ಪಲಿಮಾರು ಅಣೆಕಟ್ಟು ಬಳಿ ನೂರಾರು ಎಕ್ರೆ ಕೃಷಿ ಭೂಮಿ ಜಲಾವೃತ

ಅಣೆಕಟ್ಟು ಹೊರ ಹರಿವಿನ ಜಾಗದಲ್ಲಿ ಹೂಳು ತೆಗೆಯದೆ ಸಮಸ್ಯೆ

Team Udayavani, Dec 14, 2020, 1:04 PM IST

ಪಲಿಮಾರು ಅಣೆಕಟ್ಟು  ಬಳಿ ನೂರಾರು ಎಕ್ರೆ ಕೃಷಿ ಭೂಮಿ ಜಲಾವೃತ

ಪಡುಬಿದ್ರಿ, ಡಿ. 13: ನೂರಾರು ಎಕರೆ ಪ್ರದೇಶಕ್ಕೆ ನೀರೊದಗಿಸಲು ಸಣ್ಣ ನೀರಾವರಿ ಇಲಾಖೆ ಮೂಲಕ ಸುಮಾರು 7.5 ಕೋಟಿ ರೂ. ವೆಚ್ಚದಲ್ಲಿ ಪಲಿಮಾರಿನಲ್ಲಿ ಶಾಂಭವಿ ನದಿಗೆ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಿಸಲಾಗಿದೆ. ಆದರೆ ನೀರ ಹೊರ ಹರಿವಿನ ಜಾಗದಲ್ಲಿ ಹೂಳು ತುಂಬಿದ್ದು ಇದರಿಂದ ನೂರಾರು ಎಕರೆ ಕೃಷಿಭೂಮಿ ಜಲಾವೃತವಾಗಿವೆ. ಜತೆಗೆ ಗ್ರಾಮಗಳಿಗೆ ಮುಳುಗಡೆ ಭೀತಿ ಉಂಟಾಗಿದೆ.

ಹೊರಹರಿವು ಪ್ರದೇಶದಲ್ಲಿ ಹೂಳು :

ಸುಮಾರು 600 ಎಕರೆ ಪ್ರದೇಶಕ್ಕೆ ನೀರೊದಗಿಸುವ ಸಲುವಾಗಿ 25 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ನಿರ್ಮಿಸಿದ್ದ ಅಣೆಕಟ್ಟಿನ ಕಾಮಗಾರಿ ದೋಷದಿಂದ ಕೂಡಿದೆ. ಹಲವಾರು ಬಾರಿ ದುರಸ್ತಿ ಮಾಡಿದ್ದರೂ ಸಮಸ್ಯೆಗೆ ಮುಕ್ತಿ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಹಳೆಯ ಅಣೆಕಟ್ಟೆ ಬಳಿಯಲ್ಲಿಯೇ ಸಣ್ಣ ನೀರಾವರಿ ಇಲಾಖೆ ಮೂಲಕ ವರ್ಷದ ಹಿಂದಷ್ಟೇ ನೂತನ ಅಣೆಕಟ್ಟನ್ನು ನಿರ್ಮಿಸಲಾಗಿತ್ತು. ಹದಿನೈದು ದಿನಗಳ ಹಿಂದೆ ಈ ಅಣೆಕಟ್ಟಿಗೆ ಹಲಗೆ ಅಳವಡಿಸುವ ಕಾರ್ಯ ಮಾಡಲಾಗಿತ್ತು. ಪರಿಣಾಮ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಆದರೆ ನೀರಿನ‌ ಹೊರ ಹರಿವಿಗೆ ಸಂಪರ್ಕಿಸುವ ತೋಡುಗಳು ಹೂಳು ತುಂಬಿವೆ. ಇದರ ಪರಿಣಾಮ ಉಡುಪಿ ಜಿಲ್ಲೆಯ ಪಲಿಮಾರು, ಇನ್ನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಳ್ಕುಂಜೆ ಗ್ರಾಮಗಳ ನೂರಾರು ಎಕರೆ ಪ್ರದೇಶಗಳು ಜಲಾವೃತವಾಗಿವೆ.

ಕಾಲುವೆ ಸ್ಲ್ಯಾಬ್ ಕುಸಿತ :

ಈಗ ನಿರ್ಮಾಣವಾಗಿರುವ ಅಣೆಕಟ್ಟನ್ನೂ ಹಿಂದಿನ ಅಣೆಕಟ್ಟಿನಷ್ಟೇ 7.5 ಮೀಟರ್‌ವರೆಗೆ ಎತ್ತರಿಸಿ ಅಣೆಕಟ್ಟೆಯ ನಾಲ್ಕು ಕಡೆ 100 ಮೀ. ವ್ಯಾಪ್ತಿಯಲ್ಲಿ ನದಿಗೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಳ್ಕುಂಜೆಗ್ರಾಮಕ್ಕೆ ನೀರು ಪೂರೈಸಲು ಕಿರು ಕಾಲುವೆಯೊಂದನ್ನು ನಿರ್ಮಿಸಲಾಗಿತ್ತು. ಯೋಜನೆ ಪೂರ್ಣಗೊಂಡ ಕೆ‌ಲವೇ ತಿಂಗಳಿನಲ್ಲಿ ಆ ಕಾಲುವೆ ಸ್ಲ್ಯಾಬ್ ಕುಸಿದು ಹಾನಿಯಾಗಿರುವುದು ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸುವಂತಿದೆ. ಅಣೆಕಟ್ಟು ನಿರ್ಮಾಣ ಸಂದರ್ಭದಲ್ಲಿಯೇ ಕೃಷಿ ಪ್ರದೇಶಗಳಿಂದ ನೀರು ಸರಾಗವಾಗಿ ಹರಿಯುವಂತೆ ಇರುವ ತೋಡುಗಳ ಹೂಳೆತ್ತಲು ಅಧಿಕಾರಿಗಳು ಗಮನ ನೀಡಬೇಕು ಎನ್ನುವುದು ಇಲ್ಲಿನವರ ಬೇಡಿಕೆಯಾಗಿದೆ.

ಜಲಾವೃತ ಕೃಷಿ ಭೂಮಿ :

ಅಣೆಕಟ್ಟಿನ ನೀರು ನುಗ್ಗಿದ ಪರಿಣಾಮ ಕೃಷಿ ಭೂಮಿ ಮುಳುಗಡೆಯಾಗಿದೆ. ತರಕಾರಿ ಗಿಡಗಳು ಕೊಳೆತು ಹೋಗಿವೆ. ನಾಲ್ಕು ಬಾವಿಗಳ ನೀರು ಮಲಿನಗೊಂಡು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ರೈತರ ಬವಣೆ ನಿರಂತರವಾಗಿದ್ದು ಕೇಳುವವರಿಲ್ಲವಾಗಿದೆ. ಮಳೆಗಾಲದಲ್ಲಿ ನೆರೆಯಿಂದಾಗಿ ಭತ್ತದ ಕೃಷಿ ಮಾಡ ಲಾಗಿಲ್ಲ. ಈಗ ಸುಗ್ಗಿ ಬೆಳೆಯನ್ನೂ ಬೆಳೆಯಲಾಗುತ್ತಿಲ್ಲ. ಕೃಷಿಕರು ಅತಂತ್ರರಾಗಿದ್ದಾರೆ. ಜಾನುವಾರುಗಳ ಮೇವಿಗೂ ತತ್ವಾರ ಉಂಟಾಗಿದೆ. ಈ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಹಿಂಗಾರು ಕೃಷಿ ಕಷ್ಟ :

ಅಣೆಕಟ್ಟಿನ ಹಲಗೆ ಅಳವಡಿಕೆಯಿಂದ ಬಳ್ಕುಂಜೆ ಭಾಗದ ಕರ್ನಿರೆ, ಉಳೆಪಾಡಿ, ಳ್ಕುಂಜೆ  ಪ್ರದೇಶಗಳ ಸುಮಾರು 25 ಎಕರೆ ಕೃಷಿಭೂಮಿ ಜಲಾವೃತವಾಗಿದೆ. ಮೇಲ್ಮಟ್ಟದಲ್ಲಿ ನೀರಿಲ್ಲದಿದ್ದರೂ ಭೂಮಿಯಲ್ಲಿ ಒರೆತ ಹೆಚ್ಚಾಗಿ ಹಿಂಗಾರು ಕೃಷಿ ಮಾಡುವುದು ಕಷ್ಟಸಾಧ್ಯವಾಗುತ್ತಿದೆ ಎಂದು ಪ್ರಗತಿಪರ ಕೃಷಿಕ ಉಳೆಪಾಡಿಯ ರಿಚರ್ಡ್‌ ಡಿಸೋಜಾ ಹೇಳುತ್ತಾರೆ.

ಅಣೆಕಟ್ಟಿನ ಸಮಸ್ಯೆ ಬಗ್ಗೆ ತಿಳಿದಿದೆ. ಪ್ರತಿ ವರ್ಷ ಜನವರಿ ವರೆಗೆ ಈ ಸಮಸ್ಯೆ ಇದೆ. ಈಗಾಗಲೇ ಕೆಲ ಹಲಗೆಗಳನ್ನು ತೆಗೆಯಲು, ಕಾಲುವೆಯಲ್ಲಿ ನೀರು ಹೊರಬಿಡಲು ಸೂಚಿಸಲಾಗಿದೆ. ಕುಸಿದ ಕಾಲುವೆ ಸ್ಲಾéಬ್‌ ದುರಸ್ತಿ ಮಾಡಲಾಗುವುದು. ಇನ್ನು ಪ್ರತ್ಯೇಕ ಹೂಳೆತ್ತುವಿಕೆಗೆ ಸದ್ಯ ಇಲಾಖೆಯಲ್ಲಿ ಅನುದಾನ ಲಭ್ಯವಿಲ್ಲ. – ಶೇಷಕೃಷ್ಣ ರಾವ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ನೀರಾವರಿ ಇಲಾಖೆ

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.