ಪ್ರಕೃತಿ ಆರಾಧನೆಗೆ ಪ್ರತ್ಯಕ್ಷ ಸಾಕ್ಷಿ  ಪಡುಬಿದ್ರಿ “ಢಕ್ಕೆಬಲಿ’


Team Udayavani, Jan 17, 2019, 1:30 AM IST

dakke-bali.png

ಪಡುಬಿದ್ರಿ: ನಾಗಾರಾಧನೆ, ದೈವಾರಾಧನೆ, ತನು ತಂಬಿಲಗಳೆಂದು ಪರಂಪರೆಯಲ್ಲಿ ಮುಂದುವರಿಯುತ್ತಾ ಇಂದಿಗೂ ನಮ್ಮ ನಡುವೆ ಜನಪದೀಯ ಪೂಜಾ ಪದ್ಧತಿಗಳು ಉಳಿದುಕೊಂಡಿವೆ. ವಿಶಿಷ್ಟ ವೈದಿಕ ಹಾಗೂ 
ತಂತ್ರಾಧಾರಿತ ವಿಶಿಷ್ಟ ಪೂಜಾ ಪದ್ಧತಿಯಾಗಿ ಪಡುಬಿದ್ರಿಯ ಬ್ರಹ್ಮಸ್ಥಾನದಲ್ಲಿ ದ್ವೈವಾರ್ಷಿಕ ನಡಾವಳಿಯಾಗಿ ಮುಂದುವರಿಯುತ್ತಾ ಬಂದಿ ರುವ “ಢಕ್ಕೆಬಲಿ’, “ಮಂಡಲ ಸೇವೆ’ಯು ಪ್ರಕೃತಿ ಆರಾಧನೆಗೆ ಸಾಕ್ಷಿಯಾಗಿ ನಿಲ್ಲಬಲ್ಲ ಅಪೂರ್ವ ಆಚರಣೆಯಾಗಿದೆ. 

ಚಿದಂಬರ ರಹಸ್ಯದ ತಾಣ
ಶ್ರೀ ಖಡೆYàಶ್ವರೀ ಬ್ರಹ್ಮಸ್ಥಾನವು ನಾಸ್ತಿಕರ ಕಣ್ಣಿಗೆ ಕೇವಲ ಒಂದು ಗುಡ್ಡ ಅಥವಾ ಕಾಡಾಗಿ ಕಾಣಿಸಬಲ್ಲದು. ಆದರೆ ಇಲ್ಲಿನ ಆಸ್ತಿಕತೆಯ ಆಳವನ್ನು ಅರಿಯಬಲ್ಲ ಆಸಕ್ತರು, ವಿಶೇಷವಾಗಿ ಮಾರ್ಥಾ ಆ್ಯಸ್ಟನ್‌ ರಂತಹ ಪಾಶ್ಚಿಮಾತ್ಯ ವಿದ್ವಾಂಸರು, ಪಾರಮಾರ್ಥಿಕರು ಇದನ್ನು ಪ್ರಕೃತಿ ಮಾತೆಯ ಮಡಿಲಲ್ಲಿನ ದೇವತಾ ಆರಾಧನೆಯ ತೊಟ್ಟಿಲಾಗಿ ಪರಿಗಣಿಸಿದ್ದಾರೆ. ಚಿದಂಬರ ರಹಸ್ಯಗಳನ್ನು ಒಳಗೊಂಡು ಇಲ್ಲಿನ ಪೂಜಾ ಪರಂಪರೆ, ಆರಾಧನಾ ವಿಧಾನ, ಕೇವಲ ಮಾಂತ್ರಿಕವೂ ಅಲ್ಲದೆ ಯಾಂತ್ರಿಕವಾಗಿ ಒಂದರ ಮೇಲೊಂದ ರಂತೆ ದೈವೀ ಸನ್ನಿವೇಶಗಳ ಸೃಷ್ಟಿಯಾಗಿ ರಾತ್ರಿ ಎಲ್ಲ ಮೈನವಿರೇಳುವ ಕ್ಷಣಗಳನ್ನು ಒದಗಿಸಿ ನೋಡುಗರ ಕಣ್ಣಲ್ಲಿ ಅಚ್ಚಳಿಯದ ರಮಣೀಯ ದೃಶ್ಯಾವಳಿಗಳ ಸರಮಾಲೆಗಳನ್ನೇ ಉಂಟುಮಾಡುತ್ತವೆ. 

ಢಕ್ಕೆಬಲಿ – ಪ್ರವಾಸೋದ್ಯಮಕ್ಕೆ  ಉತ್ತೇಜನ
ಮುಂಜಾವದ ಪಂಚಾಮೃತಾಭಿಷೇಕ ದೊಂದಿಗೆ ಆರಂಭಗೊಳ್ಳುವ ಢಕ್ಕೆಬಲಿ ಸೇವೆಯ ಆರಂಭವು ಮುಂದೆ ಬ್ರಾಹ್ಮಣಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಬಳಿಕ ಸಂಜೆ ಹೊತ್ತಿಗೆ ವಿಜೃಂಭಣೆಯ ಹೊರೆ ಕಾಣಕೆ ಮೆರವಣಿಗೆಯೊಂದಿಗೆ ನಡೆಯುತ್ತದೆ. ವಿವಿಧ ಫಲಪುಷ್ಪ, ಅಡಕೆ, ಹಿಂಗಾರ, ತೆಂಗಿನಕಾಯಿ, ತೆಂಗಿನಗರಿ, ಸೀಯಾಳಗಳ ರಾಶಿ  ಬಯಲು ಆಲಯ “ಬ್ರಹ್ಮಸ್ಥಾನ’ ದೊಳಕ್ಕೆ ಬಂದು ಸೇರಿಕೊಳ್ಳುತ್ತದೆ. ಮುಂದೆ ಇದನ್ನೆಲ್ಲಾ ಅಲಂಕರಿಸಿ ಕಾನನವನ್ನು ಸಿರಿಸಿಂಗಾರ ಗೊಳಿಸುತ್ತಾರೆ. ನೋಡುಗರ ಕಣ್ಣಿಗೇ ರಮ್ಯವಾಗಿ ಕಾಣಿಸಿಕೊಳ್ಳುವ ಈ ಪುಷ್ಪಾಲಂಕಾರಗಳಿಂದಲೇ ಪಡುಬಿದ್ರಿಯ ತರುಣರಿಗೆ ಇಂದಿಗೂ ಹೊರ ಜಿಲ್ಲೆ, ರಾಜ್ಯಗಳಲ್ಲಿ ವಿಶಿಷ್ಟ ಹೆಸರಿದೆ.

ಪಡುಬಿದ್ರಿಯ ಶ್ರೀ ಖಡೆYàಶ್ವರೀ ಬ್ರಹ್ಮಸ್ಥಾನವನ್ನು ಈ ಸುಂದರ ಪುಷ್ಪಾಲಂಕಾರಗಳಿಗಾಗಿಯೇ ಹೊರ ರಾಜ್ಯ, ಜಿಲ್ಲೆ ಸೇರಿದಂತೆ ದೇಶ, ವಿದೇಶಗಳ ಮಂದಿಯೂ ಬಂದು ವೀಕ್ಷಿಸಿ ಪುಳಕಿತರಾಗುತ್ತಾರೆ. ಪ್ರವಾಸೋದ್ಯಮಕ್ಕೂ ಈ ಢಕ್ಕೆಬಲಿ ಪರ್ವವು ಉತ್ತೇಜನವನ್ನೀಯುತ್ತದೆ. ಈ ಅಲಂಕಾರಗಳೆಲ್ಲಾ ಮುಗಿದು ರಾತ್ರಿಯ ವೇಳೆ ತಂಬಿಲ ಸೇವೆ, ಢಕ್ಕೆಬಲಿಗಳು ಅಲ್ಲಿನ ಅರ್ಚಕರು, ಕೊರಡುಗಳು, ವೈದ್ಯರು, ಗುರಿಕಾರರು, ಮಾನ್ಯರು ಹಾಗೂ ಸ್ಥಳವಂದಿಗರ ಕೂಡುವಿಕೆಯಿಂದ ನಡುರಾತ್ರಿಯ ಒಂದಿಷ್ಟು ವಿರಾಮದ ಹೊರತಾಗಿ ಮುಂಜಾವದವರೆಗೂ ಮುಂದುವರಿಯುತ್ತವೆ. ಬೆಳಗ್ಗೆ ಪ್ರಸಾದ ವಿತರಣೆ ಯೊಂದಿಗೆ ಈ ಸೇವೆಗಳು ಕೊನೆಗೊಳ್ಳುತ್ತವೆ. ಪ್ರಸಾದವಾಗಿ ಅಲಂಕರಿಸಿದ ಬಾಳೆಹಣ್ಣು. ಹೂ, ಸೀಯಾಳಗಳು ವಿತರಿಸಲ್ಪಡುತ್ತದೆ. ಮರುದಿನದ ಸೇವೆ ಮತ್ತೆ ಅಲ್ಲಿ 
ನಡೆಯುವ ಪಂಚಾಮೃತಾಭಿಷೇಕ ದೊಂದಿಗೆ ಆರಂಭಗೊಳ್ಳುವುದು. 

ಭಕ್ತರಿಗೆ ಮರಳು ಇಲ್ಲಿ ಪ್ರಸಾದವಾಗಿರುತ್ತದೆ. ಯಾರೇ ಬಂದರೂ ಇಲ್ಲಿನ ಮರಳೇ ಅವರಿಗೆ ಆಸನವಾಗಿರುತ್ತದೆ. ಮಹಿಳೆಯರೂ, ಪುಟಾಣಿಗಳೂ ಸೇರಿದಂತೆ ಸಹಸ್ರಾರು ಮಂದಿ ಈ ಐತಿಹಾಸಿಕ ವನದಲ್ಲಿ ಢಕ್ಕೆಬಲಿ ಸೇವೆಗಾಗಿ ಸೇರುತ್ತಾರೆ. 

ಈ ಬಾರಿ ನಾಗಮಂಡಲ ಸಹಿತ 35 ಸೇವೆ
ಈ  ಬಾರಿ ಜ. 18ರಿಂದ ಪಡುಬಿದ್ರಿಯ ಶ್ರೀ ಖಡೆYàಶ್ವರೀ ಬ್ರಹ್ಮಸ್ಥಾನದಲ್ಲಿ ಆರಂಭಗೊಳ್ಳಲಿದೆ.  ಒಂದು ನಾಗಮಂಡಲ ಸೇರಿದಂತೆ ಒಟ್ಟು 35 ಸೇವೆಗಳು ಈ ಬಾರಿ ನಡೆಯಲಿದೆ.  ಪಡುಬಿದ್ರಿಯ ಬ್ರಹ್ಮಸ್ಥಾನವು ಶಿವಳ್ಳಿ ಬ್ರಾಹ್ಮಣ ಸಮುದಾಯದ ಶ್ರೀ ವನದುರ್ಗಾ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟಿದೆ.   ಬ್ರಾಹ್ಮಣ ಸಮಾಜದ ವತಿಯಿಂದ ನಡೆಯುವ ಮಂಡಲ ಹಾಕುವ ಸೇವೆಯೊಂದಿಗೆ ಆರಂಭಗೊಳ್ಳುವ ಢಕ್ಕೆಬಲಿಯು ನಿರ್ದಿಷ್ಟ ದಿನಗಳಲ್ಲಿ ಮುಂದುವರಿಯುತ್ತಾ ಮುರುಡಿ ಬ್ರಹ್ಮಸ್ಥಾನ ಮತ್ತು ಹೆಜಮಾಡಿಯ ಬ್ರಹ್ಮಸ್ಥಾನಗಳ ಪೂರ್ವ ಸಂಪ್ರದಾಯದ ಎರಡು ಸೇವೆಗಳೂ ಸೇರಿದಂತೆ ಒಟ್ಟು 35 ಸೇವೆಗಳು ಮಾ. 12ರಂದು ಕೊನೆಗೊಳ್ಳುತ್ತದೆ . 
-ವೈ. ಎನ್‌. ರಾಮಚಂದ್ರ ರಾವ್‌, ಶ್ರೀ ವನದುರ್ಗಾ ಟ್ರಸ್ಟ್‌ನ ಕಾರ್ಯದರ್ಶಿ

– ಆರಾಮ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.