ಗದ್ದೆಯಲ್ಲಿ ನಾಟಿ, ಯೋಗ, ಆಟೋಟಗಳೊಂದಿಗೆ ಸಂಭ್ರಮಿಸಿದ ವಿದ್ಯಾರ್ಥಿಗಳು


Team Udayavani, Jul 18, 2017, 2:30 AM IST

Yoga-Naati-17-7.jpg

ಪಡುಬಿದ್ರಿ: ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜು ಎನ್‌ಎಸ್‌ಎಸ್‌ ವಿದ್ಯಾರ್ಥಿಗಳಿಗೆ ಶನಿವಾರ ಖುಷಿಯೋ ಖುಷಿ. ವಸತಿ ಶಾಲೆಗೆ ಸಂಬಂಧಿಸಿದ ವಿದ್ಯಾರ್ಥಿಗಳೂ ಸೇರಿದಂತೆ ಸುಮಾರು 600ರಷ್ಟಿದ್ದ ವಿದ್ಯಾರ್ಥಿಗಳು ಅದಮಾರು ಮೂಡಬೆಟ್ಟು ಬರ್ಪಾಣಿ ಜಗನ್ನಾಥ ಶೆಟ್ಟಿ ಅವರ ಬಾಕಿಮಾರು ಗದ್ದೆಯಲ್ಲಿ ಕುಣಿದು ಕುಪ್ಪಳಿಸಿದ್ದು ನೋಡುಗರಿಗೆ ಮನೋರಂಜನೆಯನ್ನೂ ಒದಗಿಸಿತ್ತು. ಕಿರಿಯರೊಂದಿಗೆ ಹಿರಿಯರೂ ಎಂಬಂತೆ ಅದಮಾರು ಆದರ್ಶ ಮಹಿಳಾ ಮತ್ತು ಯುವತಿ ಮಂಡಲದ ಸದಸ್ಯೆಯರೂ ಜತೆಯಾದರು. ಗದ್ದೆಯಲ್ಲೇ ಅದಮಾರು ಪ. ಪೂ. ಕಾಲೇಜು ಎನ್‌ಎಸ್‌ಎಸ್‌ ವಿಭಾಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಯೋಗ, ಆಟೋಟ ಸ್ಪರ್ಧೆ, ಹಗ್ಗ ಜಗ್ಗಾಟದ ಜತೆ ಜತೆಗೇ ನಾಟಿಯನ್ನೂ ನಡೆಸಿ ರೈತರ ಬೆವರಿನಾಟದ ಅನುಭವವನ್ನೂ ಪಡೆದರು. ಯೋಗ ಶಿಕ್ಷಕಿ ಶ್ಯಾಮಲಾ ಕೃಷಿಯನ್ನು ಉತ್ತಮವಾಗಿ ನಿರ್ವಹಿಸಿದವನಿಗೆ ದುರ್ಭಿಕ್ಷೆ ಇರದು. ಪ್ರಕೃತಿಯೊಂದಿಗೆ ಬೆರೆತರೆ ಮಾತ್ರ ಶಿಕ್ಷಣ ಪೂರ್ಣವಾಗುತ್ತದೆ. ಹಾಗಾಗಿ ಗದ್ದೆಗಿಳಿಯಲು ಬೇಸರ ಬೇಡ ಎಂದರು. ತಾವೇ ಮೊದಲಾಗಿ ಇಳಿದು ಆದರ್ಶ ಮಹಿಳಾ ಮಂಡಲ ಸದಸ್ಯೆಯರು, ವಿದ್ಯಾರ್ಥಿಗಳೊಂದಿಗೆ ಸೇರಿ ಸುಲಭ ಯೋಗಾಸನಗಳನ್ನು ಪ್ರದರ್ಶಿಸಿದರು.

ಅದಮಾರು ಪ. ಪೂ. ಕಾಲೇಜು ಹಳೆ ವಿದ್ಯಾರ್ಥಿ, ಆದರ್ಶ ಯುವಕ ಮಂಡಲದ ಅಧ್ಯಕ್ಷ ಸಂತೋಷ್‌ ಜೆ. ಶೆಟ್ಟಿ ಸಹಯೋಗದಲ್ಲಿ ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಪೈ ಅಧ್ಯಕ್ಷತೆಯಲ್ಲಿ ನಡೆದಿದ್ದ ಈ ಕೂಟದಲ್ಲಿ ನಿವೃತ್ತ ಪ್ರಾಂಶುಪಾಲ ನಾಗರತ್ನಾ ರಾವ್‌, ಪ್ರಾಧ್ಯಾಪಕ ಡಾ| ಜಯಶಂಕರ ಕಂಗಣ್ಣಾರು, ಬರ್ಪಾಣಿ ಮನೆತನದ ಹಿರಿಯರಾದ ಜಗನ್ನಾಥ ಶೆಟ್ಟಿ, ಯುವತಿ ಮಂಡಲ ಅಧ್ಯಕ್ಷೆ ಪ್ರೇಮಾ ಸಾಲ್ಯಾನ್‌ ಭಾಗವಹಿಸಿದ್ದರು. ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜು ವಿದ್ಯಾರ್ಥಿಗಳಿಗಾಗಿ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಈ ‘ಕೆಸರ್ಡ್ ಗೊಬ್ಬು’ (ಕೆಸರಿನ ಆಟ)ವನ್ನು ನಡೆಸಲಾಗುತ್ತಿದೆ. ಈ ಬಾರಿಯಂತೂ ಅದಮಾರು ಶಾಲೆಗೆ ಬಯಲು ಸೀಮೆಯಿಂದ ಬಂದು ವಸತಿ ಶಾಲೆಯಲ್ಲೇ ಉಳಿದಿರುವ ಮಕ್ಕಳು ಸಕತ್ತಾಗಿ ಸಂಭ್ರಮಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.