ಸ್ವಂತಿಕೆಯೇ ಸೃಜನಶೀಲ ಸಾಹಿತ್ಯದ ಮೂಲ


Team Udayavani, Apr 29, 2018, 7:35 AM IST

280418Astro01.jpg

ಉಡುಪಿ: ಸ್ವಂತಿಕೆಯೇ ಸೃಜನಶೀಲ ಸಾಹಿತ್ಯದ ಮೂಲ. ನಮ್ಮ ಅನುಭವಗಳನ್ನೇ ಬರೆಯಲು ಆರಂಭಿಸಿದರೆ ನಾವು ಸೃಜನಶೀಲರಾಗುತ್ತೇವೆ ಎಂದು ಸಾಹಿತಿ, ಕನ್ನಡದ ವಿದ್ವಾಂಸ ಪ್ರೊ| ಹರಿಕೃಷ್ಣ ಭರಣ್ಯ ಅಭಿಪ್ರಾಯಪಟ್ಟರು.
 
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಆಶ್ರಯದಲ್ಲಿ ಎ.28ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿದ ಸಮಾರಂಭದಲ್ಲಿ  ದಿ| ಮುಳಿಯ ತಿಮ್ಮಪ್ಪಯ್ಯ ಅವರ ನೆನಪಿನಲ್ಲಿ ನೀಡಲಾದ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ಡಾ| ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ನ ಆಡಳಿತಾಧಿಕಾರಿ ಡಾ| ಎಚ್‌. ಶಾಂತಾರಾಮ್‌ ಅವರು ಮಾತನಾಡಿ ಕರಾವಳಿ ನಾಡಿನ ಅಗ್ರಗಣ್ಯ ವಿದ್ವಾಂಸರಲ್ಲಿ  ಮುಳಿಯ ತಿಮ್ಮಪ್ಪಯ್ಯ ಅವರು ಒಬ್ಬರು. ವಿದ್ಯಾರ್ಥಿಗಳಲ್ಲಿ ಮತ್ತು ಎಳೆಯರಲ್ಲಿ ಇಂತಹ ವಿದ್ವಾಂಸರ ಬಗ್ಗೆ ಜ್ಞಾನವನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.

ಜೀವಾನುಭವವೇ ಸಾಹಿತ್ಯ
ಪ್ರಶಸ್ತಿ ಪುರಸ್ಕೃತರಾದ ಭರಣ್ಯ ಅವರ ಕುರಿತು ಅಭಿನಂದನಾ ಭಾಷಣ ಮಾಡಿದ ರವಿಶಂಕರ್‌ ಜಿ.ಕೆ. ಅವರು “ಭರಣ್ಯ ಅವರು ಬದುಕಿಗೆ ನಿಲುಕದ, ಕಾಲ್ಪನಿಕ ವಿಚಾರಗಳು° ಸಾಹಿತ್ಯವಾಗಿಸಿಲ್ಲ. ಗಟ್ಟಿಯಾದ ಜೀವನಾನುಭವವೇ ಅವರ ಕೃತಿಗಳ ಆಕರವಾಗಿದೆ. ಅವರ ಸರಳತೆ, ವಿಶಾಲ ಮನೋಭಾವ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿ’ ಎಂದರು.”ಮುಳಿಯರ ನಾಡೋಜ ಪಂಪ’ ವಿಷಯದ ಕುರಿತು ಡಾ| ಪಾದೇಕಲ್ಲು ವಿಷ್ಣುಭಟ್ಟ ಅವರು ವಿಶೇಷ ಉಪನ್ಯಾಸ ನೀಡಿದರು. 

ಕನ್ನಡ ನಮ್ಮ ಸಂಸ್ಕೃತಿ
ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಮಾತನಾಡಿ ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಸಂಸ್ಕೃತಿ. ಹೊರ‌ಗಿನ ಸಂಸ್ಕೃತಿಯನ್ನು ನಮ್ಮದಾಗಿಸಿಕೊಳ್ಳುವ ಬದಲು ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಅಪ್ಪಿಕೊಳ್ಳಬೇಕು ಎಂದು ಹೇಳಿದರು.ಮಾಹೆ  ಕುಲಸಚಿವ ಡಾ| ನಾರಾಯಣ ಸಭಾಹಿತ್‌ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. 

ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊ| ವರದೇಶ ಹಿರೇಗಂಗೆ ಪ್ರಾಸ್ತಾವಿಕ ಮಾತನಾಡಿದರು. ಭ್ರಮರಿ ಶಿವಪ್ರಕಾಶ್‌ ಅವರು ಮುಳಿಯರ ನವನೀತ ರಾಮಾಯಣದ ನಾಂದಿ ಪದ್ಯ ಹಾಡಿದರು. ಪ್ರಶಸ್ತಿ ಸಮಿತಿಯ ಸದಸ್ಯೆ ಮನೋರಮಾ ಭಟ್‌ ಉಪಸ್ಥಿತರಿದ್ದರು. ಪ್ರೊ| ನರಸಿಂಹ ಮೂರ್ತಿ ನಿರ್ವಹಿಸಿದರು. 

ಪತ್ತೆದಾರಿ ಕಾದಂಬರಿಗಳಿಂದ ಸಾಹಿತ್ಯಾಸಕ್ತಿ
ವಿಜ್ಞಾನದ ವಿದ್ಯಾರ್ಥಿಯಾಗಿದ್ದರೂ ತನಗೆ ಸಾಹಿತ್ಯದೆಡೆಗೆ ಒಲವು ಹೆಚ್ಚಾಯಿತು. ತರಗತಿಯಲ್ಲಿ ಕುಳಿತೇ ಕಥೆ, ಕವಿತೆಗಳನ್ನು ಬರೆಯುತ್ತಿದ್ದೆ. ಮೊದಮೊದಲು ನನ್ನಲ್ಲಿ ಸಾಹಿತ್ಯದ ಆಸಕ್ತಿ ಮೂಡಿಸಿದ್ದು ಪತ್ತೆದಾರಿ ಕಾದಂಬರಿಗಳು.

– ಪ್ರೊ| ಹರಿಕೃಷ್ಣ ಭರಣ್ಯ, ಕನ್ನಡ ವಿದ್ವಾಂಸರು

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.