
ಪಡುಬಿದ್ರಿ: ಗೃಹಿಣಿ ಸಂಶಯಾಸ್ಪದ ಸಾವಿನ ಪ್ರಕರಣ… ಪತಿ ಸೆರೆ, 15 ದಿನ ನ್ಯಾಯಾಂಗ ಬಂಧನ
Team Udayavani, Feb 25, 2023, 6:15 AM IST

ಪಡುಬಿದ್ರಿ: ಪತಿಯ ಮಾನಸಿಕ, ದೈಹಿಕ ಹಿಂಸೆಯಿಂದಾಗಿ ಸಂಶಯಾಸ್ಪದ ಸಾವಿಗೀಡಾದ ಮಮತಾ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಆಕೆಯ ಪತಿ, ಬೀಡು ನಿವಾಸಿ ಚೇತನ್ ಕುಮಾರ್ ಕೆ. (42)ನನ್ನು ಫೆ. 23ರಂದು ರಾತ್ರಿ ಪಡುಬಿದ್ರಿ ಬೀಚ್ ಬಳಿಯಲ್ಲಿ ಬಂಧಿಸಲಾಗಿದೆ.
ಆತನನ್ನು ಉಡುಪಿಯ ನ್ಯಾಯಾಲಯಕ್ಕೆ ಪಡುಬಿದ್ರಿ ಪೊಲೀಸರು ಶುಕ್ರವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಪಡುಬಿದ್ರಿ ಬೀಡು ಬಳಿಯ ನಿವಾಸಿ ಚೇತನ್ನನ್ನು 2011ರಲ್ಲಿ ವಿವಾಹವಾಗಿದ್ದ ಮಮತಾ ಅವರಿಗೆ ಪತಿ ಸತತವಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನು ನೀಡುತ್ತಿದ್ದ. ಈ ಕುರಿತಾಗಿ ಆಕೆ ತಮ್ಮ ತಾಯಿ, ಅಕ್ಕ ಹಾಗೂ ಅಣ್ಣನವರಲ್ಲಿ ಹೇಳಿಕೊಳ್ಳುತ್ತಿದ್ದಳು. ಗುರುವಾರ ಕೂಡಾ ಚೇತನ್, ತನ್ನ ಪತ್ನಿ ಮಮತಾ ಹಣ ಕದ್ದಿರುವುದಾಗಿ ಆಪಾದನೆಗಳನ್ನು ಹೊರಿಸಿ ಆಕೆಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದನ್ನು ಬೆಳಗ್ಗೆಯೇ ಅಣ್ಣನವರಿಗೆ ಮೊಬೈಲ್ ಕರೆ ಮಾಡಿ ಮಮತಾ ಹೇಳಿಕೊಂಡಿದ್ದರು. ಸಂಜೆಯ ವೇಳೆಗೆ ಅಡುಗೆ ಮನೆಯಲ್ಲಿನ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಬಗ್ಗೆ ಮೃತ ಮಮತಾ ಅವರ ಸಹೋದರ ನೀಡಿದ ಸಂಶಯಾಸ್ಪದ ಸಾವಿನ ದೂರಿನಂತೆ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿ ಮಮತಾ ಪತಿ ಚೇತನ್ ಕುಮಾರ್ನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ