ನವಯುಗ ಕಚೇರಿಗೆ ಮುತ್ತಿಗೆ: ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸಲು ಆಗ್ರಹ
Team Udayavani, Jun 28, 2021, 12:18 PM IST
ಪಡುಬಿದ್ರಿ: ಚತುಃಷ್ಪಥ ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣರ್ಗೊಳಿಸುವಂತೆ ಪಡುಬಿದ್ರಿ ಗ್ರಾಪಂ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರ ನೇತೃತ್ವದಲ್ಲಿ ನವಯುಗ ಶಾಖಾ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರು ಆಗ್ರಹಿಸಿದ್ದಾರೆ.
ಕಚೇರಿಗೆ ಬೀಗ ಜಡಿಯಲು ನಿರ್ಧರಿಸಿದ ಗ್ರಾ. ಪಂ. ಸದಸ್ಯರು ನವಯುಗ ಯೋಜನಾ ಪ್ರಬಂಧಕ ಶ್ರೀನಿವಾಸ್ ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು. ಮೂರು ತಿಂಗಳಿನಿಂದ ಮನವಿ ಮಾಡಿಕೊಂಡರೂ ಕಂಪೆನಿ ಗ್ರಾ. ಪಂ ವಿನಂತಿಯನ್ನು ಕಡೆಗಣಿಸುತ್ತಿದೆ. ಹಾಗಾಗಿ ಅಧಿಕಾರಿ ಕಚೇರಿಗೆ ಬಾರದಿದ್ದಲ್ಲಿ ಕಚೇರಿಗೆ ಬೀಗ ಜಡಿಯುವುದು ಎಂಬುದಾಗಿ ಅಚಲ ನಿರ್ಧಾರವನ್ನು ಗ್ರಾ. ಪಂ. ಪ್ರಕಟಿಸಿದ ಬಳಿಕ ಯೋಜನಾ ಪ್ರಬಂಧಕ ಶ್ರೀನಿವಾಸ್ ಪಡುಬಿದ್ರಿ ಕಚೇರಿಗಾಗಮಿಸಿದರು.
ಇದನ್ನೂ ಓದಿ:ಗಂಡನಿಂದ ದೂರವಾಗಿ ರಸ್ತೆಬದಿ ಲಿಂಬೆ ಪಾನಕ ಮಾರುತ್ತಿದ್ದ ಯುವತಿ ಈಗ ಪೊಲೀಸ್ ಇನ್ಸ್ ಪೆಕ್ಟರ್
ತಕ್ಷಣ ಅವರನ್ನು ಅವೈಜ್ಞಾನಿಕ ಕಾಮಗಾರಿಗಳು ನಡೆದಿರುವ ಪಡುಬಿದ್ರಿಯ ವಿವಿದೆಡೆಗಳಿಗೆ ಕರೆದೊಯ್ಯಲಾಯಿತು. ಪರಿಸ್ಥಿತಿಯನ್ನು ಅಧ್ಯಕ್ಷ ರವಿ ಶೆಟ್ಟಿ ಮತ್ತಿತರರು ವಿವರಿಸಿದರು. ತಿಂಗಳೊಳಗೆ ಪರಿಹಾರವನ್ನು ನವಯುಗ ಕಾಮಗಾರಿಗಳಿಂದ ಕಂಡುಕೊಳ್ಳುವಂತಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆಯನ್ನು ಸಂಘಟಿಸಲಾಗುವುದೆಂದು ಗ್ರಾಪಂ. ಅಧ್ಯಕ್ಷ ರವಿ ಶೆಟ್ಟಿ ನವಯುಗ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಗ್ರಾ. ಪಂ. ಉಪಾಧ್ಯಕ್ಷೆ ಯಶೋದಾ, ತಾ. ಪಂ. ಮಾಜಿ ಸದಸ್ಯೆ ನೀತಾ ಗುರುರಾಜ್, ಗ್ರಾ.ಪಂ. ಸದಸ್ಯರಾದ ನವೀನ್ ಶೆಟ್ಟಿ, ಗಣೇಶ್ ಕೋಟ್ಯಾನ್ ಸಹಿತ ಎಲ್ಲಾ 32 ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್