ಪಡುಬಿದ್ರಿಗೆ ಬೇಕು ಉಚಿತ ಆ್ಯಂಬ್ಯುಲೆನ್ಸ್‌


Team Udayavani, Mar 31, 2018, 6:10 AM IST

Free-Ambulance.jpg

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ ಬದಿಯ ಪ್ರಮುಖ ಪಟ್ಟಣವಾಗಿ ಬೆಳೆಯುತ್ತಿರುವ ಪಡುಬಿದ್ರಿಗೆ ತುರ್ತಾಗಿ ಉಚಿತ ಆ್ಯಂಬ್ಯುಲೆನ್ಸ್‌ ವ್ಯವಸ್ಥೆ ಬೇಕಿದೆ. ಇದರೊಂದಿಗೆ ವಾಹನಗಳ ಉತ್ತಮ ನಿರ್ವಹಣೆಯೂ ಬೇಕಿದ್ದು, ರೋಗಿಗಳ ಅಮೂಲ್ಯ ಜೀವ ಉಳಿಸಲು ನೆರವಾಗಬೇಕಿದೆ. 

ಪಡುಬಿದ್ರಿಗೆ ಸದ್ಯ ಕಾಪು, ಮೂಲ್ಕಿ, ಸುರತ್ಕಲ್‌ಗ‌ಳ 108 ಸರಕಾರಿ ಆ್ಯಂಬುಲೆನ್ಸ್‌ ಸೇವೆ ಲಭ್ಯವಾಗುತ್ತಿದೆ. ಆದರೆ ಕೆಲವೊಮ್ಮೆ ಅಲ್ಲಿಂದ ಬಂದ ಆ್ಯಂಬ್ಯುಲೆನ್ಸ್‌ಗಳು ಮೂಲ್ಕಿಗೆ ತೆರಳಿ ಮತ್ತೂಂದು ವಾಹನಕ್ಕೆ ರೋಗಿಗಳನ್ನು ಶಿಫ್ಟ್ ಮಾಡುವ ನಿದರ್ಶನಗಳೂ ಇವೆ. ಇದಕ್ಕೆ ಕಾರಣ ವಾಹನದ ನಿರ್ವಹಣೆಯಲ್ಲಿನ ಕೊರತೆ. ಮೊನ್ನೆಯಷ್ಟೇ ಆ್ಯಂಬ್ಯುಲೆನ್ಸ್‌ ಕೆಟ್ಟು, ರೋಗಿಯೊಬ್ಬರು ಮೃತಪಟ್ಟ ಘಟನೆಯಲ್ಲೂ ನಿರ್ವಹಣೆ ಸಮಸ್ಯೆಯೇ ಕಂಡಿದೆ.

ಅಪಘಾತ ವಲಯ 
ಹೆದ್ದಾರಿಯಲ್ಲಿರುವ ಪಡುಬಿದ್ರಿ ಅಪಘಾತ ವಲಯವಾಗಿ ರೂಪು ಗೊಂಡಿದ್ದು, 2016ರಲ್ಲಿ ಇಲ್ಲಿ 77 ಅಪಘಾತಗಳು ಸಂಭವಿಸಿ 24 ಮಂದಿ ಮೃತಪಟ್ಟಿದ್ದರು. 2017ರಲ್ಲಿ ಇಲ್ಲಿ 78 ಅಪಘಾತಗಳು ಸಂಭವಿಸಿದ್ದು 15 ಮಂದಿ ಮೃತಪಟ್ಟಿದ್ದರು. 2018ರಲ್ಲಿ ಈವರೆಗೆ 15 ಅಪಘಾತ ಮತ್ತು 2 ಜೀವಹಾನಿಯಾಗಿದೆ. ಆದರೂ ಇಲ್ಲಿ ಸರಕಾರಿ ಆಂಬ್ಯುಲೆನ್ಸ್‌ ವ್ಯವಸ್ಥೆ ಬಂದಿಲ್ಲ. ಇಲ್ಲಿನ ಜನತೆ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಂಬ್ಯುಲೆನ್ಸ್‌ಗೆ ದುಪ್ಪಟ್ಟು ದರ ಪಾವತಿಸಿ ಸೇವೆ ಪಡೆದುಕೊಳ್ಳಬೇಕಾಗುತ್ತದೆ.  

ಘಟನೆ ಪಾಠ ಕಲಿಸೀತೇ? 
ಮಾ.29ರಂದು ನಡೆದ ಘಟನೆಯಿಂದ ಹೆಜಮಾಡಿಯ ಹೃದ್ರೋಗಿ ವಿನಯಾ ವಿ. ಶೆಣೈ ಅವರು ಮೃತಪಟ್ಟಿದ್ದು, ಪಡುಬಿದ್ರಿಗೆ ಪ್ರತ್ಯೇಕ ಆಂಬ್ಯುಲೆನ್ಸ್‌ ಬೇಕು ಎಂಬ ಬೇಡಿಕೆಯನ್ನು ಬಲಗೊಳಿಸಿದೆ. ಕರೆ ಮಾಡಿದ ಅರ್ಧಗಂಟೆ ಬಳಿಕ ಆಂಬ್ಯುಲೆನ್ಸ್‌ ಆಗಮಿಸಿದ್ದು, ರೋಗಿಯನ್ನು ಮಂಗಳೂರಿನ ಕೆಎಂಸಿಗೆ ಸಾಗಿಸಬೇಕು ಎನ್ನುವಷ್ಟರಲ್ಲಿ  ವಾಹನ ಕೆಟ್ಟು ನಿಂತಿತ್ತು. ಬಳಿಕ ಮತ್ತೆ ಖಾಸಗಿ ವಾಹನಕ್ಕೆ ವರ್ಗಾಯಿಸಿ, ಸಾಗಿಸುವ ವೇಳೆ ಅವರು ಮೃತಪಟ್ಟಿದ್ದರು. ಇದು ಆಂಬ್ಯುಲೆನ್ಸ್‌ನಂತಹ ತುರ್ತುಸೇವೆಯಲ್ಲೂ ಇರುವ ಅವ್ಯವಸ್ಥೆಗೆ ಕೈಗನ್ನಡಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪಡುಬಿದ್ರಿಗೆ ಪತ್ಯೇಕ ಆಂಬ್ಯುಲೆನ್ಸ್‌ಗೆ ಸಂಬಂಧಪಟ್ಟವರು ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆ ಕೇಳಿಬಂದಿದೆ.  

ತುರ್ತು ಸೇವೆಗೆ ಅಗತ್ಯ
ತುರ್ತು ಸಂದರ್ಭ ಖಾಸಗಿ ವಾಹನಗಳನ್ನೇ ನೆಚ್ಚಿಕೊಳ್ಳುವಂತಾಗಿದೆ. ಸರಕಾರಿ 108 ಆ್ಯಂಬ್ಯುಲೆನ್ಸ್‌ ಸೇವೆ ಅಗತ್ಯವಿದ್ದು ಕೂಡಲೇ ಪಡುಬಿದ್ರಿಯಲ್ಲಿ ಶುರುವಾಗಬೇಕು. 

– ಶ್ರೀಕಾಂತ್‌ ಪಡುಬಿದ್ರಿ, ಕ್ಲಿನಿಕಲ್‌ ಲ್ಯಾಬ್‌ ಮಾಲಕ

– ಆರಾಮ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.