ಕೋಟ ಜನಸ್ನೇಹಿ ಕೇಂದ್ರಕ್ಕೆ ವಿಪಕ್ಷ ನಾಯಕರ ಭೇಟಿ
Team Udayavani, Mar 12, 2019, 1:00 AM IST
ಕೋಟ: ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಸುಮಾರು 15ದಿನಗಳಿಂದ ಸರ್ವರ್ನ ತಾಂತ್ರಿಕ ಸಮಸ್ಯೆಯಿಂದ ನಮೂನೆ 57ರಡಿ ಅರ್ಜಿ ಸಲ್ಲಿಸಲು ಆಗಮಿಸುವ ನೂರಾರು ಮಂದಿಗೆ ಸಾಕಷ್ಟು ಸಮಸ್ಯೆಯಾಗುತ್ತಿದ್ದು ಈ ಕುರಿತು ಉದಯವಾಣಿ ಮಾ.10ರಂದು ವಿಸ್ಕೃತ ವರದಿ ಪ್ರಕಟಿಸಿತ್ತು.
ಇದೀಗ ಸೋಮವಾರ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ಕೋಟ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಅವ್ಯವಸ್ಥೆಯ ವಿರುದ್ಧ ಕಿಡಿಕಾರಿದರು.
ಕಂದಾಯ ಸಚಿವರು; ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ
ಬೆಳಗ್ಗೆ 8.30ರ ಸುಮಾರಿಗೆ ಜನಸಂಪರ್ಕ ಕೇಂದ್ರಕ್ಕೆ ಪೂಜಾರಿಯವರು ಭೇಟಿ ನೀಡಿದ್ದು ಆಗ 100ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಕೆಗಾಗಿ ಕಾದುನಿಂತಿದ್ದರು ಹಾಗೂ ತಮ್ಮ ಸಮಸ್ಯೆಯನ್ನು ತಿಳಿಸಿದರು. ಅನಂತರ ನೇರವಾಗಿ ಕಂದಾಯ ಸಚಿವರಿಗೆ ಕರೆ ಮಾಡಿ ಸಮಸ್ಯೆಯ ಕುರಿತು ಮಾತನಾಡಿ ತುರ್ತು ಪರಿಹಾರಕ್ಕೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಜತೆಯೂ ಚರ್ಚೆ ನಡೆಸಿದರು.
ಕೈಬರಹದ ಮೂಲಕ ಅರ್ಜಿ ಸ್ವೀಕೃತಿಗೆ ಒಪ್ಪಿಗೆ
ಸಮಸ್ಯೆಯ ಕುರಿತು ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ತುರ್ತು ಪರಿಹಾರದ ಸಲುವಾಗಿ ಕೈಬರಹದ ಮೂಲಕ ಅರ್ಜಿ ಸ್ವೀಕರಿಸಲು ಸಿಬಂದಿಗಳಿಗೆ ಸೂಚನೆ ನೀಡಿದರು. ಅನಂತರ ಎರಡು ಪ್ರತ್ಯೇಕ ಕೌಂಟರ್ಗಳನ್ನು ಮಾಡಿ ಕೈಬರಹದ ಅರ್ಜಿಗಳನ್ನು ಪಡೆಯಲಾಯಿತು. ಒಂದು ವಾರದ ಅನಂತರ ಅರ್ಜಿಯಲ್ಲಿನ ಮಾಹಿತಿಗಳನ್ನು ಕಂಪ್ಯೂಟರ್ಗೆ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ನೀಡುವುದಾಗಿ ತೀರ್ಮಾನಿಸಲಾಯಿತು. ಈ ಹಿಂದೆ ಉಯವಾಣಿಯ ವರದಿಯಲ್ಲೂ ಕೈಬರಹದ ಮೂಲಕ ಅರ್ಜಿ ಸ್ವೀಕೃತಿ ಸೂಕ್ತ ಎನ್ನುವ ಸಲಹೆ ನೀಡಲಾಗಿತ್ತು.
ಬೆಳಗ್ಗೆ 8.30ಕ್ಕೆ ಆಗಮಿಸಿದ ಪೂಜಾರಿಯವರು 10.30ರ ತನಕ ಜನರ ನಡುವೆ ನಿಂತು ಬಹುತೇಕ ಅರ್ಜಿಗಳನ್ನು ವಿಲೇಗೋಳಿಸಿ ತೆರಳಿದರು.
ಕಾಲಾವಕಾಶ ವಿಸ್ತರಿಸಲು ಮನವಿ
ನಮೂನೆ 57 ಅರ್ಜಿ ಸಲ್ಲಿಕೆಗೆ 16-3-2019ರ ವರೆಗೆ ಅವಕಾಶ ನೀಡಲಾಗಿದೆ. ಆದರೆ ಸಾಕಷ್ಟು ಮಂದಿ ಅರ್ಜಿ ಸಲ್ಲಿಸಲು ಬಾಕಿ ಇರುವುದರಿಂದ ಸಮಯಾವಕಾಶ ಕಡಿಮೆಯಾಗುತ್ತದೆ. ಕಾಲಾವಕಾಶ ವಿಸ್ತರಿಸಬೇಕು ಎಂದು ಶ್ರೀನಿವಾಸ್ ಪೂಜಾರಿಯವರು ಕಂದಾಯ ಸಚಿವರಿಗೆ ಮನವಿ ಮಾಡಿದ್ದು ಪೂರಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ