ಸಾವಯವ ಕೃಷಿಯನ್ನೇ ನಂಬಿ ಜೀವನ ನಡೆಸೋ ಕುಟುಂಬ


Team Udayavani, Sep 12, 2017, 6:10 AM IST

1109side3-Krashi.jpg

ಸಿದ್ದಾಪುರ: ಭಾರತದ ಸಾವಿರಾರೂ ರೈತರು ಇಂದು ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಇಂತಹವರ ಸಾಲಿನಲ್ಲಿ ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಹೊಳೆ ಶಂಕರನಾರಾಯಣದ ಸಮೀಪದ ಬೆಚ್ಚಳ್ಳಿ ಭೋಜ ಪೂಜಾರಿ ಹಾಗೂ ಅವರ ಕುಟುಂಬ ಒಂದಾಗಿದೆ.

ಉತ್ತಮವಾದ ಫಸಲು
ಭೋಜ ಪೂಜಾರಿ ಹಾಗೂ ಅವರ ಕುಟುಂಬ ತರಕಾರಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅವರು ಈ ಎರಡು ಬೆಳೆಗಳಿಗೆ ಯಾವುದೇ ರಾಸಾಯನಿಕ ಔಷಧಗಳನ್ನು ಬಳಸದೆ ಸಾವಯವ ಗೊಬ್ಬರಗಳ ಬಳಕೆ ಮಾಡಿ, ಈ ಮೂಲಕ ಉತ್ತಮವಾದ ಫಸಲು  ಪಡೆಯುತ್ತಿದ್ದಾರೆ. ಅವರು ಬೆಚ್ಚಳ್ಳಿ ಹಾಗೂ ಕಾವ್ರಾಡಿ ಗ್ರಾಮದ ಮುಂಭಾರಿನಲ್ಲಿ ಕೂಡ ಕೃಷಿ ಹಾಗೂ ತರಕಾರಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಉತ್ತಮವಾಗಿ ಕೃಷಿಯನ್ನು ಮಾಡುತ್ತಿರುವುದರಿಂದ ಭೋಜ ಪೂಜಾರಿ ಅವರು ಸಾವಯವ ಕೃಷಿಯಲ್ಲಿ ಪ್ರಗತಿ ಪರ ಕೃಷಿಕರೆನ್ನಿಸಿಕೊಂಡಿದ್ದಾರೆ. ಅವರು ಮುಖ್ಯವಾಗಿ ತರಕಾರಿ ಬೆಳೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು, ತರಕಾರಿ ಭೋಜ ಪೂಜಾರಿ ಎಂದೇ ಪ್ರಖ್ಯಾತಿ ಗಳಿಸಿದ್ದಾರೆ.

ತಂದೆಯಂತೆ ಮಗನೂ
ಭೋಜ ಪೂಜಾರಿ ಅವರ ಮಗ ರಾಜೇಂದ್ರ ಪೂಜಾರಿ ಅವರು ಬಿ.ಎಡ್‌. ಪದವಿಧರರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್‌. ಪದವಿ ಮುಗಿಸಿರುವ ಅವರಿಗೆ ಸರಕಾರಿ ಉದ್ಯೋಗ ಅರಸಿ ಬಂದರೂ, ಅದನ್ನು ಬಿಟ್ಟು ಕೃಷಿಯಲ್ಲಿ ಮುಂದುವರಿದಿದ್ದಾರೆ. ಅವರು ಸ್ವತಃ ಕೃಷಿಯೊಂದಿಗೆ ಮಾರುಕಟ್ಟೆ ಕೂಡ ಮಾಡುತ್ತಿದ್ದಾರೆ. ಪ್ರತಿ ಬುಧವಾರ ಸಿದ್ದಾಪುರ ಸಂತೆ ಮತ್ತು ಪ್ರತಿ ಶನಿವಾರ ಕುಂದಾಪುರ ಸಂತೆಯಲ್ಲಿ ತಾವು ಬೆಳೆದ ತರಕಾರಿ ಹಾಗೂ ಇತರ ಬೆಳೆಗಳನ್ನು ಮಾರುತ್ತಾರೆ.

ಸಾವಯವ ಕೃಷಿ
ಭೋಜ ಪೂಜಾರಿ ಅವರ ಇಡೀ ಕುಟುಂಬವು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದೆ. ಈ ಮೂಲಕ ಉತ್ತಮ ಆದಾಯಗಳಿಸುತ್ತಿದ್ದಾರೆ. ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಬಾಳೆ, ಚಿಕ್ಕು, ದುಡ್ಲೆಕಾಯಿ, ದಿವೆಲ್ಸಿನಕಾಯಿ, ಕಾಳು ಮೆಣಸು, ಕಬ್ಬು, ತರಕಾರಿ ಬೆಳೆಗಳಾದ ಸುವರ್ಣಗಡ್ಡೆ, ಮರಸನಗಡ್ಡೆ, ಅನಾನಸು, ಪಪ್ಪಾಯಿ, ನುಗ್ಗೆಕಾಯಿ, ಆವಟೆಕಾಯಿ ಇದರಲ್ಲಿ ಸಿಹಿ ಮತ್ತು ಹುಳಿ, ಮರಗೆಣಸು, ಕೆಸ, ಬೆಂಡೆ, ಪಡವಲಕಾಯಿ, ಅಲಸಂಡೆ, ಇಬ್ಬುಡ್ಲು, ಮುಳ್ಳುಸೌತೆ, ಹಾಗಲಕಾಯಿ, ಸಾಂಬರ್‌ಸೌತೆ, ಹರಿವೆಸೊಪ್ಪು ಇದರಲ್ಲಿ ಕೆಂಪು ಮತ್ತು ಬಿಳಿ, ಬಸಳೆಸೊಪ್ಪು, ಮೆಣಸು, ಬದನೆಕಾಯಿ, ಸಿಹಿ ಮತ್ತು ಬೂದುಗುಂಬಳಕಾಯಿ, ತೊಂಡೆಕಾಯಿ, ಶುಂಠಿ ಮತ್ತು ಅವಾಡೆಕಾಯಿಗಳನ್ನು ಬೆಳೆಯುತ್ತಿದ್ದಾರೆ. ಇದರೊಂದಿಗೆ ಯಾಂತ್ರೀಕೃತ ಭತ್ತದ ಬೇಸಾಯ ಕೂಡ ಮಾಡುತ್ತಿದ್ದಾರೆ. ಇವೆಲ್ಲದಕ್ಕೂ ಸಾವಯವ ಗೊಬ್ಬರವನ್ನೇ ಬಳಸುತ್ತಾರೆ.

ಕೃಷಿಯಿಂದ ಮನೋಲ್ಲಾಸ ಲಭ್ಯವಾಗುತ್ತದೆ. ಯಾವುದೇ ಕೆಲಸ ಮಾಡಬೇಕಾದರೆ ಅದರ ಬಗ್ಗೆ ಆಸಕ್ತಿ, ಮಾಹಿತಿ ಇರಬೇಕು. ಅದರೊಂದಿಗೆ ಮಣ್ಣಿನ ಗುಣಮಟ್ಟ ತಿಳಿದುಕೊಂಡು ಆಯಾಯ ಮಣ್ಣಿನ ಅನುಗುಣವಾಗಿ ಕೃಷಿ ಮಾಡಿದರೆ, ಉತ್ತಮ ಆದಾಯ ಗಳಿಸಬಹುದಾಗಿದೆ. ಆಗ ಮಾತ್ರ ಕೃಷಿಯಲ್ಲಿ ನಷ್ಟ ಇರುವುದಿಲ್ಲ. ಕೃಷಿಕರು ಯಾವಾಗಲೂ ಒಂದೇ ಕೃಷಿಯನ್ನು ನಂಬಿಕೊಂಡ ಇರಬಾರದು. ಮಿಶ್ರ ಕೃಷಿ ಪದ್ಧತಿಯನ್ನು ಆಳವಡಿಸಿಕೊಳ್ಳುವುದು  ಉತ್ತಮ. 
– ಭೋಜ ಪೂಜಾರಿ ಬೆಚ್ಚಳ್ಳಿ, ಪ್ರಗತಿಪರ ಕೃಷಿಕ

ಜೀವನೋಪಾಯಕ್ಕೆ ಶಿಕ್ಷಣ ಬೇಕು. ಆ ಶಿಕ್ಷಣದಿಂದಲೇ ಸರಕಾರಿ ಉದ್ಯೋಗಕ್ಕೆ ಹೋಗಿ ಜೀವನ ಸಾಗಿಸಬೇಕು ಎಂಬ ನಿರೀಕ್ಷೆ ಬೇಡ. ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಆ ಮೂಲಕ ಸಂಪಾದನೆ ಮಾಡಬೇಕು. ಹಣಕ್ಕಾಗಿ  ಅನ್ಯಾಯದ ಮಾರ್ಗ ಹಿಡಿಯದೆ, ಕಷ್ಟ ಪಟ್ಟು ಸಂಪಾದನೆ ಮಾಡಬೇಕು. ಇದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ.
– ರಾಜೇಂದ್ರ ಪೂಜಾರಿ ಬೆಚ್ಚಳ್ಳಿ, ಪ್ರಗತಿಪರ ಕೃಷಿಕ

– ಸತೀಶ ಆಚಾರ್‌ ಉಳ್ಳೂರ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.