ಪಡುಬಿದ್ರಿ ಅಪಘಾತ: ನಿವೃತ್ತ ಎಎಸ್ಐ,ಪತ್ನಿಗೆ ಗಾಯ;ಸಂಚಾರ ಅಸ್ತವ್ಯಸ್ತ
Team Udayavani, Apr 25, 2017, 10:48 AM IST
ಉಡುಪಿ : ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಿವೃತ್ತ ಎಎಸ್ಐ ಮತ್ತು ಪತ್ನಿ ಮತ್ತು ಕಾರು ಚಾಲಕ ಗಾಯಗೊಂಡ ಘಟನೆ ನಡೆದಿದೆ. ಅಪಘಾತದ ಬಳಿಕ ರಾ.ಹೆ.66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡಬೇಕಾಯಿತು.
ಕುಮಟಾದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ನಿವೃತ್ತ ಎಎಸ್ಐ ಅರುಣ್ ನಾಯಕ್(61)ಪತ್ನಿ ಮಂಗಳಾ ಮತ್ತು ಕಾರು ಚಾಲಕ ಸಣ್ಣ ಮಟ್ಟದ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಮಂಗಳೂರಿನಿಂದ ಉಡುಪಿಗೆ ಬರುತ್ತಿತ್ತು ಎನ್ನಲಾಗಿದೆ.
ಪಡುಬದ್ರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನ ಸಂಚಾರ ಸುಗಮಗೊಳಿಸುವಲ್ಲಿ ಪೊಲೀಸರು ಶ್ರಮವಹಿಸಿದರು.
ಹೆದ್ದಾರಿಯಲ್ಲಿ ಇನ್ನೂ ಚತುಷ್ಪಥ ಕಾಮಗಾರಿಯಾದೆ ಏಕಮುಕ ಸಂಚಾರ ವ್ಯವಸ್ಥೆ ಇರುವುದರಿಂದ ಪಡುಬಿದ್ರಿಯಲ್ಲಿ ಪದೇ ಪದೇ ಅವಘಡಗಳು ಸಂಭವಿಸುತ್ತಲೇ ಇವೆ.
ಸಕಾಲದಲ್ಲಿ ಕ್ರೇನ್ ಲಭಿಸದೇ ಇದ್ದ ಕಾರಣ ಕಾರನ್ನು ಮೇಲಕ್ಕೆತ್ತಲು ಕೆಲಕಾಲ ಕಾಯಬೇಕಾಗಿ ಬಂತು ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’