ಮಾಲಾಡಿ: ಆಪರೇಷನ್‌ ಚೀತಾ ಕಾರ್ಯಾಚರಣೆ ಯಶಸ್ವಿ:12 ದಿನದಲ್ಲಿ ಮತ್ತೊಂದು ಹೆಣ್ಣು ಚಿರತೆ ಸೆರೆ


Team Udayavani, Dec 24, 2019, 9:20 AM IST

CHE

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಲಾಡಿ ಅರೆಬೈಲು ತೋಳಾರ್‌ ಮಾವಿನ ತೋಪಿನಲ್ಲಿ ಕಳೆದ ಹಲವು ದಿನಗಳಿಂದಲೂ ಚಿರತೆ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕುಂದಾಪುರ ಅರಣ್ಯಾ ಇಲಾಖೆ ಚಿರತೆ ಸೆರೆ ಹಿಡಿಯಲು ಮಾಲಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಬಳಿ ಬೋನ್‌ ಇರಿಸಿ ಸತತವಾಗಿ ಒಂದು ತಿಂಗಳುಗಳ ಕಾಲ ಕಾರ್ಯಾಚರಣೆ ನಡೆಸಿದ ಫಲವಾಗಿ ಡಿ.24 ರಂದು ಹೆಣ್ಣು ಚಿರತೆ ಸೆರೆ ಬಿದ್ದಿದ್ದು ಒಟ್ಟಿನಲ್ಲಿ ಒಂದೇ ಕಡೆಯಲ್ಲಿ ನಾಲ್ಕನೆ ಚಿರತೆಯೊಂದು ಸೆರೆಯಾದಂತಾಗಿದೆ.

ಬೋನ್‌ನಲ್ಲಿ ಸೆರೆಯಾದ ನಾಲ್ಕನೇ ಚಿರತೆ : ಚಿರತೆಯೊಂದು ಬೋನಿನಲ್ಲಿ ಸೆರೆಯಾಗಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಸ್ಥಳದಲ್ಲಿ ಪರಿಸರದ ನೂರಾರು ಮಂದಿ ಜಮಾಯಿಸಿ ಕುತೂಹಲದಿಂದ ವೀಕ್ಷಿಸುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂತು.

ನಿರಂತರ ಕಾರ್ಯಾಚರಣೆ : ಈ ಹಿಂದೆ ಆ.4 ,2018 , ಅ.6, 2019, ಡಿ.12, 2019, ಡಿ.24 ,2019 ಸೇರಿದಂತೆ ಇದೇ ಸ್ಥಳದಲ್ಲಿ ಇರಿಸಿದ ಬೋನ್‌ಗೆ ನಾಲ್ಕು ಚಿರತೆಗಳು ಸೆರೆಯಾದಂತಾಗಿದೆ. ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಉದಯ ಬಿ., ಗ್ರಾ.ಪಂ.ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಗ್ರಾ.ಪಂ.ಸದಸ್ಯ ಸಂಜೀವ ದೇವಾಡಿಗ, ಸತೀಶ್‌ ದೇವಾಡಿಗ, ವಿಜಯ ಭಂಡಾರಿ ಹಾಗೂ ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.


ಕಾರ್ಯಾಚರಣೆಗೆ ಸಾಥ್‌ ನೀಡಿದ ಸುರೇಶ್‌ ದೇವಾಡಿಗ ಮತ್ತು ಸತೀಶ್‌ ದೇವಾಡಿಗ ಸಹೋದರರು.
ಗ್ರಾಮೀಣ ಭಾಗದ ಜನತೆಯಲ್ಲಿ ಆತಂಕ ಹುಟ್ಟಿಸಿದ್ದ ಚಿರತೆ ಸಂಚಾರ ಒಂದೆಡೆಯಾದರೆ ಮಾವಿನ ತೋಪಿನ ಸಮೀಪದಲ್ಲೇ ಇರುವ ಅಂಗನವಾಡಿ ಕೇಂದ್ರ ಹಾಗೂ ಶಾಲಾ ಪರಿಸರದಲ್ಲೇ ಹಗಲಿನಲ್ಲಿಯೇ ಪ್ರತ್ಯಕ್ಷವಾಗುವ ಚಿರತೆಗಳು ಸ್ಥಳೀಯರಿಗೆ ತೀವ್ರ ತಲೆ ನೋವಾಗಿ ಪರಿಣಮಿಸಿತ್ತು. ಚಿರತೆ ಸೆರೆ ಹಿಡಿಯಲು ಬೋನ್‌ ಇರಿಸಿ ಸ್ಥಳಕ್ಕೆ ಕತ್ತಲಾಗುತ್ತಿದ್ದಂತೆ ಬೋನ್‌ನ ಒಂದೆಡೆಯಲ್ಲಿ ನಾಯಿ ಮರಿಯನ್ನು ಇರಿಸಿ , ಅಪಾಯದ ನಡುವೆಯೂ ಕೂಡಾ ಕಾರ್ಯಾಚರಣೆಗೆ ಸಂಪೂರ್ಣ ಸಾಥ್‌ ನೀಡಿದ ಸ್ಥಳೀಯರಾದ ಮಾಲಾಡಿ ಸುರೇಶ್‌ ದೇವಾಡಿಗ ಮತ್ತು ಸತೀಶ್‌ ದೇವಾಡಿಗ ಸಹೋದರರ ಬಗ್ಗೆ ಪರಿಸರದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಸ್ಥಳೀಯ ಉದ್ಯಮಿ ಪ್ರಭಾಕರ ತೋಳಾರ್‌ ಅವರಿಗೆ ಸಂಬಂಧಪಟ್ಟ ಮಾಲಾಡಿ ಅರೆಬೈಲ್‌ನಲ್ಲಿ ಸುಮಾರು 14 ಎಕರೆ ವಿಸ್ತೀರ್ಣದಲ್ಲಿ ಬೆಳೆದು ನಿಂತ ಮಾವಿನ ತೋಪುಗಳ ನಡುವೆ ದಟ್ಟವಾಗಿ ಗಿಡಗಂಟಿಗಳು ಆವರಿಸಿದ್ದು , ಈ ನಡುವೆ ವನ್ಯ ಜೀವಿಗಳು ಕಾಡು ಬಿಟ್ಟು ನಾಡಿನೆಡೆಗೆ ಸಂಚರಿಸಲು ಪ್ರಮುಖ ಕಾರಣವಾಗಿದೆ . ಈ ಬಗ್ಗೆ ಬೆಳೆದು ನಿಂತ ಗಿಡಗಂಟಿಗಳ ತೆರವಿಗೆ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗಿದ್ದು ಸಂಭವನೀಯ ಅವಘಡಗಳು ಸಂಭವಿಸುವ ಮೊದಲೇ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತೆಕ್ಕಟ್ಟೆ ಗ್ರಾ.ಪಂ.ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದ್ದಾರೆ.

ಶಾಲಾ ವಠಾರ ನಿಧಾನ ಚಲಿಸಿ , ಚಿರತೆ ಇದೆ ವೇಗವಾಗಿ ಚಲಿಸಿ ಜಾಗೃತಿ ನಾಮಫಲಕ
ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜನವಸತಿ ಪ್ರದೇಶ ಸೇರಿದಂತೆ ಮಾಲಾಡಿ ಶ್ರೀ ನಂದಿಕೇಶ್ವರ ದೇವಸ್ಥಾನ, ಅಂಗನವಾಡಿ ಕೇಂದ್ರ ಮತ್ತು ಮಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪರಿಸರದ ನಡುವೆ ಇರುವ ಮಾಲಾಡಿ ಅರೆಬೈಲು ತೋಳಾರ್‌ ಮಾವಿನ ತೋಪಿನ ನಿರಂತರವಾಗಿ ಚಿರತೆ ಸಂಚಾರ ನಡೆಸುತ್ತಿದ್ದು ಈ ಬಗ್ಗೆ ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರೂ ಕೂಡಾ ಯಾವುದೇ ಶಾಶ್ವತ ಪರಿಹಾರ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ಮಾವಿನ ತೋಪಿಗೆ ಸಂಪರ್ಕ ಕಲ್ಪಿಸುವ ಗೇಟ್‌ಗೆ ಸ್ಥಳೀಯರು ಶಾಲಾ ವಠಾರ ನಿಧಾನ ಚಲಿಸಿ , ಚಿರತೆ ಇದೆ ವೇಗವಾಗಿ ಚಲಿಸಿ ಎನ್ನುವ ಜಾಗೃತಿ ನಾಮಫಲಕ ಅಳವಡಿಸಿ ಜನ ಜಾಗೃತಿ ಮೂಡಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.