ಪಳ್ಳಿ ಅಡಪಾಡಿಯಲ್ಲಿ ಮಾತೃಸಂಗಮ
Team Udayavani, Mar 28, 2023, 5:30 AM IST
ಬೆಳ್ಮಣ್: ಶ್ರದ್ಧೆಯಿಂದ ಮಾಡಿದ ಪೂಜೆ, ಸೇವೆಗಳು ಫಲ ನೀಡುತ್ತವೆ. ಅಚಲ ಭಕ್ತಿಯಿಂದ ಭಗವಂತನನ್ನು ಪ್ರಾರ್ಥಿಸಿದರೆ ಸಂಕಷ್ಟಗಳು ನಿವಾರಣೆಯಾಗುತ್ತವೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯೀ ಹೇಳಿದರು.
ಅವರು ರವಿವಾರ ಶ್ರೀಕ್ಷೇತ್ರ ಅಡಪಾಡಿ ಶ್ರೀ ಉಮಾಮಹೇಶ್ವರ, ಶ್ರೀ ದುರ್ಗಾಪರಮೇಶ್ವರೀ ದೇಗುಲದ ಪುರಾತನ ಆಲಡೆ ಸಾನ್ನಿಧ್ಯಗಳ ಪ್ರತಿಷ್ಠಾಪನೆಯ ಪ್ರಯುಕ್ತ ನಡೆದ ಬ್ರಹ್ಮಕಲಶೋತ್ಸವ ಹಾಗೂ ಸಹಸ್ರ ಚಂಡಿಕಾ ಮಹಾಯಾಗದ ಸಂದರ್ಭ “ಮಾತೃ ಸಂಗಮ’ದಲ್ಲಿ ಆಶೀರ್ವಚನ ನೀಡಿದರು.
ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯೆ ಶ್ಯಾಮಲಾ ಕುಂದರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಖರ ಬಾಲವಾಗ್ಮಿ ಹಾರಿಕಾ ಮಂಜುನಾಥ್ ಬೆಂಗಳೂರು, ಉಡುಪಿ ಜಿಲ್ಲಾ ಅಬಕಾರಿ ಉಪಆಯುಕ್ತರಾದ ರೂಪಾ ಎಂ., ಮಣಿಪಾಲ ಕೆಎಂಸಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ| ಅಖೀಲಾ ವಾಸುದೇವ, ಕೆಎಂಸಿಯ ಅಸೋಸಿಯೇಟ್ ಪ್ರೊಫೆಸರ್ ಡಾ| ಅಂಜಲಿ ಸುನಿಲ್, ಡಾ| ರಾಜೇಶ್ವರೀ ಕೊರಡ್ಕಲ್ ಮೂಡುಬೆಳ್ಳೆ, ಡಾ| ಅಂಜಲಿ ಬೋರ್ಕರ್ ಮೂಡುಬೆಳ್ಳೆ, ಮಣಿಪಾಲ ಆರ್ಎಸ್ಬಿ ಮಹಿಳಾ ವೇದಿಕೆಯ ಅಧ್ಯಕ್ಷೆ ಗೀತಾ ಎಸ್. ನಾಯಕ್ ಅಂಬಲಪಾಡಿ, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷೆ ಗೀತಾ ವಾಗ್ಲೆ ಬಂಟಕಲ್ಲು, ತಾ.ಪಂ. ಮಾಜಿ ಸದಸ್ಯೆ ವಿದ್ಯಾ ಎಂ. ಸಾಲಿಯಾನ್ ಪಳ್ಳಿ ಮುಖ್ಯ ಅತಿಥಿಗಳಾಗಿದ್ದರು.
ಕ್ಷೇತ್ರದ ಸುಮಂಗಲಾ ಪುಂಡಲೀಕ ನಾಯಕ್ ಅತಿಥಿಗಳನ್ನು ಗೌರವಿಸಿದರು. ಮಲ್ಲಿಕಾ ರೂಪೇಶ್ ಸ್ವಾಗತಿಸಿದರು. ಸಂಗೀತಾ ಕುಲಾಲ್ ನಿರೂಪಿಸಿದರು. ಅಕ್ಷಯಾ ಅರುಣ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ