“ಪದ್ಮವಿಭೂಷಣ ಸಮಸ್ತ ಭಕ್ತರಿಗೆ ಭೂಷಣ’; ಪೇಜಾವರ ಶ್ರೀ ಪದ್ಮವಿಭೂಷಣ ಕೃಷ್ಣಾರ್ಪಣ


Team Udayavani, Nov 12, 2021, 6:00 AM IST

“ಪದ್ಮವಿಭೂಷಣ ಸಮಸ್ತ ಭಕ್ತರಿಗೆ ಭೂಷಣ’; ಪೇಜಾವರ ಶ್ರೀ ಪದ್ಮವಿಭೂಷಣ ಕೃಷ್ಣಾರ್ಪಣ

ಉಡುಪಿ: ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಗುಡಿಗೋಪುರ ಮಾತ್ರವಲ್ಲದೆ ಭಕ್ತ ವೃಂದದ ಹೃದಯದಲ್ಲಿ ಸಾಕ್ಷಾತ್ಕರಿಸಿ ಕೊಂಡಿದ್ದರು. ಅವರಿಗೆ ಬಂದಿರುವ ಪದ್ಮವಿಭೂಷಣ ಪುರಸ್ಕಾರ ಸಮಸ್ತ ಭಕ್ತರನ್ನು ಪ್ರತಿನಿಧಿಸುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಬಣ್ಣಿಸಿದರು.

ರಥಬೀದಿಯಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಪದ್ಮವಿಭೂಷಣ ಪ್ರಶಸ್ತಿ ಸ್ವಾಗತ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಗುರುಗಳಿಗೆ ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದಕ್ಕೆ ನಾಡಿನ ಎಲ್ಲರೂ ಸಂಭ್ರಮಿಸುತ್ತಿದ್ದಾರೆ. ಈ ಮೂಲಕ ಪದ್ಮವಿಭೂಷಣ ಪ್ರಶಸ್ತಿಗೂ ವಿಶೇಷ ಗೌರವ ಸಂದಿದೆ. ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ರಾಷ್ಟ್ರಪತಿಯವರು ಕೂಡ ಶ್ರೀ ವಿಶ್ವೇಶತೀರ್ಥರನ್ನು ಸ್ಮರಿಸಿ ಕೊಂಡರು ಎಂದು ಹೇಳಿದರು.
ಹಿಂದೂ ಸಮಾಜಕ್ಕೆ ಸ್ಫೂರ್ತಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿ,ಶ್ರೀ ವಿಶ್ವೇಶತೀರ್ಥರಿಗೆ ಸಂದಿರುವ ಈ ಪ್ರಶಸ್ತಿಯಿಂದ ಇಡೀ ಹಿಂದೂ ಸಮಾಜ ಮತ್ತು ಸಾಧಕರು ಸ್ಫೂರ್ತಿ ಪಡೆಯಬೇಕು. ಸಮಾಜಕ್ಕೆ ನಿಸ್ವಾರ್ಥಭಾವದಿಂದ ಕೊಡುಗೆ ನೀಡಿ ದಾಗ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆ. ಹಿಂದೂ ಸಮಾಜ ಇಂದು ಅನೇಕ ರೀತಿಯ ಸಮಸ್ಯೆ ಎದುರಿಸುತ್ತಿದೆ. ಇವೆಲ್ಲದಕ್ಕೂ ಉತ್ತರ ಕಂಡುಕೊಳ್ಳಬೇಕು. ಶ್ರೀ ವಿಶ್ವೇಶ ತೀರ್ಥರ ಜೀವನ, ಸಾಧನೆ ಎಲ್ಲರಿಗೂ ಪ್ರೇರಣೆಯಾಗಲಿದೆ ಎಂದರು.

ಪಲಿಮಾರು ಮಠದ ಕಿರಿಯ ಯತಿ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಶಾಸಕರಾದ ಕೆ. ರಘುಪತಿ ಭಟ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ವಾಸುದೇವ ಭಟ್‌ ಪೆರಂಪಳ್ಳಿ ಮಾತನಾಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್‌ ಉಪಸ್ಥಿತರಿದ್ದರು. ಮುರಳೀ ಕಡೆಕಾರ್‌ ಕಾರ್ಯಕ್ರಮ ನಿರೂಪಿಸಿದರು. ರತ್ನಕುಮಾರ್‌ ವಂದಿಸಿದರು.

ಸಂಸ್ಕೃತ ಕಾಲೇಜಿನಲ್ಲಿ ಸ್ವಾಗತ
ಮೆರವಣಿಗೆಗೂ ಮೊದಲು ಸಂಸ್ಕೃತ ಮಹಾವಿದ್ಯಾಲಯದಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಶ್ರೀಪಾದರ ಭಾವಚಿತ್ರದ ಮುಂದೆ ಇರಿಸಿ ಆರತಿ ಬೆಳಗಲಾಯಿತು. ಜಿಲ್ಲಾಧಿಕಾರಿ ಕೂರ್ಮಾ ರಾವ್‌, ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌, ಗಣ್ಯರಾದ ಯಶಪಾಲ್‌ ಸುವರ್ಣ, ಎಂ.ಬಿ. ಪುರಾಣಿಕ್‌, ಭುವನೇಂದ್ರ ಕಿದಿಯೂರು, ಪೇಜಾವರ ಮಠದ ದಿವಾನರಾದ ರಘುರಾಮಾಚಾರ್ಯ ಮೊದಲಾದವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವಾಗತಿಸಿದರು.

ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿ ಚಿನ್ಮಯ ಭಟ್‌ ರಂಗವಲ್ಲಿ ಯಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರವನ್ನು ರಚಿಸಿದರು.

ರಾಷ್ಟ್ರಪತಿ ಕೋವಿಂದ್‌ ಬಂದಿಳಿದ ಸ್ಥಳದಲ್ಲಿ…
ರಾಷ್ಟ್ರಪತಿ ರಮಾನಾಥ ಕೋವಿಂದ್‌ ಅವರು 2018ರ ಡಿ. 27ರಂದು ಉಡುಪಿಗೆ ಬಂದ ಸಂದರ್ಭ ಪೇಜಾವರ ಮಠದ ಎದುರು ಇಳಿದು ಮಠದ ಒಳಗೆ ಶ್ರೀವಿಶ್ವೇಶ ತೀರ್ಥ ಶ್ರೀಪಾದರನ್ನು ಗೌರವಿಸಿದ್ದರು. ಅವರು ಎಲ್ಲಿ ಇಳಿದರೋ ಅದೇ ಪೇಜಾವರ ಮಠದ ಮುಂಭಾಗ ರಾಷ್ಟ್ರಪತಿ ಕೋವಿಂದ್‌ ಅವರಿಂದ ಪಡೆದ ಪದ್ಮವಿಭೂಷಣ ಪ್ರಶಸ್ತಿಗೆ ಸ್ವಾಗತ ಸಮಾರಂಭ ಮೂರು ವರ್ಷಗಳ ಬಳಿಕ ನ. 11ರಂದು ಜರಗಿತು. ಈ ಎರಡೂ ದಿನವೂ ಗುರುವಾರ ಘಟಿಸಿರುವುದು ವಿಶೇಷ.

ಗುಣಕ್ಕೆ ಮತ್ಸರವಿಲ್ಲ: ಮೋದಿಯ ಬಣ್ಣಿಸಿದ ಪ್ರಮೋದ್‌
ಉಡುಪಿ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಪೇಜಾವರ ಶ್ರೀ ಪದ್ಮವಿಭೂಷಣ ಪ್ರಶಸ್ತಿ ಸ್ವಾಗತ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಹಿರಂಗವಾಗಿ ಹಾಡಿ ಹೊಗಳಿದರು. ಹಿಂದೆಲ್ಲ ಅರ್ಜಿ ಹಾಕಿ ಪ್ರಶಸ್ತಿ ಪಡೆಯುತ್ತಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರ ಸರಕಾರ ನೈಜ ಸಾಧಕ ರನ್ನು ಹುಡುಕಿ ಪ್ರಶಸ್ತಿ ನೀಡುತ್ತಿದೆ. ಪಕ್ಷ ಯಾವುದಾದರೇನು? ಗುಣಕ್ಕೆ ಮತ್ಸರವಿಲ್ಲ, ವಿಪಕ್ಷದಲ್ಲಿದ್ದರೂ ಸರಕಾರದ ಒಳ್ಳೆಯ ಗುಣಗಳನ್ನು ಮೆಚ್ಚಿಕೊಳ್ಳುತ್ತೇನೆ ಎಂದರು.

ವಿಶ್ವೇಶರತ್ನ
ಶ್ರೀ ವಿಶ್ವೇಶತೀರ್ಥರು ಎಲ್ಲದರಲ್ಲಿಯೂ ಪೂರ್ಣರಾಗಿದ್ದರು. ಪಕ್ಷಾತೀತ, ಧರ್ಮಾತೀತರಾಗಿದ್ದರು. ಶ್ರೀಗಳು 8ನೇ ವಯಸ್ಸಿನಲ್ಲಿ ಇದ್ದಾಗ ಸನ್ಯಾಸ ದೀಕ್ಷೆ ಸಂದರ್ಭದಲ್ಲೇ ಶ್ರೀಕೃಷ್ಣ ದೇವರು ವಿಶ್ವೇಶರತ್ನ ಪ್ರಶಸ್ತಿಯನ್ನು ನೀಡಿಯಾಗಿದೆ ಎಂದು ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು.

ಭಾರತ ರತ್ನವೂ ಬರಲಿ
ಇದು ಆಸ್ತಿಕ ಸಮಾಜಕ್ಕೆ ಸಂದ ಪ್ರಶಸ್ತಿ, ಪದ್ಮದಂತ ವ್ಯಕ್ತಿತ್ವ ಶ್ರೀ ವಿಶ್ವೇಶತೀರ್ಥ ಶ್ರೀಪಾದರದ್ದಾಗಿತ್ತು. ಶುಭ್ರ ಮತ್ತು ಸ್ವತ್ಛರಾಗಿದ್ದರು. ಅವರಿಗೆ ಭಾರತ ರತ್ನವೂ ಬರಲಿ ಎಂದು ಸೋದೆ ಮಠದ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು.

ಚಿತ್ರ: ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.