ಪಡುಕೋಣೆ : ಪರವಾನಿಗೆಯಿದ್ದರೂ ಸರಕಾರಿ ಬಸ್‌ ಬರುತ್ತಿಲ್ಲ


Team Udayavani, Feb 3, 2020, 5:13 AM IST

0202KDPP1

ಹೆಮ್ಮಾಡಿ: ಪಡುಕೋಣೆ, ನಾಡ ಗುಡ್ಡೆಯಂಗಡಿ, ಹರ್ಕೂರು ಮೂರು ಕೈ ಭಾಗಕ್ಕೆ ಈ ಹಿಂದೆ ಸರಕಾರಿ ಬಸ್‌ ನೀಡಲಾಗಿದ್ದರೂ, ಈಗ ಮಾತ್ರ ಈ ಊರಿಗೆ ಬಸ್‌ ಬರುತ್ತಿಲ್ಲ. ಇನ್ನು ಹಿಂದೆ ಇದ್ದ ಖಾಸಗಿ ಬಸ್‌ಗಳ ಸಂಖ್ಯೆಯಲ್ಲಿಯೂ ಗಣನೀಯ ಕಡಿಮೆಯಾಗಿದ್ದು, ಕೆಲವೇ ಕೆಲವು ಬಸ್‌ಗಳು ಮಾತ್ರ ಬರುತ್ತಿವೆ. ಈ ಪ್ರದೇಶಗಳಿಂದ ಕುಂದಾಪುರಕ್ಕೆ ಶಾಲಾ- ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಪ್ರತಿ ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ.

3 ವರ್ಷಗಳ ಹಿಂದೆ ರಾಜ್ಯ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಾಗಿದ್ದ ಕೆ. ಗೋಪಾಲ ಪೂಜಾರಿಯವರು ಪಡುಕೋಣೆ – ನಾಡಗುಡ್ಡೆಯಂಗಡಿ – ಹರ್ಕೂರು ಮೂರುಕೈ – ಕಟ್ಟಿನಮಕ್ಕಿ – ಬಂಟ್ವಾಡಿ ಮೂಲಕವಾಗಿ ಕುಂದಾಪುರ ಮಾರ್ಗಕ್ಕೆ ಸರಕಾರಿ ಬಸ್‌ ನೀಡಿದ್ದರು. ಆದರೆ ಕಳೆದ 2 ವರ್ಷಗಳಿಂದ ಇಲ್ಲಿಗೆ ಆ ಸರಕಾರಿ ಬಸ್‌ ಬರುತ್ತಿಲ್ಲ. ಇದರಿಂದ ಕುಂದಾಪುರ ಕಡೆಗೆ ಹೋಗುವ ಜನ ಸಾಮಾನ್ಯರು, ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಖಾಸಗಿ ಬಸ್‌ ಕಡಿಮೆ
ಪಡುಕೋಣೆ, ನಾಡಗುಡ್ಡೆಯಂಗಡಿ, ಹಡವು, ಬಡಾಕೆರೆ, ಸೇನಾಪುರ ಭಾಗಕ್ಕೆ ಹಿಂದೆ ಪ್ರತಿ ದಿನ 10-12 ಖಾಸಗಿ ಬಸ್‌ಗಳು ಬರುತ್ತಿದ್ದವು. ಆದರೆ ಈಗ ಕೇವಲ 3-4 ಬಸ್‌ಗಳು ಮಾತ್ರ ಬರುತ್ತಿವೆ. ಹಿಂದೆ 30 ಟ್ರಿಪ್‌ ಬಸ್‌ ಇದ್ದ ಮಾರ್ಗದಲ್ಲಿ ಈಗ ಬರೀ 10 ಟ್ರಿಪ್‌ ಕೂಡ ಇಲ್ಲ ಎನ್ನುವುದು ಊರವರ ಆರೋಪ.

ನೇತಾಡುವ ಅನಿವಾರ್ಯತೆ
ಬೆಳಗ್ಗೆ ಸಂಜೆ ವೇಳೆ ಈ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ಕೆಲಸಕ್ಕೆ, ಜನ, ಶಾಲಾ- ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಫುಟ್‌ಬೋರ್ಡ್‌ಗಳಲ್ಲಿ ನೇತಾಡಿಕೊಂಡು ಹೋಗುತ್ತಾರೆ.

ಸರಕಾರಿ ಬಸ್‌ ನೀಡಲಿ
ಪಡುಕೋಣೆ, ನಾಡಗುಡ್ಡೆಯಂಗಡಿ ಭಾಗಕ್ಕೆ ಈ ಹಿಂದೆ ಹತ್ತಾರು ಬಸ್‌ಗಳು ಬರುತ್ತಿದ್ದವು. ಆದರೆ ಈಗ ಈ ಹೊಂಡಗಳಿಂದ ಕೂಡಿದ ರಸ್ತೆಯಿಂದಾಗಿ ಪರ್ಮಿಟ್‌ ಇದ್ದರೂ ಬಸ್‌ ಬರುತ್ತಿಲ್ಲ. ಒಂದು ಸರಕಾರಿ ಬಸ್‌ ಕೂಡ ಬರುತ್ತಿಲ್ಲ. ಈಗ ಕೆಲವೇ ಬಸ್‌ಗಳು ಇರುವುದರಿಂದ, ಅದು ಕೂಡ ಸಣ್ಣ ಬಸ್‌ ಆಗಿರುವುದರಿಂದ ಎಲ್ಲ ಬಸ್‌ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ತುಂಬಿದ್ದು, ನೇತಾಡಿಕೊಂಡು ಹೋಗುತ್ತಿದ್ದಾರೆ. ಈ ಮಾರ್ಗದಲ್ಲಿ ಬೆಳಗ್ಗೆ ಹಾಗೂ ಸಂಜೆ ಸರಕಾರಿ ಬಸ್‌ ನೀಡಲಿ.
-ಅರವಿಂದ ಪೂಜಾರಿ,
ಹೊಯ್ಸಳ ಕಲ್ಚರಲ್‌ ಟ್ರಸ್ಟ್‌ ನಾಡ

ಸೂಕ್ತ ಕ್ರಮ
ಕೆಲವು ಪರವಾನಿಗೆಯಿದ್ದರೂ, ಅದು ಟೈಮಿಂಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಈ ಬಗ್ಗೆ ಮಾಹಿತಿ ತಿಳಿದುಕೊಂಡು, ವಿಚಾರಿಸಲಾಗುವುದು. ಎಲ್ಲೆಲ್ಲ ಸ್ಥಗಿತ ಗೊಂಡಿದೆ. ಆ ಬಗ್ಗೆ ಶೀಘ್ರ ಮಾಹಿತಿ ಪಡೆಯಲಾಗುವುದು. ಆ ಭಾಗದ ಜನರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮಕ್ಕೆ ಪ್ರಯತ್ನಿಸಲಾಗುವುದು.
-ರಾಮಕೃಷ್ಣ ರೈ ಪ್ರಾದೇಶಿಕ ಸಾರಿಗೆ ಆಯುಕ್ತರು, ಉಡುಪಿ

ಬಸ್‌ ಮೊಟಕು
ಪಡುಕೋಣೆಯಿಂದ ಗುಡ್ಡೆ
ಯಂಗಡಿಯಾಗಿ ಹಕೂìರು ಮೂರುಕೈ ವರೆಗಿನ 4 ಕಿ.ಮೀ. ರಸ್ತೆಯ ದುಃಸ್ಥಿತಿಯಿಂದಾಗಿ ಈ ಮಾರ್ಗ ದಲ್ಲಿ ಬರುತ್ತಿದ್ದ ಬಸ್‌ಗಳು ಒಂದೊಂ ದಾಗಿಯೇ ಸಂಚಾರವನ್ನು ಮೊಟಕು ಗೊಳಿಸುತ್ತಾ ಬಂದಿವೆ. ಆದರೆ ಈಗ ರಸ್ತೆ ಕಾಮಗಾರಿಗೆ ಅನುದಾನ ಮಂಜೂರಾಗಿ, ಕಾಮಗಾರಿಯೂ ಆರಂಭವಾಗು ತ್ತಿದ್ದು, ಇನ್ನಾದರೂ ಈ ಭಾಗದಲ್ಲಿ ಹಿಂದೆ ಬರುತ್ತಿದ್ದ ಬಸ್‌ಗಳ ಸಂಚಾರ ಮತ್ತೆ ಆರಂಭವಾಗಲಿ ಎನ್ನುವುದು ಊರವರ ಆಗ್ರಹವಾಗಿದೆ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.