಂಜಯ್, ಅಧಿಕಾರಿಗಳಾದ ಆನಂದ್, ಪ್ರಸನ್ನ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ