ಪಡುಬಿದ್ರಿ: ಮಿಂಚಿನಬಾವಿ ತಗಡು ಚಪ್ಪರ ವಿವಾದ; ಆಕ್ಷೇಪ ಹಿಂಪಡೆದ ಎರಡು ಮುಸ್ಲಿಂ ಮನೆ ಮಂದಿ


Team Udayavani, Jun 4, 2022, 4:46 PM IST

ಪಡುಬಿದ್ರಿ: ಮಿಂಚಿನಬಾವಿ ತಗಡು ಚಪ್ಪರ ವಿವಾದ; ಆಕ್ಷೇಪ ಹಿಂಪಡೆದ ಎರಡು ಮುಸ್ಲಿಂ ಮನೆ ಮಂದಿ

ಪಡುಬಿದ್ರಿ: ಮಿಂಚಿನಬಾವಿ ಶ್ರೀ ಕೋಡ್ದಬ್ಬು ಸನ್ನಿಧಾನದ ಎದುರಲ್ಲಿ ಪಂಚಾಯತ್ ರಸ್ತೆಗೆ ತಗಡು ಚಪ್ಪರದ ನಿರ್ಮಾಣ ಪಂಚಾಯತ್‌ಗೇ ಬಿಟ್ಟ ವಿಚಾರವಾಗಿದೆ. ಹಾಗಾಗಿ ಇದಕ್ಕೆ ಸಾನ್ನಿದ್ಧ್ಯದ ಬಳಿಯ ಎರಡು ಮನೆಯವರಾದ ನಾವು ಪಂಚಾಯತ್‌ಗೆ ಈ ಹಿಂದೆ ನೀಡಿರುವ ಆಕ್ಷೇಪಣೆಗಳನ್ನು ವಾಪಾಸು ಪಡೆದಿದ್ದೇವೆ. ಇದರಲ್ಲಿ ಮುಸ್ಲಿಂ ಸಮುದಾಯವೆಲ್ಲವನ್ನೂ ಎಳೆದುತರಬೇಡಿ. ಕ್ಷೇತ್ರದ ಬಳಿಯಿದ್ದು 2004 ರಿಂದ ಇಂದಿನವರೆಗೂ ಸೌಹರ್ದತೆಯನ್ನು ಕಾಪಾಡಿಕೊಂಡು ಬಂದವರು ನಾವು ಎಂದು ಮಿಂಚಿನ ಬಾವಿ ಕ್ಷೇತ್ರದ ಬಳಿಯ ನಿವಾಸಿಗಳಾದ ಕಲಂದರ್ ಹಾಗೂ ರೆಹಾನಾ ಹೇಳಿದರು.

ಅವರು ಜೂ. 4ರಂದು ರಸ್ತೆಗೆ ತಗಡು ಚಪ್ಪರ ನಿರ್ಮಾಣದ ಕುರಿತಾಗಿ ನೀಡಿರುವ ಆಕ್ಷೇಪಣೆಗಳನ್ನು ವಾಪಾಸು ಪಡೆಯುತ್ತಿರುವ ಕುರಿತಾಗಿ ಮನವಿಗಳನ್ನು ಪಡುಬಿದ್ರಿ ಗ್ರಾ. ಪಂ. ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ ಅವರಿಗಿತ್ತ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಾರ್ವಜನಿಕ ಹಿತಾಸಕ್ತಿ, ಮನೆ ಮಕ್ಕಳ ಸುರಕ್ಷತೆ, ವಿಶೇಷವಾಗಿ ಆ ಪ್ರದೇಶದಲ್ಲಿ ಬೀಸುವ ಬಲವಾದ ಗಾಳಿಯ ಒತ್ತಡಗಳನ್ನು ಪರಿಗಣಿಸಿ ಹಾಗೂ ಆ ರಸ್ತೆಯಲ್ಲಿ ಸಾಗುವ ಶಾಲಾ ವಾಹನ, ಘನವಾಹನಗಳನ್ನು ಗಮನದಲ್ಲಿಟ್ಟುಕೊಂಡು ಚಪ್ಪರದ ನಿರ್ಧಾರವನ್ನು ಪಂಚಾಯತ್ ತೆಗೆದುಕೊಳ್ಳಬೇಕಿದೆ ಎಂದೂ ರೆಹಾನಾ ಪ್ರತಿಪಾದಿಸಿದರು.

ಮನವಿಯನ್ನು ಸ್ವೀಕರಿಸಿ ಮಾತನಾಡಿದ ಗ್ರಾ. ಪಂ. ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರು, ಪಡುಬಿದ್ರಿಯಲ್ಲಿ ಈ ಹಿಂದಿನಿಂದಲೂ ಮತೀಯ ಸಾಮರಸ್ಯ, ಸೌಹಾರ್ದತೆಯನ್ನು ಕಾಪಾಡಿಕೊಂಡು ಬಂದವರು ನಾವಾಗಿದ್ದೇವೆ. ಚಪ್ಪರದ ಕುರಿತಾಗಿ ಆಕ್ಷೇಪಣೆಗಳನ್ನು ಮಿಂಚಿನಬಾವಿ ಕೋಡ್ದಬ್ಬು ದೈವಸ್ಥಾನದ ಬಳಿಯ ನಿವಾಸಿಗಳಾದ ಕಲಂದರ್ ಹಾಗೂ ರೆಹಾನಾ ವಾಪಾಸು ಪಡೆದಿರುವುದು ಸಂತಸ ತಂದಿದೆ. ಪರಸ್ಪರ ಸಹಮತದಿಂದಲೇ ತಗಡು ಚಪ್ಪರದ ನಿರ್ಮಾಣವಾಗಲಿ. ಡೋರ್ ನಂಬರ್ ಇಲ್ಲವಾದ್ದರಿಂದ ಪಂಚಾಯತ್ ಮೂಲಕ ಯಾವುದೇ ಪರವಾನಿಗೆಯನ್ನು ನೀಡಲಾಗದು ಎಂದಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ. ಪಂ. ಕಾರ್ಯದರ್ಶಿ ರೂಪಲತಾ, ಸದಸ್ಯರಾದ ಸಂದೇಶ್ ಶೆಟ್ಟಿ ಪಾದೆಬೆಟ್ಟು, ಶೋಭಾ ಶೆಟ್ಟಿ ಪಾದೆಬೆಟ್ಟು, ಅಬ್ದುಲ್ ರಜಾಕ್, ನಝೀರ್, ಯೂಸುಫ್ ಕಂಚಿನಡ್ಕ, ಶೆಹನಾಝ್, ಆಸ್ಮಾ, ಆಶಾಬಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.