ಪಡುಬೆಳ್ಳೆ: ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ
Team Udayavani, Jul 15, 2017, 9:03 AM IST
ಶಿರ್ವ: ಪಡುಬೆಳ್ಳೆ- ಪಾಂಬೂರು ಬಳಿ ಗುರುವಾರ ಮುಂಜಾನೆ ಒಂದೇ ಕುಟುಂಬದ ನಾಲ್ವರು ವಿಷ ಪದಾರ್ಥ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ತಾಯಿ ಮತ್ತು ಸಹೋದರರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಶಂಕರ ಆಚಾರ್ಯ ಅವರು ಸುಮಾರು ವರ್ಷಗಳಿಂದ ಪಡುಬೆಳ್ಳೆ ಯಲ್ಲಿ ಜುವೆಲರಿ ಅಂಗಡಿ ನಡೆಸುತ್ತಿದ್ದು ಉಡುಪಿ, ಶಿರ್ವ ಮತ್ತಿತರ ಕಡೆಗಳಿಂದ ಆಭರಣಗಳನ್ನು ತಂದು ತಯಾರಿಸಿ ಕೊಡುತ್ತಿದ್ದರು. ಸಾಲಬಾಧೆಯ ಬಗ್ಗೆ ಪರಿಚಿತರು, ಮಿತ್ರರು, ಸಂಬಂಧಿಕರು ನೆಂಟರಿಷ್ಟರಲ್ಲಿ ಹೇಳಿಕೊಳ್ಳಿರಲಿಲ್ಲ. ಆದರೂ ದೊಡ್ಡ ಮೊತ್ತದ ಸಾಲ ಬಾಧೆಯಿಂದ ಬಳಲುತ್ತಿದ್ದು ಸಾಲಬಾಧೆ ತಾಳಲಾಗದೆ ಅಥವಾ ಅವಮಾನ ತಪ್ಪಿಸಲು ಕುಟುಂಬ ಸಮೇತ ಆತ್ಮಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಕಾರಣ ಮಾತ್ರ ನಿಗೂಢವಾಗಿದೆ.
ಆತ್ಮಹತ್ಯೆಗೂ ಮುನ್ನ ಕರೆ: ಶಂಕರ ಆಚಾರ್ಯ ಅವರ ಹಿರಿಯ ಪುತ್ರಿ ಮುಂಜಾನೆ ಆತ್ಮಹತ್ಯೆಗೂ ಮುನ್ನ ತಾನು ಮದುವೆಯಾಗುವ ಹುಡುಗನೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಅಪ್ಪನ ಸುಮಾರು 10 ಲ.ರೂ. ಮೌಲ್ಯದ ಆಭರಣ ಕಳೆದುಹೋಗಿ ಆರ್ಥಿಕ ಸಂಕಷ್ಟದಲ್ಲಿದ್ದು ಧನ ಸಹಾಯ ಮಾಡಲು ವಿನಂತಿಸಿದ್ದರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕಾಪು ವೃತ್ತ ನಿರೀಕ್ಷಕ ಹಾಲ ಮೂರ್ತಿ ರಾವ್ ಮಾರ್ಗದರ್ಶನದಲ್ಲಿ ಶಿರ್ವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ