
ಪಡುಬಿದ್ರಿ: ಬೈಕ್ ಢಿಕ್ಕಿ: ಪಾದಚಾರಿಗೆ ತೀವ್ರ ಗಾಯ
Team Udayavani, Jan 21, 2023, 7:54 PM IST

ಪಡುಬಿದ್ರಿ: ಬೆಳ್ಮಣ್ ನಿವಾಸಿ ಸದಾನಂದ ದೇವಾಡಿಗ(48) ಪಡುಬಿದ್ರಿಯಲ್ಲಿ ಜ. 21ರಂದು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ಬೈಕ್ ಸವಾರನು ನಿರ್ಲಕ್ಷ್ಯತೆಯಿಂದ ಬೈಕನ್ನು ಢಿಕ್ಕಿ ಹೊಡೆದಾಗ ರಸ್ತೆಗೆ ಬಿದ್ದು ತಲೆಯ ಹಿಂಭಾಗಕ್ಕೆ ತೀವ್ರತರ ಗಾಯಗೊಂಡಿದ್ದಾರೆ.
ಪಡುಬಿದ್ರಿಯಲ್ಲಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ.
ಆರೋಪಿ ಬೈಕ್ ಸವಾರ ಯಶವಂತ್ ಕೂಡಾ ಅವರ ಬಲಭುಜ ಹಾಗೂ ತುಟಿಗಳಿಗೆ ಗಾಯಗೊಂಡಿದ್ದು ಪಡುಬಿದ್ರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
