ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ
ಲಾರಿಯಲ್ಲಿತ್ತು 5 ಎಮ್ಮೆ, 3 ಕೋಣ ಹಾಗೂ 10 ಎತ್ತುಗಳು ನೀಲಾವರ ಗೋಶಾಲೆಗೆ
Team Udayavani, Oct 28, 2021, 6:23 AM IST
ಪಡುಬಿದ್ರಿ: ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬುಧವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 18 ಜಾನುವಾರುಗಳನ್ನು ರಕ್ಷಿಸಲಾಗಿದೆ.
ಚಾಲಕ ಹುಬ್ಬಳ್ಳಿಯ ಕಲಂದರ್ (33) ಮತ್ತು ಕ್ಲೀನರ್ ಕಲಘಟಗಿಯ ಅಬ್ದುಲ್ ರೆಹಮಾನ್ (35) ನನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಆರಿಫ್ ಪರಾರಿಯಾಗಿದ್ದಾನೆ.
ಹೆಜಮಾಡಿ ಟೋಲ್ಗೇಟ್ ಬಳಿ ಪಡುಬಿದ್ರಿ ಎಸ್ಸೆ$ç ಅಶೋಕ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜಾನುವಾರು ಸಹಿತ ಒಟ್ಟು 18 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಟಾಟೆ, ಈರುಳ್ಳಿ ಸಾಗಾಟವೆಂದರು…
ಹರಿಯಾಣ ನೋಂದಣಿಯ ಲಾರಿ ಹುಬ್ಬಳ್ಳಿಯಿಂದ ಬರುತ್ತಿದ್ದು, ಪೊಲೀಸರು ಹೆಜಮಾಡಿ ಟೋಲ್ಗೇಟ್ ಬಳಿ ತಡೆದು ನಿಲ್ಲಿಸಿ ಚಾಲಕನಲ್ಲಿ ವಿಚಾರಿಸಿದಾಗ ಅದರಲ್ಲಿ ಬಟಾಟೆ ಹಾಗೂ ಈರುಳ್ಳಿ ಮೂಟೆಗಳು ಇರುವುದಾಗಿ ತಿಳಿಸಿದ್ದ. ಮತ್ತೆ ಅನುಮಾನಗೊಂಡ ಪೊಲೀಸರು ಚಾಲಕನನ್ನು ವಿಚಾರಿಸಿದಾಗ ಜಾನುವಾರುಗಳು ಇರುವುದು ಪತ್ತೆಯಾಗಿದೆ. ಬಳಿಕ ಲಾರಿಯನ್ನು ಪಡುಬಿದ್ರಿ ಠಾಣೆಗೆ ತರಲಾಯಿತು.
ಬಳಲಿದ್ದ ಜಾನುವಾರುಗಳು
ಲಾರಿಯಲ್ಲಿ 5 ಎಮ್ಮೆ, 3 ಕೋಣ ಹಾಗೂ 10 ಎತ್ತುಗಳಿದ್ದು, ಅದರಲ್ಲಿ ಒಂದು ಎತ್ತು ಸಾವನ್ನಪ್ಪಿದೆ. ಸ್ಥಳೀಯ ಪಶು ವೈದ್ಯಾಧಿಕಾರಿ ಮೂಲಕ ಚಿಕಿತ್ಸೆ ಕೊಡಿಸಲಾಗಿದೆ. ಸಾವನ್ನಪ್ಪಿದ ಎತ್ತಿನ ಮರಣೋತ್ತರ ಪರೀಕ್ಷೆ ಮಾಡಿ ದಫನ ಮಾಡಲಾಯಿತು. ಘಟನೆಯ ವೇಳೆ ಲಾರಿಯಲ್ಲಿದ್ದ ಕೋಣವೊಂದು ತಪ್ಪಿಸಿಕೊಂಡು ಪರಾರಿಯಾಗಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ.
ಇದನ್ನೂ ಓದಿ:ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ
ಸಂಘಟನೆ, ಸ್ಥಳೀಯರ ಸಹಕಾರ
ಪೊಲೀಸರು ವಶಪಡಿಸಿಕೊಂಡಿರುವ ಜಾನುವಾರು ಗಳನ್ನು ವಿಎಚ್ಪಿ, ಬಜರಂಗ ದಳ ಹಾಗೂ ಭಗವತಿ ಫ್ರೆಂಡ್ಸ್ನ ಕಾರ್ಯಕರ್ತರ ಸಹಾಯದೊಂದಿಗೆ ಪಡುಬಿದ್ರಿ ಮೀನು ಮಾರುಕಟ್ಟೆಯ ಬಳಿ ಟ್ರಕ್ನಿಂದ ಕೆಳಗಿಳಿಸಿ ಉಪಚರಿಸಲಾಗಿದ್ದು, ಚೇತರಿಸಿಕೊಂಡ ಬಳಿಕ ಅವುಗಳನ್ನು ನೀಲಾವರ ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾನುವಾರು ನಿರಂತರ ಸಾಗಾಟ
ಪೊಲೀಸರು ವಶಪಡಿಸಿಕೊಂಡ ಜಾನುವಾರುಗಳ ಪೈಕಿ ನಾಲ್ಕು ಜಾನುವಾರುಗಳಲ್ಲಿ ಸಾಲ ಮಾಡಿ ಖರೀದಿಸಿದ ಗುರುತುಗಳು ಪತ್ತೆಯಾಗಿದ್ದು, ಅವುಗಳನ್ನು ಕದ್ದು ಕೇರಳಕ್ಕೆ ಸಾಗಿಸುತ್ತಿರಬಹುದೆನ್ನುವ ಶಂಕೆ ವ್ಯಕ್ತವಾಗಿದೆ. ಹರಿಯಾಣ ನೊಂದಾವಣೆ ಹೊಂದಿರುವ ಈ ಲಾರಿಯಲ್ಲಿ ಜಾನುವಾರುಗಳನ್ನು ಕಟ್ಟಲು ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇದರಲ್ಲಿ ನಿರಂತರವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತೇ ಎನ್ನುವ ಸಂಶಯ ಮೂಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ