ಉಪ್ಪು ನೀರಿನಿಂದ ಕರಟಿಹೋದ ಭತ್ತದ ಪೈರು


Team Udayavani, Oct 30, 2018, 2:45 AM IST

paddy-salt-29-10.jpg

ತಲ್ಲೂರು: ಈ ಭಾಗದಲ್ಲಿ ಬೆಳೆಯುವುದೇ ಒಂದು ಬೆಳೆ. ಅದು ಕೂಡ ಈ ಬಾರಿ ಉಪ್ಪು ನೀರಿನ ಹಾವಳಿಯಿಂದಾಗಿ ಸಂಪೂರ್ಣ ನಾಶವಾಗಿದೆ. ಇದು ತಲ್ಲೂರು ಸಮೀಪದ ಉಪ್ಪಿನ ಕುದ್ರು ಪರಿಸರದ ರೈತರ ದುಸ್ಥಿತಿ. ಕಟಾವಿಗೆ ಬಂದ ಎಕರೆಗಟ್ಟಲೆ ಗದ್ದೆಯ ಭತ್ತದ ಪೈರು ಒಣಗಿ ಹೋಗಿದ್ದು, ಇದರಿಂದ ಈ ಭಾಗದ ಅನೇಕ ಮಂದಿ ರೈತರು ಸಂಕಷ್ಟದಲ್ಲಿದ್ದಾರೆ. 

ಎಲ್ಲ ಕಡೆಗಳಲ್ಲಿ ಈಗ ಭತ್ತದ ಪೈರು ಕಟಾವು ಕಾರ್ಯ ಭರದಿಂದ ಸಾಗುತ್ತಿದೆ. ಕೆಲವರು ಮಾತ್ರ ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮೊರೆ ಹೋದರೆ, ಹೆಚ್ಚಿನ ಕಡೆಗಳಲ್ಲಿ ಯಾಂತ್ರೀಕೃತ ಕೃಷಿ ಪದ್ಧತಿಗೆ ಆಕರ್ಷಿತರಾಗಿದ್ದಾರೆ. ಆದರೆ ತಲ್ಲೂರು, ಹೆಮ್ಮಾಡಿ ಭಾಗಗಳಲ್ಲಿ ಉಪ್ಪಿನ ನೀರಿನ ಸಮಸ್ಯೆ ಭತ್ತದ ಕೃಷಿಗೆ ಅಂಟಿದ ಶಾಪವಾಗಿದೆ. ಅದರಲ್ಲೂ ಕಳೆದ ಸೆಪ್ಟೆಂಬರ್‌ ತಿಂಗಳಿಡೀ ಮಳೆ ಕೊರತೆಯಿಂದಾಗಿ ಈ ಬಾರಿ ಹೊಳೆ ಸಮೀಪದ ಗದ್ದೆಗಳಿಗೆ ಈಗ ಪ್ರತಿಕೂಲ ಪರಿಣಾಮ ಬೀರಿದೆ. ಈ ಸಲ ಉಪ್ಪಿನಕುದ್ರು ಭಾಗದ ಅನೇಕ ಮಂದಿಯ ಗದ್ದೆಗಳಲ್ಲಿ ಕಟಾವು ಸಮಯದಲ್ಲಿಯೇ ಫಸಲು ಬಂದ ಪೈರು ಸುಟ್ಟು ಹೋಗಿದೆ. 

ಹೊಳೆ ದಂಡೆ, ಬದು ಏರಿಸಿ
ಭತ್ತದ ಕೃಷಿಗೆ ಹೊಳೆ ದಂಡೆ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಪ್ರತಿ ಬಾರಿಯೂ ಉಪ್ಪು ನೀರು ಗದ್ದೆಗೆ ನುಗ್ಗಿ ಕೃಷಿಗೆ ತೊಂದರೆಯಾಗುತ್ತಿದೆ. ಈ ಭಾಗದ ಗದ್ದೆಗಳಿಗೆ ಉಪ್ಪು ನೀರಿನ ಸಮಸ್ಯೆ ತಪ್ಪಿಸಬೇಕಾದರೆ ಹೊಳೆ ದಂಡೆ ಅಥವಾ ಗದ್ದೆಯ ಬದುಗಳನ್ನು ಏರಿಸುವುದು. ಇದಕ್ಕೆ ಸರಕಾರದ ಮಟ್ಟದಲ್ಲೇ ಶಾಶ್ವತ ಯೋಜನೆ ಜಾರಿಗೆ ತಂದರೆ ಪ್ರಯೋಜನವಾಗಲಿದೆ ಎನ್ನುವುದು ಈ ಭಾಗದ ರೈತರ ಅಭಿಪ್ರಾಯವಾಗಿದೆ. 

ಗದ್ದೆಯಿದ್ದರೂ, ಪೇಟೆಯಿಂದ ಅಕ್ಕಿ
ಮಳೆ ಬರುವ ಸಮಯದಲ್ಲಿ ಮಳೆ ಸರಿಯಾಗಿ ಬರದಿದ್ದರೆ, ಇದರ ನೇರ ಪರಿಣಾಮ ಈ ಹೊಳೆ ಬದಿಯಿರುವ ರೈತರ ಮೇಲಾಗುತ್ತದೆ. ಉಪ್ಪು ನೀರಿನ ಸಮಸ್ಯೆಯಿಂದಾಗಿ ಉಪ್ಪಿನಕುದ್ರು ಭಾಗದಲ್ಲಿ ಮುಂಗಾರು ಹಂಗಾಮು ಮಾತ್ರ ಬೆಳೆಯಲಾಗುತ್ತದೆ. ಈ ಬಾರಿ ಮುಂಗಾರಿನಲ್ಲಿಯೂ ಏನೂ ಫಸಲು ಇಲ್ಲದೆ, ಎಕರೆಗಟ್ಟಲೇ ಗದ್ದೆಯಿದ್ದರೂ, ಪೇಟೆಯಿಂದ ಅಕ್ಕಿ ತಂದು ಉಣ್ಣುವ ಪರಿಸ್ಥಿತಿ ಬಂದಿದೆ ಎನ್ನುವುದು ಇಲ್ಲಿನ ರೈತರೊಬ್ಬರ ಅಳಲು. 

ಭತ್ತ ಬಿಡಿ, ಪೈರು ಕೂಡ ಇಲ್ಲ
ನಮಗೆ 20 ಸೆಂಟ್ಸ್‌ ಗದ್ದೆಯಿದೆ. ಎಂಓ. 4 ಭತ್ತದ ತಳಿಯನ್ನು ಬೆಳೆದಿದ್ದೇವೆ. ಆದರೆ ಮಳೆ ಕಡಿಮೆಯಾಗಿದ್ದರಿಂದ ಫಸಲು ಕಟಾವಿಗೆ ಬಂದ ಸಮಯದಲ್ಲಿಯೇ ಸಂಪೂರ್ಣ ನಾಶವಾಗಿದೆ. ಈಗ ಎಂಥಾ ಭತ್ತ ಬಿಡಿ, ಕನಿಷ್ಠ ದನಗಳಿಗೆ ಪೈರು ಕೂಡ ಕಟಾವಿಗೆ ಸಿಗದಂತಾಗಿದೆ. ಹಿಂದೆದೂ ಈ ಬಾರಿಯಷ್ಟು ತೊಂದರೆಯಾಗಿಲ್ಲ. ಹಿಂದಿನ ವರ್ಷಗಳಲ್ಲಿ ಅಲ್ಪಸ್ವಲ್ಪವಾದರೂ ಸಿಗುತ್ತಿತ್ತು. ನಮಗೆ ಪರಿಹಾರವಾದರೂ ಸಿಗಲಿ. 
– ರೇಖಾ, ಉಪ್ಪಿನಕುದ್ರು

ಪರಿಶೀಲನೆ ನಡೆಸಲಾಗುವುದು
ಪ್ರಾಕೃತಿಕ ವಿಕೋಪದಿಂದ ಕೃಷಿ ನಾಶವಾಗಿದ್ದರೆ, ಅದರನ್ವಯ ಪರಿಹಾರ ನೀಡಬಹುದು. ಉಪ್ಪಿನಕುದ್ರುವಿನಲ್ಲೂ ಕೂಡ ಮಳೆ ಕಡಿಮೆಯಾಗಿ, ತೊಂದರೆಯಾಗಿರುವುದರಿಂದ ಅಲ್ಲಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿ ಪರಿಹಾರ ಕುರಿತಂತೆ ಪ್ರಯತ್ನ ಮಾಡಲಾಗುವುದು. ಉಪ್ಪು ನೀರಿಗೆ ಆಗುವಂತಹ ತಳಿಯನ್ನು ಬಳಸಿದರೂ ಇಲ್ಲಿ ಅದು ಅಷ್ಟೇನೂ ಯಶಸ್ವಿಯಾಗಿಲ್ಲ. 
– ಚಂದ್ರಶೇಖರ್‌, ಉಪ ನಿರ್ದೇಶಕರು, ಕೃಷಿ ಇಲಾಖೆ ಉಡುಪಿ

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.