ಪಡುಬಿದ್ರಿ: ಕಾರ್ಯಾಚರಿಸದ ಹಳ್ಳಿಗಳ ಪಶು ಚಿಕಿತ್ಸಾಲಯ


Team Udayavani, Dec 2, 2022, 5:00 AM IST

ಪಡುಬಿದ್ರಿ: ಕಾರ್ಯಾಚರಿಸದ ಹಳ್ಳಿಗಳ ಪಶು ಚಿಕಿತ್ಸಾಲಯ

ಪಡುಬಿದ್ರಿ : ಪಶು ಸಂಗೋಪನ ಇಲಾಖಾ ಆದೇಶದನ್ವಯ ರಾಜ್ಯದೆಲ್ಲೆಡೆ ನ. 7ರಿಂದ ಪ್ರಾರಂಭಗೊಂಡಿದ್ದು ಡಿ. 7ರವರೆಗೆ ನಡೆಯುತ್ತಿರುವ ರಾಸುಗಳ ಕಾಲು ಬಾಯಿ ಜ್ವರದ ಲಸಿಕಾ ಅಭಿಯಾನದ ಕರ್ತವ್ಯನಿರ್ವಹಣೆಗೆ ಇಬ್ಬರು ಪಶು ಸಂಗೋಪನ ನಿರೀಕ್ಷಕರು, ಗ್ರಾಮೀಣ ಪಶು ಚಿಕಿತ್ಸಾ ಕೇಂದ್ರಗಳ ವೈದ್ಯರು, ಇಬ್ಬರು ಪಶು ವೈದ್ಯಾಧಿಕಾರಿಗಳನ್ನು ನೇಮಕ ಮಾಡಿರುವುದರಿಂದ ಪಲಿಮಾರಿನ ಪ್ರಾಥಮಿಕ ಪಶು ಚಿಕಿತ್ಸಾಲಯ, ಕಾಪು ತಾ| ಪಶು ವೈದ್ಯಕೀಯ ಆಸ್ಪತ್ರೆ, ಹಳ್ಳಿಗಳ ಪಶು ಚಿಕಿತ್ಸಾಲಯದಲ್ಲಿ ಸಿಬಂದಿ ಕೊರತೆಯಾಗಿ ಕಾರ್ಯಾಚರಿಸದಂತಾಗಿದೆ.

ಶಿರ್ವದಲ್ಲಿನ ಪಶು ವೈದ್ಯಾಧಿಕಾರಿ ಡಾ| ಅರುಣ್‌ ಕುಮಾರ್‌ ಹೆಗ್ಡೆ ಅವರು ಕಾಪು ತಾ| ಪಶು ವೈದ್ಯಾಧಿಕಾರಿ ಸೇವೆಯನ್ನೂ ನಿಭಾಯಿಸುತ್ತಿದ್ದಾರೆ. ಅವರೇ ಪಡುಬಿದ್ರಿಯ ಪಶು ವೈದ್ಯಕೀಯ ಆಸ್ಪತ್ರೆಯಲ್ಲೂ ನಿಯೋಜನೆಯಲ್ಲಿದ್ದಾರೆ. ಇನ್ನೋರ್ವ ಪಶು ವೈದ್ಯಾಧಿಕಾರಿ ಕಟಪಾಡಿ ಹಾಗೂ ಪಡುಬೆಳ್ಳೆ ಆಸ್ಪತ್ರೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇಡಿಯ ಕಾಪು ತಾ| ನಲ್ಲಿ 29 ಹುದ್ದೆಗಳಿದ್ದು ಕೇವಲ ನಾಲ್ಕು ಹುದ್ದೆಗಳಷ್ಟೇ ಭರ್ತಿಯಾಗಿವೆ. ಇನ್ನುಳಿದ 25 ಹುದ್ದೆಗಳ ಗತಿಯೇ ಅಯೋಮಯವಾಗಿದೆ. ಸದ್ಯ ಇರುವ 2ವೈದ್ಯರು ಹಾಗೂ 2 ಮಂದಿ ನಿರೀಕ್ಷಕರು ತಾಲೂಕಿನ 5ಪಶು ಚಿಕಿತ್ರಾಲಯ ಹಾಗೂ 3 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳ ನಡುವೆ ಅತ್ತಿತ್ತ ಓಡಾಡಿಕೊಳ್ಳುತ್ತಲೇ, ಮೇಲಾಗಿ ಕೆಎಂಎಫ್‌ ಪಶು ವೈದ್ಯರ ಸಹಕಾರದೊಂದಿಗೆ ಇಲಾಖಾ ಕರ್ತವ್ಯಗಳನ್ನು ನಿರ್ವಹಿಸುತ್ತಿರುವರು. ತಾ| ಪಶು ವೈದ್ಯಧಿಕಾರಿ ಅರುಣ್‌ ಕುಮಾರ್‌ ಹೆಗ್ಡೆ ಅವರು “ಉದಯವಾಣಿ’ಯೊಂದಿಗೆ ಮಾತನಾಡಿ, ಸಿಬಂದಿ ಕೊರತೆ ಇಲಾಖೆಯನ್ನು ಕಾಡುತ್ತಿದೆ. ಪಶು ವೈದ್ಯಾಧಿಕಾರಿಯಾಗಿ ಇಲಾಖಾ ಕರ್ತವ್ಯಗಳ ನಡುವೆ ವಿವಿಧ ಗ್ರಾಮಗಳ ಗ್ರಾಮಸಭೆಗೂ ಹಾಜರಾಗಬೇಕಿದೆ. ಸರಕಾರದಿಂದ 400 ಪಶು ವೈದ್ಯಾಧಿಕಾರಿಗಳ ನೇಮಕಾತಿಯು 2 ವರ್ಷಗಳೇ ಹಿಂದೆಯೇ ಆಗಿದ್ದರೂ ವಿಚಾರವು ನ್ಯಾಯಾಲಯದ ಮೆಟ್ಟಲೇರಿ ಕುಳಿತಿದೆ. ಪ್ಯಾರಾ ಸ್ಟಾಫ್‌ ನೇಮಕಾತಿಗಳು ನಡೆಯುತ್ತಿಲ್ಲ. ಸರಕಾರದ ಮಟ್ಟದಲ್ಲಿ ಈ ಪ್ರಕ್ರಿಯೆಗಳು ನಡೆಯಬೇಕಾಗಿದೆ.

ಇವೆಲ್ಲವುಗಳ ನಡುವೆ ರಾಸುಗಳ ಲಸಿಕೆ ಅಭಿಯಾನ ನಡೆಯಬೇಕಾಗಿರುವುದರಿಂದ ಕಾಪು ತಾಲೂಕಿನ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳಲ್ಲಿ ಗ್ರಾಹಕ ಸೇವೆಯಲ್ಲಿ ವ್ಯತ್ಯಾಸವಾಗುತ್ತಿವೆ ಎಂದು ತಿಳಿಸಿದ್ದಾರೆ. ನಾನಾ ಕಾರಣಗಳಿಂದಾಗಿಯೂ ರಾಸುಗಳ ಸಂಖ್ಯೆಯೂ ತಾ| ಮಟ್ಟದಲ್ಲಿ 2015ರ ಸೆನ್ಸಸ್‌ ಬಳಿಕ 2020ಕ್ಕೆ 40 ಶೇಕಡಾದಷ್ಟು ಇಳಿದಿವೆ. 2022ರ ಮಾಹಿತಿಯಂತೆ 2020ರ ಅನಂತರದಲ್ಲಿ 20 ಶೇಕಡಾದಷ್ಟು ರಾಸುಗಳು ಕಡಿಮೆ ಆಗಿರುವುದಾಗಿ ಡಾ| ಅರುಣ್‌ ಕುಮಾರ್‌ ವಿವರಿಸಿದ್ದಾರೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.