ಗಮನ ಸೆಳೆಯಲಿದೆ ಪಲಿಮಾರು ಪುರಪ್ರವೇಶ “ಮೆರವಣಿಗೆ’


Team Udayavani, Jan 1, 2018, 3:24 PM IST

01-34.jpg

ಉಡುಪಿ: ಜ. 18ರಂದು ಪರ್ಯಾಯ ಪೀಠಾರೋಹಣ ಮಾಡಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಜ. 3ರಂದು ಪುರಪ್ರವೇಶ ಮಾಡಲಿದ್ದು, ಪುರಪ್ರವೇಶದ ಮರವಣಿಗೆ ಅದ್ದೂರಿಯಾಗಿ ನಡೆಯಲಿದೆ. ಅಂದು 3.30ಕ್ಕೆ ನಗರದ ಜೋಡುಕಟ್ಟೆ ರಸ್ತೆಯಿಂದ ಮೆರವಣಿಗೆ ಪ್ರಾರಂಭವಾಗಲಿದೆ. ದೇಶದ ವಿವಿಧ ರಾಜ್ಯಗಳ ಜಾನಪದ ಕಲಾ ತಂಡಗಳ ಭಾಗವಹಿಸುವಿಕೆ ಮೆರವಣಿಗೆಗೆ ವಿಶೇಷ ಮೆರುಗು ನೀಡಲಿದೆ.

ಮೆರವಣಿಗೆ ಸಾಗಿಬರುವ ಮುಂಭಾಗದಲ್ಲಿ ಬಂಗಾರದ ಪಲ್ಲಕಿ, ಅದರ ಹಿಂದಿನಿಂದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರನ್ನು ಕುಳ್ಳಿರಿಸಿ ಕರೆದುಕೊಂಡು ಬರುವ ಸಿಂಗಾರದ ರಥ ಸಾಗಿಬರಲಿದೆ. ಜತೆಗೆ ಅನೇಕ ಕಲಾಪ್ರಕಾರಗಳು, 500 ಮಂದಿ ಗಣ್ಯರು ಹಾಗೂ 15ರಿಂದ 20 ಸಾವಿರ ಮಂದಿ ಜನರು ಮೆರವಣಿಗೆಯಲ್ಲಿ ಸಾಗಿಬರಲಿದ್ದಾರೆ. 

ಜೋಡುಕಟ್ಟೆಯಿಂದ ಪ್ರಾರಂಭವಾದ ಮೆರವಣಿಗೆ ಡಯಾನ ಸರ್ಕಲ್‌, ಕೆ.ಎಂ. ಮಾರ್ಗ, ಸಂಸ್ಕೃತ ಕಾಲೇಜು, ಕನಕದಾಸ ರಸ್ತೆಯ ಮೂಲಕ ರಥಬೀದಿಗೆ ಸಾಗಿಬರಲಿದೆ. ಅನಂತರ ಸಂಜೆ 6.35ರ ವೇಳೆಗೆ ಶ್ರೀಗಳು ಪುರಪ್ರವೇಶ ಮಾಡಲಿದ್ದಾರೆ.  

3,000 ಕಲಾವಿದರು 75 ಕಲಾ ತಂಡಗಳು 
ದೇಶದ ವಿವಿಧ ರಾಜ್ಯಗಳ ಸುಮಾರು 3,000 ಮಂದಿ ಕಲಾವಿದರ ಕಲಾ ಪ್ರೌಢಿಮೆ ಮೆರವಣಿಗೆಯಲ್ಲಿ ಪ್ರಸ್ತುತಗೊಳ್ಳಲಿದೆ. 75 ಜಾನಪದ ಕಲಾ ತಂಡಗಳ 75 ನಮೂನೆಯ ಕಲಾಪ್ರಕಾರಗಳು ಪ್ರದರ್ಶನಗೊಳ್ಳಲಿದೆ. ತುಳುನಾಡಿನ ಅನೇಕ ಕಲಾವಿದರು ಸಹಿತ ದೇಶದ ಮೂಲೆಮೂಲೆಯ ಕಲಾತಂಡಗಳ ಕಲಾವಿದರು ಹಾಗೂ ಮಣಿಪುರ, ಶ್ರೀಲಂಕಾದ ಕಲಾವಿದರೂ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್‌ ಸಂಸ್ಥೆಯ ಡಾ| ಎಂ. ಮೋಹನ್‌ ಆಳ್ವ ಅವರ ನೇತೃತ್ವದಲ್ಲಿ ಈ ಅದ್ದೂರಿ ಮೆರವಣಿಗೆ ನಡೆಯಲಿದೆ. 

ಪ್ರದರ್ಶನಗೊಳ್ಳಲಿರುವ ಪ್ರಮುಖ ಕಲಾಪ್ರಕಾರಗಳು
ನಂದಿಧ್ವಜ, ಪಕ್ಕಿನಿಶಾನೆ, ಶಂಖ- ಕೊಂಬು, ನಾದಸ್ವರ, ಶಿಲ್ಪಗೊಂಬೆ, ಸೃಷ್ಟಿಗೊಂಬೆ ಬಳಗ, ಚಿಲಿಪಿಲಿ ಗೊಂಬೆ, 32 ತಟ್ಟಿರಾಯ, ಹುಲಿ ವೇಷ ಕುಣಿತ, ನಗಾರಿ, ಹೊನ್ನಾವರ ಹಾಗೂ ಚಿತ್ರದುರ್ಗದ ಬ್ಯಾಂಡ್‌ಸೆಟ್‌, ವೀರಭದ್ರ ಕುಣಿತ, ಪೂಜಾ ಕುಣಿತ, ಮರಗಾಲು, ಕೇರಳದ ದೇವರ ವೇಷ, ಅರ್ಧನಾರೀಶ್ವರ, ಕುಂದಾಪುರದ ಕೊರಗರ ಡೋಲು, ಕೊಂಚಾಡಿ ಚೆಂಡೆ, ಮಹಿಳಾ ಚೆಂಡೆ, ಕೇರಳದ ಚೆಂಡೆ, ಸಿಂಗಾರಿ ಮೇಳ, ಪಂಚವಾದ್ಯ, ತಯ್ಯಂ, ಜಗ್ಗಳಿಕೆ ಮೇಳ, ಸುರತ್ಕಲ್‌ನ ಮುಸಲ್ಮಾನರ ದಪ್ಪು, ಡೊಳ್ಳು ಕುಣಿತ, ತುಳುನಾಡ ವಾದ್ಯ, ಲಂಬಾಣಿ, ಭಜನ ತಂಡಗಳು, ಉತ್ತರ ಕರ್ನಾಟಕದ ಹಗಲು ವೇಷ ಮೊದಲಾದ ಕಲಾ-ಸಾಂಸ್ಕೃತಿಕ ವೈಭವ ಮೆರವಣಿಗೆಯಲ್ಲಿರಲಿದೆ. 

ಪ್ರತಿಯೊಬ್ಬರು ನೋಡಬೇಕಾದುದು
2ನೇ ಬಾರಿಗೆ ಪರ್ಯಾಯ ಸ್ವೀಕಾರ ಮಾಡಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ದೇಶಾದ್ಯಂತ ಸಂಚರಿಸಿ ಪುರಪ್ರವೇಶ ಮಾಡುವಾಗ ಅವರನ್ನು ಅದ್ದೂರಿಯಾಗಿ ಸ್ವಾಗತಿಸುವುದು ನಮ್ಮೆಲ್ಲರ ಕರ್ತವ್ಯ. ಹೀಗಾಗಿ ಶ್ರೀಗಳ ಸ್ವಾಗತದ ಸಂದರ್ಭ ಮೆರವಣಿಗೆಯಲ್ಲಿ ಮನೋರಂಜನೆ ಹೆಚ್ಚಿಸಲು ಸಾಂಸ್ಕೃತಿಕ ತಂಡಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಮ್ಮ ದೇಶದ ಕಲೆ, ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿವೆೆ. ಶಾಲಾ ಮಕ್ಕಳು ಸಹಿತ ವಯೋವೃದ್ಧರು ಕೂಡ ಈ ಕಲಾ ಪ್ರಕಾರಗಳನ್ನು ನೋಡಬೇಕು. ಇದು ಮನೋರಂಜನೆಯ ಜತೆಗೆ ತಿಳಿವಳಿಕೆ ನೀಡಲಿದೆ. 
ಡಾ| ಎಂ. ಮೋಹನ್‌ ಆಳ್ವ, ಮೆರವಣಿಗೆಯ ಉಸ್ತುವಾರಿ

ಜಿವೇಂದ್ರ ಶೆಟ್ಟಿ 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.